Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಶವಾಗಾರವಾಗಿ ನಿರ್ಮಾಣಗೊಂಡ ಸಾರ್ವಜನಿಕ ಉದ್ಯಾನವನ

ಕೊವಿಡ್​ ಸೋಂಕಿಗೆ ಬಲಿಯಾದವರ ಅಂತ್ಯಕ್ರಿಯೆಗೆ ಶವಾಗಾರಕ್ಕಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಆಗ್ನೇಯ ದೆಹಲಿಯಲ್ಲಿ ಸಾರ್ವಜನಿಕ ಉದ್ಯಾನವನವನ್ನು ಶವಾಗಾರವಾಗಿ ಪರಿವರ್ತಿಸಲಾಗಿದೆ.

ದೆಹಲಿಯಲ್ಲಿ ಶವಾಗಾರವಾಗಿ ನಿರ್ಮಾಣಗೊಂಡ ಸಾರ್ವಜನಿಕ ಉದ್ಯಾನವನ
ಶವಾಗಾರವಾಗಿ ಮಾರ್ಪಟ್ಟ ಸಾರ್ವಜನಿಕ ಉದ್ಯಾನವನ
Follow us
shruti hegde
|

Updated on: Apr 26, 2021 | 1:42 PM

ದೆಹಲಿ: ಪ್ರತಿನಿತ್ಯ ಕೊವಿಡ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದಾಗಿ ಸಾವಿನ ಸಂಖ್ಯೆಯೂ ಕೂಡಾ ಹೆಚ್ಚುತ್ತಿದೆ. ಬೇರೆ ವಿಧಿಯಿಲ್ಲದೇ ಸಾರ್ವಜನಿಕ ಉದ್ಯಾನವನಗಳನ್ನು ಶಾವಾಗಾರವಾಗಿ ನಿರ್ಮಿಸುವ ಪರಿಸ್ಥಿತಿ ಎದುರಾಗಿದೆ. ಕೊವಿಡ್​ ಸೋಂಕಿಗೆ ಬಲಿಯಾದವರ ಅಂತ್ಯಕ್ರಿಯೆಗೆ ಶವಾಗಾರಕ್ಕಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಆಗ್ನೇಯ ದೆಹಲಿಯಲ್ಲಿ ಸಾರ್ವಜನಿಕ ಉದ್ಯಾನವನವನ್ನು ಶವಾಗಾರವಾಗಿ ಪರಿವರ್ತಿಸಲಾಗಿದೆ.

ಶನಿವಾರ 27 ಕೊವಿಡ್​ ಸೋಂಕಿನಿಂದ ಸಾವಿಗೀಡಾದ ದೇಹಗಳು ಇದ್ದವು. ಭಾನುವಾರ ಸಂಜೆ 5 ಗಂಟೆಯವರೆಗೆ 30ಕ್ಕಿಂತಲೂ ಹೆಚ್ಚು ದೇಹಗಳು ಬಂದಿದ್ದವು. ಕೊವಿಡ್​ ಸಂಬಂಧಿಸಿದ ಸಾವುಗಳು ದಿನೇ ದಿನೇ ಹೆಚ್ಚುತ್ತಿವೆ. ನಾವು ಸ್ಥಳಾವಕಾಶವನ್ನು ಕಡಿಮೆ ಹೊಂದಿದ್ದೇವೆ. 20 ಹೊಸ ಪ್ಲಾಟ್​ಫಾರ್ಮ್​ಗಳೊಂದಿಗೆ ಪರಿಸ್ಥಿತಿಯನ್ನು ಉತ್ತಮವಾಗಿ ನಿರ್ವಹಿಸುವ ಭರವಸೆ ನಮಗಿದೆ. ಪ್ರಸ್ತುತದಲ್ಲಿ ಬೆಳಿಗ್ಗೆ 6ರಿಂದ ಮಧ್ಯರಾತ್ರಿಯವರೆಗೆ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ಸರಾಯ್​ ಕೇಲ್​ ಖಾನ್​ ಸ್ಮಶಾನದ ಕೆಲಸಗಾರರೊಬ್ಬರು ಹೇಳಿದ್ದಾರೆ.

ಉದ್ಯಾನವನದ ಉಳಿದ ಭಾಗಗಳಲ್ಲಿ ಇನ್ನೂ 50 ಪ್ಲಾಟ್​ಫಾರ್ಮ್​ಗಳು ಬರಬಹುದು ಎಂದು ಫ್ಲಾಟ್​ಫಾರ್ಮ್​ಗಳನ್ನು ನಿರ್ಮಿಸಲು ದಕ್ಷಿಣ ನಾಗರಿಕ ಸಂಸ್ಥೆಯಿಂದ ನಿಯೋಜಿಸಲ್ಪಟ್ಟ ಗುತ್ತಿಗೆದಾರ ಶ್ಯಾಮ್​ ಕುಮಾರ್​ ಹೇಳಿದ್ದಾರೆ. ಶವಸಂಸ್ಕಾರದ ಮೈದಾನದಲ್ಲಿ ಸ್ಥಳಕ್ಕಾಗಿ ಜನರು ಪರದಾಡುತ್ತಿದ್ದಾರೆ. ಅನೇಕರು ಅಂತಿಮ ವಿಧಿವಿಧಾನಗಳನ್ನು ನಿರ್ವಹಿಸಲು ಆರು ಗಂಟೆಗೂ ಹೆಚ್ಚು ಕಾಯಬೇಕಾದ ಸಂದರ್ಭ ಎದುರಾಗಿದೆ ಎಂದು ತಮ್ಮ ಸೋದರ ಮಾವನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಸುರೇಶ್​ ಭಾರತಿ ಹೇಳಿಕೆ ನೀಡಿದ್ದಾರೆ. ದೆಹಲಿಯ ಆಸ್ಪತ್ರೆಯಿಂದ ಮೂರು ಶವಗಳನ್ನು ಶವಾಗಾರಕ್ಕೆ ತಂದ ಆಂಬ್ಯಲೆನ್ಸ್​ ಚಾಲಕ ಸಮತೋಷ್​ ಕುಮಾರ್​, ದೆಹಲಿಯ ಇತರ ಎಲ್ಲಾ ಶವಾಗಾರಗಳಲ್ಲಿಯೂ ಪರಿಸ್ಥಿತಿ ಹಿಗೆಯೇ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಕೊವಿಡ್ ಪ್ರಕರಣ ಹೆಚ್ಚಳ, ಮೇ 3ರವರೆಗೆ ಲಾಕ್​ಡೌನ್ ವಿಸ್ತರಣೆ: ಅರವಿಂದ್ ಕೇಜ್ರಿವಾಲ್

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!