AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಶವಾಗಾರವಾಗಿ ನಿರ್ಮಾಣಗೊಂಡ ಸಾರ್ವಜನಿಕ ಉದ್ಯಾನವನ

ಕೊವಿಡ್​ ಸೋಂಕಿಗೆ ಬಲಿಯಾದವರ ಅಂತ್ಯಕ್ರಿಯೆಗೆ ಶವಾಗಾರಕ್ಕಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಆಗ್ನೇಯ ದೆಹಲಿಯಲ್ಲಿ ಸಾರ್ವಜನಿಕ ಉದ್ಯಾನವನವನ್ನು ಶವಾಗಾರವಾಗಿ ಪರಿವರ್ತಿಸಲಾಗಿದೆ.

ದೆಹಲಿಯಲ್ಲಿ ಶವಾಗಾರವಾಗಿ ನಿರ್ಮಾಣಗೊಂಡ ಸಾರ್ವಜನಿಕ ಉದ್ಯಾನವನ
ಶವಾಗಾರವಾಗಿ ಮಾರ್ಪಟ್ಟ ಸಾರ್ವಜನಿಕ ಉದ್ಯಾನವನ
shruti hegde
|

Updated on: Apr 26, 2021 | 1:42 PM

Share

ದೆಹಲಿ: ಪ್ರತಿನಿತ್ಯ ಕೊವಿಡ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದಾಗಿ ಸಾವಿನ ಸಂಖ್ಯೆಯೂ ಕೂಡಾ ಹೆಚ್ಚುತ್ತಿದೆ. ಬೇರೆ ವಿಧಿಯಿಲ್ಲದೇ ಸಾರ್ವಜನಿಕ ಉದ್ಯಾನವನಗಳನ್ನು ಶಾವಾಗಾರವಾಗಿ ನಿರ್ಮಿಸುವ ಪರಿಸ್ಥಿತಿ ಎದುರಾಗಿದೆ. ಕೊವಿಡ್​ ಸೋಂಕಿಗೆ ಬಲಿಯಾದವರ ಅಂತ್ಯಕ್ರಿಯೆಗೆ ಶವಾಗಾರಕ್ಕಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಆಗ್ನೇಯ ದೆಹಲಿಯಲ್ಲಿ ಸಾರ್ವಜನಿಕ ಉದ್ಯಾನವನವನ್ನು ಶವಾಗಾರವಾಗಿ ಪರಿವರ್ತಿಸಲಾಗಿದೆ.

ಶನಿವಾರ 27 ಕೊವಿಡ್​ ಸೋಂಕಿನಿಂದ ಸಾವಿಗೀಡಾದ ದೇಹಗಳು ಇದ್ದವು. ಭಾನುವಾರ ಸಂಜೆ 5 ಗಂಟೆಯವರೆಗೆ 30ಕ್ಕಿಂತಲೂ ಹೆಚ್ಚು ದೇಹಗಳು ಬಂದಿದ್ದವು. ಕೊವಿಡ್​ ಸಂಬಂಧಿಸಿದ ಸಾವುಗಳು ದಿನೇ ದಿನೇ ಹೆಚ್ಚುತ್ತಿವೆ. ನಾವು ಸ್ಥಳಾವಕಾಶವನ್ನು ಕಡಿಮೆ ಹೊಂದಿದ್ದೇವೆ. 20 ಹೊಸ ಪ್ಲಾಟ್​ಫಾರ್ಮ್​ಗಳೊಂದಿಗೆ ಪರಿಸ್ಥಿತಿಯನ್ನು ಉತ್ತಮವಾಗಿ ನಿರ್ವಹಿಸುವ ಭರವಸೆ ನಮಗಿದೆ. ಪ್ರಸ್ತುತದಲ್ಲಿ ಬೆಳಿಗ್ಗೆ 6ರಿಂದ ಮಧ್ಯರಾತ್ರಿಯವರೆಗೆ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ಸರಾಯ್​ ಕೇಲ್​ ಖಾನ್​ ಸ್ಮಶಾನದ ಕೆಲಸಗಾರರೊಬ್ಬರು ಹೇಳಿದ್ದಾರೆ.

ಉದ್ಯಾನವನದ ಉಳಿದ ಭಾಗಗಳಲ್ಲಿ ಇನ್ನೂ 50 ಪ್ಲಾಟ್​ಫಾರ್ಮ್​ಗಳು ಬರಬಹುದು ಎಂದು ಫ್ಲಾಟ್​ಫಾರ್ಮ್​ಗಳನ್ನು ನಿರ್ಮಿಸಲು ದಕ್ಷಿಣ ನಾಗರಿಕ ಸಂಸ್ಥೆಯಿಂದ ನಿಯೋಜಿಸಲ್ಪಟ್ಟ ಗುತ್ತಿಗೆದಾರ ಶ್ಯಾಮ್​ ಕುಮಾರ್​ ಹೇಳಿದ್ದಾರೆ. ಶವಸಂಸ್ಕಾರದ ಮೈದಾನದಲ್ಲಿ ಸ್ಥಳಕ್ಕಾಗಿ ಜನರು ಪರದಾಡುತ್ತಿದ್ದಾರೆ. ಅನೇಕರು ಅಂತಿಮ ವಿಧಿವಿಧಾನಗಳನ್ನು ನಿರ್ವಹಿಸಲು ಆರು ಗಂಟೆಗೂ ಹೆಚ್ಚು ಕಾಯಬೇಕಾದ ಸಂದರ್ಭ ಎದುರಾಗಿದೆ ಎಂದು ತಮ್ಮ ಸೋದರ ಮಾವನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಸುರೇಶ್​ ಭಾರತಿ ಹೇಳಿಕೆ ನೀಡಿದ್ದಾರೆ. ದೆಹಲಿಯ ಆಸ್ಪತ್ರೆಯಿಂದ ಮೂರು ಶವಗಳನ್ನು ಶವಾಗಾರಕ್ಕೆ ತಂದ ಆಂಬ್ಯಲೆನ್ಸ್​ ಚಾಲಕ ಸಮತೋಷ್​ ಕುಮಾರ್​, ದೆಹಲಿಯ ಇತರ ಎಲ್ಲಾ ಶವಾಗಾರಗಳಲ್ಲಿಯೂ ಪರಿಸ್ಥಿತಿ ಹಿಗೆಯೇ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಕೊವಿಡ್ ಪ್ರಕರಣ ಹೆಚ್ಚಳ, ಮೇ 3ರವರೆಗೆ ಲಾಕ್​ಡೌನ್ ವಿಸ್ತರಣೆ: ಅರವಿಂದ್ ಕೇಜ್ರಿವಾಲ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ