AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2026: ಜನವರಿ 28ರಿಂದ ಸಂಸತ್ ಅಧಿವೇಶನ ಆರಂಭ; ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ

Union Budget Session 2026: ಈ ವರ್ಷದ ಸಂಸತ್ ಬಜೆಟ್ ಅಧಿವೇಶನ ಜನವರಿ 28ರಿಂದ ಆರಂಭವಾಗಲಿದೆ. 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾಗುವುದು. ಇದಕ್ಕೂ ಮೊದಲು, ಆರ್ಥಿಕ ಸಮೀಕ್ಷೆಯ ವರದಿಯನ್ನು ಜನವರಿ 29ರಂದು ಬಿಡುಗಡೆ ಮಾಡಲಾಗುತ್ತದೆ. ಈ ಅಧಿವೇಶನದಲ್ಲಿ ಬಜೆಟ್ ಚರ್ಚೆಗಳು, ಸಬ್ಸಿಡಿ ಬೇಡಿಕೆಗಳು ಮತ್ತು ಪ್ರಮುಖ ಆರ್ಥಿಕ ನೀತಿಗಳ ಕುರಿತು ವಿವರವಾದ ಚರ್ಚೆಗಳು ನಡೆಯಲಿವೆ. ಸಾರ್ವಜನಿಕರು, ವ್ಯಾಪಾರಿಗಳು, ಕೈಗಾರಿಕೋದ್ಯಮಿಗಳು ಮತ್ತು ತೆರಿಗೆದಾರರು ಎಲ್ಲರೂ ಈ ಬಜೆಟ್ ಬಗ್ಗೆ ಬಹಳ ನಿರೀಕ್ಷೆಯಿಟ್ಟುಕೊಂಡಿದ್ದಾರೆ.

Union Budget 2026: ಜನವರಿ 28ರಿಂದ ಸಂಸತ್ ಅಧಿವೇಶನ ಆರಂಭ; ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ
Budget Session
ಸುಷ್ಮಾ ಚಕ್ರೆ
|

Updated on: Jan 09, 2026 | 9:10 PM

Share

ನವದೆಹಲಿ, ಜನವರಿ 9: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28ರಂದು ಆರಂಭವಾಗಲಿದ್ದು, ಫೆಬ್ರವರಿ 1ರಂದು ಕೇಂದ್ರ ಬಜೆಟ್ 2026 (Union Budget 2026) ಮಂಡನೆಯಾಗಲಿದೆ. ಈ ಕುರಿತು ಮಾಹಿತಿಯನ್ನು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಇಂದು ಬಿಡುಗಡೆ ಮಾಡಿದೆ. ಬಜೆಟ್ ಅಧಿವೇಶನವು ಜನವರಿ 28ರಂದು ಪ್ರಾರಂಭವಾಗಿ ಏಪ್ರಿಲ್ 2ರವರೆಗೆ ಮುಂದುವರಿಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಅಧಿವೇಶನಕ್ಕೆ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ. ಅವರು ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಜೆಟ್ ಅಧಿವೇಶನದ ಮೊದಲ ಹಂತವು ಫೆಬ್ರವರಿ 13ರಂದು ಮುಕ್ತಾಯಗೊಳ್ಳಲಿದ್ದು, ಎರಡನೇ ಹಂತಕ್ಕೆ ಮಾರ್ಚ್ 9ರಂದು ಸಂಸತ್ ಸಭೆ ಸೇರಲಿದೆ. ಕೇಂದ್ರ ಸರ್ಕಾರವು 2025-26 ರ ಆರ್ಥಿಕ ಸಮೀಕ್ಷೆಯನ್ನು ಜನವರಿ 29ರಂದು ಮಂಡಿಸಲಿದೆ. ಕೇಂದ್ರ ಬಜೆಟ್ 2026-27 ಅನ್ನು ಫೆಬ್ರವರಿ 1ರಂದು ಮಂಡಿಸಲಾಗುವುದು.

ಇದನ್ನೂ ಓದಿ: ಬರಲಿದೆ ಹೊಸ ಆದಾಯ ತೆರಿಗೆ ಕಾಯ್ದೆ; ಬಜೆಟ್​ನಲ್ಲಿ ಘೋಷಣೆ, ಏ. 1ರಿಂದ ಜಾರಿ

ಈ ಬಜೆಟ್ ಅಧಿವೇಶನದಲ್ಲಿ ಬಜೆಟ್ ಚರ್ಚೆಗಳು, ಸಬ್ಸಿಡಿ ಬೇಡಿಕೆಗಳು ಮತ್ತು ಪ್ರಮುಖ ಆರ್ಥಿಕ ನೀತಿಗಳ ಕುರಿತು ವಿವರವಾದ ಚರ್ಚೆಗಳು ನಡೆಯಲಿವೆ. ಸಾರ್ವಜನಿಕರು, ವ್ಯಾಪಾರಿಗಳು, ಕೈಗಾರಿಕೋದ್ಯಮಿಗಳು ಮತ್ತು ತೆರಿಗೆದಾರರು ಎಲ್ಲರೂ ಈ ಬಜೆಟ್ ಬಗ್ಗೆ ಬಹಳ ಕಾತುರ ಇಟ್ಟುಕೊಂಡಿದ್ದಾರೆ. ಈ ಅಧಿವೇಶನದಲ್ಲಿ ಕೇಂದ್ರ ಬಜೆಟ್, ಸಬ್ಸಿಡಿ ಬೇಡಿಕೆಗಳು ಮತ್ತು ಪ್ರಮುಖ ಆರ್ಥಿಕ ನೀತಿಗಳ ಕುರಿತು ವಿವರವಾದ ಚರ್ಚೆಗಳು ಸಂಸತ್ತಿನಲ್ಲಿ ನಡೆಯಲಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ