AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2026: ಜನವರಿ 28ರಿಂದ ಸಂಸತ್ ಅಧಿವೇಶನ ಆರಂಭ; ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ

Union Budget Session 2026: ಈ ವರ್ಷದ ಸಂಸತ್ ಬಜೆಟ್ ಅಧಿವೇಶನ ಜನವರಿ 28ರಿಂದ ಆರಂಭವಾಗಲಿದೆ. 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾಗುವುದು. ಇದಕ್ಕೂ ಮೊದಲು, ಆರ್ಥಿಕ ಸಮೀಕ್ಷೆಯ ವರದಿಯನ್ನು ಜನವರಿ 29ರಂದು ಬಿಡುಗಡೆ ಮಾಡಲಾಗುತ್ತದೆ. ಈ ಅಧಿವೇಶನದಲ್ಲಿ ಬಜೆಟ್ ಚರ್ಚೆಗಳು, ಸಬ್ಸಿಡಿ ಬೇಡಿಕೆಗಳು ಮತ್ತು ಪ್ರಮುಖ ಆರ್ಥಿಕ ನೀತಿಗಳ ಕುರಿತು ವಿವರವಾದ ಚರ್ಚೆಗಳು ನಡೆಯಲಿವೆ. ಸಾರ್ವಜನಿಕರು, ವ್ಯಾಪಾರಿಗಳು, ಕೈಗಾರಿಕೋದ್ಯಮಿಗಳು ಮತ್ತು ತೆರಿಗೆದಾರರು ಎಲ್ಲರೂ ಈ ಬಜೆಟ್ ಬಗ್ಗೆ ಬಹಳ ನಿರೀಕ್ಷೆಯಿಟ್ಟುಕೊಂಡಿದ್ದಾರೆ.

Union Budget 2026: ಜನವರಿ 28ರಿಂದ ಸಂಸತ್ ಅಧಿವೇಶನ ಆರಂಭ; ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ
Budget Session
ಸುಷ್ಮಾ ಚಕ್ರೆ
|

Updated on: Jan 09, 2026 | 9:10 PM

Share

ನವದೆಹಲಿ, ಜನವರಿ 9: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28ರಂದು ಆರಂಭವಾಗಲಿದ್ದು, ಫೆಬ್ರವರಿ 1ರಂದು ಕೇಂದ್ರ ಬಜೆಟ್ 2026 (Union Budget 2026) ಮಂಡನೆಯಾಗಲಿದೆ. ಈ ಕುರಿತು ಮಾಹಿತಿಯನ್ನು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಇಂದು ಬಿಡುಗಡೆ ಮಾಡಿದೆ. ಬಜೆಟ್ ಅಧಿವೇಶನವು ಜನವರಿ 28ರಂದು ಪ್ರಾರಂಭವಾಗಿ ಏಪ್ರಿಲ್ 2ರವರೆಗೆ ಮುಂದುವರಿಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಅಧಿವೇಶನಕ್ಕೆ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ. ಅವರು ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಜೆಟ್ ಅಧಿವೇಶನದ ಮೊದಲ ಹಂತವು ಫೆಬ್ರವರಿ 13ರಂದು ಮುಕ್ತಾಯಗೊಳ್ಳಲಿದ್ದು, ಎರಡನೇ ಹಂತಕ್ಕೆ ಮಾರ್ಚ್ 9ರಂದು ಸಂಸತ್ ಸಭೆ ಸೇರಲಿದೆ. ಕೇಂದ್ರ ಸರ್ಕಾರವು 2025-26 ರ ಆರ್ಥಿಕ ಸಮೀಕ್ಷೆಯನ್ನು ಜನವರಿ 29ರಂದು ಮಂಡಿಸಲಿದೆ. ಕೇಂದ್ರ ಬಜೆಟ್ 2026-27 ಅನ್ನು ಫೆಬ್ರವರಿ 1ರಂದು ಮಂಡಿಸಲಾಗುವುದು.

ಇದನ್ನೂ ಓದಿ: ಬರಲಿದೆ ಹೊಸ ಆದಾಯ ತೆರಿಗೆ ಕಾಯ್ದೆ; ಬಜೆಟ್​ನಲ್ಲಿ ಘೋಷಣೆ, ಏ. 1ರಿಂದ ಜಾರಿ

ಈ ಬಜೆಟ್ ಅಧಿವೇಶನದಲ್ಲಿ ಬಜೆಟ್ ಚರ್ಚೆಗಳು, ಸಬ್ಸಿಡಿ ಬೇಡಿಕೆಗಳು ಮತ್ತು ಪ್ರಮುಖ ಆರ್ಥಿಕ ನೀತಿಗಳ ಕುರಿತು ವಿವರವಾದ ಚರ್ಚೆಗಳು ನಡೆಯಲಿವೆ. ಸಾರ್ವಜನಿಕರು, ವ್ಯಾಪಾರಿಗಳು, ಕೈಗಾರಿಕೋದ್ಯಮಿಗಳು ಮತ್ತು ತೆರಿಗೆದಾರರು ಎಲ್ಲರೂ ಈ ಬಜೆಟ್ ಬಗ್ಗೆ ಬಹಳ ಕಾತುರ ಇಟ್ಟುಕೊಂಡಿದ್ದಾರೆ. ಈ ಅಧಿವೇಶನದಲ್ಲಿ ಕೇಂದ್ರ ಬಜೆಟ್, ಸಬ್ಸಿಡಿ ಬೇಡಿಕೆಗಳು ಮತ್ತು ಪ್ರಮುಖ ಆರ್ಥಿಕ ನೀತಿಗಳ ಕುರಿತು ವಿವರವಾದ ಚರ್ಚೆಗಳು ಸಂಸತ್ತಿನಲ್ಲಿ ನಡೆಯಲಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!