ವಕ್ಫ್ ಭೂಮಿಯಲ್ಲಿ ಸಂಸತ್​ ಭವನ ನಿರ್ಮಾಣ; ಬದ್ರುದ್ದೀನ್ ಅಜ್ಮಲ್ ವಿವಾದಾತ್ಮಕ ಹೇಳಿಕೆ

ವಕ್ಫ್ ತಿದ್ದುಪಡಿ ಮಸೂದೆ ಕುರಿತು ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಕ್ಫ್ ಮಂಡಳಿಯ ಜಾಗದಲ್ಲಿ ಹೊಸ ಸಂಸತ್ತು ನಿರ್ಮಾಣವಾಗಿದೆ ಎಂದಿರುವ ಅವರು, ಇಸ್ಲಾಂ ಧರ್ಮದ ಅನುಯಾಯಿಗಳಿಗೆ ತೊಂದರೆ ನೀಡುವುದು ಬಿಜೆಪಿಯ ಉದ್ದೇಶವಾಗಿದೆ. ನಮ್ಮ ಪೂರ್ವಜರು ಇಡೀ ದೇಶದ ಪ್ರತಿ ಬೀದಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ. ಈ ಹೇಳಿಕೆ ಚರ್ಚೆಗೆ ಕಾರಣವಾಗಿದೆ.

ವಕ್ಫ್ ಭೂಮಿಯಲ್ಲಿ ಸಂಸತ್​ ಭವನ ನಿರ್ಮಾಣ; ಬದ್ರುದ್ದೀನ್ ಅಜ್ಮಲ್ ವಿವಾದಾತ್ಮಕ ಹೇಳಿಕೆ
ಸಂಸತ್​ ಭವನ

Updated on: Oct 16, 2024 | 8:21 PM

ನವದೆಹಲಿ: ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅಸಂಬದ್ಧ ಹೇಳಿಕೆಯೊಂದನ್ನು ನೀಡಿದ್ದಾರೆ. ವಕ್ಫ್ ಬೋರ್ಡ್ ಭೂಮಿಯಲ್ಲಿ ಹೊಸ ಸಂಸತ್ತು ನಿರ್ಮಾಣವಾಗಿದೆ ಎಂದು ಬದ್ರುದ್ದೀನ್ ಹೇಳಿದ್ದಾರೆ. ವಕ್ಫ್ ಆಸ್ತಿಗಳ ಪಟ್ಟಿ ಹೊರಬಿದ್ದಿದೆ. ಸಂಸತ್ ಭವನ, ಅದರ ಸುತ್ತಮುತ್ತಲಿನ ಪ್ರದೇಶಗಳು, ವಸಂತ ವಿಹಾರದಿಂದ ವಿಮಾನ ನಿಲ್ದಾಣದವರೆಗೆ ವಕ್ಫ್ ಆಸ್ತಿಯಲ್ಲಿ ನಿರ್ಮಿಸಲಾಗಿದೆ. ಬಿಜೆಪಿಯವರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ ಅವರು ವಕ್ಫ್ ಭೂಮಿಯಲ್ಲಿ ಸಂಸತ್ತನ್ನು ನಿರ್ಮಿಸಲಾಗಿದೆ ಎಂದು ಹೇಳುವ ಮೂಲಕ ರಾಜಕೀಯ ವಿವಾದವನ್ನು ಎಬ್ಬಿಸಿದ್ದಾರೆ. 15 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಿದ ಅಜ್ಮಲ್ ಅವರು ದೂರದರ್ಶನ ಸುದ್ದಿ ವಾಹಿನಿಯೊಂದರೊಂದಿಗೆ ಮಾತನಾಡುತ್ತಾ ಈ ವಿಷಯದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. “ನಾನು 15 ವರ್ಷಗಳ ಕಾಲ ಸಂಸತ್ತಿನಲ್ಲಿದ್ದೆ, ಮತ್ತು ವಕ್ಫ್ ಭೂಮಿಯಲ್ಲಿ ಸಂಸತ್ತು ನಿರ್ಮಿಸಲಾಗಿದೆ ಎಂಬ ವದಂತಿಗಳಿವೆ. ಅದಕ್ಕಾಗಿಯೇ ನಾನು ಈ ಬಗ್ಗೆ ತನಿಖೆಗೆ ಕೇಳುತ್ತಿದ್ದೇನೆ ಮತ್ತು ಅದು ನಿಜವಾಗಿದ್ದರೆ ದೊಡ್ಡ ತಪ್ಪು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭಾ ಸದಸ್ಯರಾಗಿ ಅವಧಿ ಮುಗಿದ ನಂತರ ಸಂಸತ್ ಬಗ್ಗೆ ಪುಸ್ತಕ ಬರೆಯುವೆ: ಸುಧಾ ಮೂರ್ತಿ

ವಕ್ಫ್ ಮಸೂದೆ ಬಗ್ಗೆ ತೀವ್ರ ಅಸಮ್ಮತಿ ವ್ಯಕ್ತಪಡಿಸಿದ ಅಜ್ಮಲ್, ಎಲ್ಲಾ ಜಾತ್ಯತೀತ ರಾಜಕೀಯ ಪಕ್ಷಗಳು ಮಸೂದೆಯನ್ನು ಪರಿಶೀಲಿಸಲು ರಚಿಸಲಾದ ಜಂಟಿ ಸಂಸದೀಯ ಸಮಿತಿಯನ್ನು (ಜೆಪಿಸಿ) ಬಹಿಷ್ಕರಿಸಿವೆ ಎಂದು ಹೇಳಿದರು. 5 ಕೋಟಿ ಜನರು ಜೆಪಿಸಿಗೆ ಸಂದೇಶಗಳನ್ನು ಕಳುಹಿಸಿದ್ದಾರೆ, ಮಸೂದೆಯನ್ನು ತಿರಸ್ಕರಿಸುವಂತೆ ಒತ್ತಾಯಿಸಿದ್ದಾರೆ. ಇದು ವ್ಯಾಪಕ ಸಾರ್ವಜನಿಕ ಅಸಮಾಧಾನವನ್ನು ಪ್ರತಿಬಿಂಬಿಸುತ್ತದೆ ಎಂದು ಅಜ್ಮಲ್ ಹೇಳಿದರು.

ಇದನ್ನೂ ಓದಿ: ಭಾರತ ವಿಶ್ವದ 5G ಪವರ್​ಹೌಸ್ ಆಗಿ ಹೊರಹೊಮ್ಮಿದೆ; ಐಎಂಸಿಯಲ್ಲಿ ಪ್ರಧಾನಿ ಮೋದಿ

ಮಸೂದೆಯನ್ನು ಪ್ರಶ್ನಿಸಲು ಜಮಿಯತ್ ಉಲೇಮಾ-ಎ-ಹಿಂದ್ ಅಸ್ಸಾಂನಲ್ಲಿ ವಕ್ಫ್ ಬೋರ್ಡ್ ಜಮೀನುಗಳ ಸಮೀಕ್ಷೆಯನ್ನು ನಡೆಸಲಿದೆ ಎಂದು ಅಜ್ಮಲ್ ಘೋಷಿಸಿದರು. ಹೊಸ ಸಂಸತ್ ಕಟ್ಟಡವನ್ನು ವಕ್ಫ್ ಭೂಮಿಯಲ್ಲಿ ನಿರ್ಮಿಸಲಾಗಿದೆ. ವಕ್ಫ್ ಮಸೂದೆಯ ಮೇಲಿನ ಕಾನೂನು ಹೋರಾಟ ಮುಂದುವರಿಯುತ್ತದೆ ಎಂದು ಅವರು ತಮ್ಮ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದರು.

ಈ ಟೀಕೆಗಳನ್ನು ಎಸ್‌ಪಿಯ ಅಬು ಅಜ್ಮಿ ಬೆಂಬಲಿಸಿದರು. ಇದು ನಮ್ಮ ಪೂರ್ವಜರ ಆಸ್ತಿ. ಭೂಮಿ ವಕ್ಫ್‌ಗೆ ಸೇರಿದ್ದು. ಒಂದು ವೇಳೆ ಸಾಕ್ಷ್ಯಾಧಾರಗಳಿದ್ದರೆ, ಅದನ್ನು ಬಳಸುವವರು ವಕ್ಫ್‌ಗೆ ಬಾಡಿಗೆ ಪಾವತಿಸಬೇಕು ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us