AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಮುಂಗಾರು ಅಧಿವೇಶನ ಇಂದಿನಿಂದ ಆರಂಭ; ಸರಕಾರದ ವಿರುದ್ಧ ಸವಾರಿಗೆ ಪ್ರತಿಪಕ್ಷಗಳು ಸಜ್ಜು

Parliament Monsoon Session 2021; ಕೊರೊನಾ ಆತಂಕದ ನಡುವೆಯೇ ಸಂಸತ್‌ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಹಲವು ವಿಷಯಗಳಲ್ಲಿ ಸರಕಾರದ ವಿರುದ್ಧ ಸವಾರಿಗೆ ಪ್ರತಿಪಕ್ಷಗಳು ಸಜ್ಜಾಗಿರುವುದರಿಂದ ಮೊದಲ ದಿನದಿಂದಲೇ ಕಲಾಪ ಕಾವೇರುವ ಸಾಧ್ಯತೆಯಿದೆ. ಇದರ ನಡುವೆ ರೈತ ಸಂಘಟನೆಗಳು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಲು ಸಜ್ಜಾಗಿವೆ.

ಸಂಸತ್ ಮುಂಗಾರು ಅಧಿವೇಶನ ಇಂದಿನಿಂದ ಆರಂಭ; ಸರಕಾರದ ವಿರುದ್ಧ ಸವಾರಿಗೆ ಪ್ರತಿಪಕ್ಷಗಳು ಸಜ್ಜು
ಸಂಸತ್ ಭವನ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Jul 19, 2021 | 7:42 AM

Share

ದೆಹಲಿ: ಕೊರೊನಾ ಆತಂಕದ ನಡುವೆಯೇ ಸಂಸತ್ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಮಾನ್ಸೂನ್ ಅಧಿವೇಶನದಲ್ಲಿ ಅನೇಕ ಮಹತ್ವದ ಮಸೂದೆಗಳ ಮಂಡಿಸಲಿದೆ. ಪಿಆರ್‌ಎಸ್ ಲೆಜಿಸ್ಲೇಟೀವ್ ಪ್ರಕಾರ, 38 ಮಸೂದೆಗಳು ಸಂಸತ್‌ನಲ್ಲಿ ಅಂಗೀಕಾರಕ್ಕೆ ಪೆಂಡಿಂಗ್ ಇವೆ. ಇವುಗಳ ಪೈಕಿ 9 ಮಸೂದೆಗಳು ಪರಿಗಣಿಸಿ, ಅಂಗೀಕಾರಕ್ಕೆ ಪೆಂಡಿಂಗ್ ಇವೆ. ಇನ್ನೂ 17 ಮಸೂದೆಗಳು ಮಂಡನೆಯಾಗಬೇಕಿದೆ. ಹೊಸ ವಿಧೇಯಕಗಳ ಪೈಕಿ ಮೂರು ಇತ್ತೀಚೆಗೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾದ ವಿಧೇಯಕಗಳಾಗಿವೆ. 6 ವಾರಗಳೊಳಗೆ ಸದನದ ಅನುಮೋದನೆ ಪಡೆಯಬೇಕಿದೆ. ಅಗತ್ಯ ರಕ್ಷಣೆ ಸೇವಾ ವಿಧೇಯಕ, ರಾಷ್ಟ್ರ ರಾಜಧಾನಿ ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ವಾಯು ಗುಣಮಟ್ಟ ನಿರ್ವಹಣೆ ಆಯೋಗ ವಿಧೇಯಕ ಸೇರಿ ಹಲವು ಹೊಸ ವಿಧೇಯಕಗಳನ್ನು ಮಂಡಿಸಲಾಗುತ್ತದೆ.

ಸರಕಾರ ವಿರುದ್ದ ಸಮರಕ್ಕೆ ಪ್ರತಿಪಕ್ಷಗಳು ಸನ್ನದ್ಧ ಮುಂಗಾರು ಅಧಿವೇಶನದ ಮೊದಲ ದಿನವೇ ಕಾವೇರುವ ಸಾಧ್ಯತೆ ಇದೆ. ತೈಲ ಬೆಲೆ ಏರಿಕೆ, ಕೃಷಿ ಕಾಯಿದೆಗಳು, ಕೊರೊನಾ 2ನೇ ಅಲೆಯಲ್ಲಿ ಉಂಟಾದ ಸಮಸ್ಯೆಗಳು, ರಾಜ್ಯಗಳಲ್ಲಿ ಲಸಿಕೆ ಕೊರತೆ ಸಮಸ್ಯೆ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸುವ ಮೂಲಕ ಕೇಂದ್ರ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜಾಗಿವೆ. ಅಲ್ಲದೆ, ಶತಾಯಗತಾಯ ಕೇಂದ್ರ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು ಎಂದು ಪ್ರತಿಪಕ್ಷಗಳು ನಿರ್ಧರಿಸಿದ್ದು, ಸಂಸತ್ತಿನ ಉಭಯ ಸದನಗಳಲ್ಲಿ ರೈತರ ಸಮಸ್ಯೆಗಳ ಕುರಿತು ನಿಲುವಳಿ ಮಂಡಿಸಲು ಮುಂದಾಗಿವೆ.

ಇನ್ನು ಲೋಕಸಭಾ ಸದಸ್ಯರ ಪೈಕಿ 444 ಮಂದಿ ಕೊರೊನಾ ಲಸಿಕೆ ಪಡೆದಿದ್ದಾರೆ. ರಾಜ್ಯಸಭಾ ಸದಸ್ಯರ ಪೈಕಿ 218 ಮಂದಿ ಕೊರೊನಾ ಲಸಿಕೆ ಪಡೆದಿದ್ದಾರೆ. ಹೀಗಾಗಿ ಈ ಬಾರಿ ಬೆಳಿಗ್ಗೆಯಿಂದ ಸಂಜೆಯವರೆಗೆ ಎರಡು ಸದನಗಳು ಪ್ರತೇಕವಾಗಿ ಮಾಮೂಲಿಯಂತೆ ನಡೆಯಲಿವೆ. ಕಳೆದ ಬಾರಿಯಂತೆ ಬೆಳಿಗ್ಗೆಯೊಂದು ಸದನ, ಸಂಜೆಯೊಂದು ಸದನದ ಕಲಾಪ ನಡೆಯಲ್ಲ.

ಸದನದ ಒಳಗೆ ಪ್ರತಿಪಕ್ಷಗಳು ಹೋರಾಟ ನಡೆಸಿದ್ರೆ. ಹೊರಗೆ ರೈತರು ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಕೇಂದ್ರ ಸರ್ಕಾರ ತಂದಿರುವ 3 ಕೃಷಿ ಕಾಯ್ದೆ ವಿರುದ್ದ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನಗಳು ಇದೀಗ ಮುಂಗಾರು ಅಧಿವೇಶನ ಟಾರ್ಗೆಟ್ ಮಾಡಿಕೊಂಡಿದ್ದಾರೆ. ಕಳೆದ ಬಾರಿ ಟ್ರಾಕ್ಟರ್ ರ್ಯಾಲಿ ಆಯೋಜಿಸಿ ಗಲಭೆಗೆ ಕಾರಣವಾಗಿದ್ದ ರೈತ ಸಂಘಟನೆಗಳು ಇದೀಗ ಸಂಸತ್ ಹೊರಭಾಗದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಜುಲೈ 22 ರಿಂದ ಪ್ರತಿಭಟನೆ ಆರಂಭಿಸಲು ಭಾರತೀಯ ಕಿಸಾನ್ ಯೂನಿಯನ್ ಸಂಘಟದ ಮುಖಂಡ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಇದನ್ನೂ ಓದಿ: ಮುಂಗಾರು ಅಧಿವೇಶನ ನಡೆಯುವ ಎಲ್ಲ ದಿನ ಸಂಸತ್ತಿನ ಎದುರು ರೈತರ ಧರಣಿ: ಸಂಯುಕ್ತ ಕಿಸಾನ್ ಮೋರ್ಚಾ ಘೋಷಣೆ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್