AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament Monsoon Session: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ, ಆಡಳಿತ ಪಕ್ಷಕ್ಕೆ ಟಕ್ಕರ್​ ಕೊಡಲು ವಿಪಕ್ಷಗಳು ರಣತಂತ್ರ

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಡಳಿತ ಪಕ್ಷಕ್ಕೆ ಟಕ್ಕರ್​ ಕೊಡಲು ವಿಪಕ್ಷಗಳು ರಣತಂತ್ರಗಳನ್ನು ಹೆಣೆದಿವೆ.

Parliament Monsoon Session: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ, ಆಡಳಿತ ಪಕ್ಷಕ್ಕೆ ಟಕ್ಕರ್​ ಕೊಡಲು ವಿಪಕ್ಷಗಳು ರಣತಂತ್ರ
H P
| Updated By: ರಮೇಶ್ ಬಿ. ಜವಳಗೇರಾ|

Updated on:Jul 20, 2023 | 8:23 AM

Share
ನವದೆಹಲಿ, (ಜುಲೈ 20): ಇಂದಿನಿಂದ(ಜುಲೈ 20) ಪ್ರಾರಂಭವಾಗುವ ಸಂಸತ್ ಮುಂಗಾರು ಅಧಿವೇಶನದಲ್ಲಿ(Parliament Monsoon Session) ಕೇಂದ್ರ ಸರ್ಕಾರವು ಒಟ್ಟು 31 ಮಸೂದೆಗಳನ್ನು ಚರ್ಚಿಸುವ ಸಾಧ್ಯತೆಯಿದೆ. ಇವುಗಳನ್ನು ಈಗಾಗಲೇ ಕೆಳಮನೆಯಲ್ಲಿ ಮಂಡಿಸಲಾಗಿದೆ ಮತ್ತು ಜಂಟಿ ಸಮಿತಿಗಳಿಗೆ ಉಲ್ಲೇಖಿಸಲಾಗಿದೆ. ಸುದ್ದಿ ಸಂಸ್ಥೆ ಎಎನ್‌ಐ ಪ್ರಕಟಿಸಿರುವ ಪಟ್ಟಿಯ ಪ್ರಕಾರ, ಡೇಟಾ ರಕ್ಷಣೆ ಮಸೂದೆಯು ಕೇಂದ್ರದ ಕಾರ್ಯಸೂಚಿಯ ಒಂದು ಭಾಗವಾಗಿದೆ.   ಇದರ ನಡುವೆ ಸದ್ಯ ದೇಶದ ಎಲ್ಲರ ಕಣ್ಣುಗಳು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆ, 2023 ಮಸೂದೆಯ ಮೇಲೆ ಇದೆ. ಇದನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ತೀವ್ರವಾಗಿ ಟೀಕಿಸಿದೆ. ವಿಪಕ್ಷಗಳ ಸಭೆಯಲ್ಲಿಯೂ ಇದನ್ನು ಖಂಡಿಸಲಾಗಿದೆ. ಇಷ್ಟು ದಿನ ಈ ಬಗ್ಗೆ ಸುಮ್ಮನಿದ್ದ ಕಾಂಗ್ರೆಸ್ ಕೂಡ ಬಹಿರಂಗವಾಗಿ ಈ ಮಸೂದೆಯನ್ನು ಟೀಕಿಸಿ, ಎಎಪಿಗೆ ಬೆಂಬಲ ಸೂಚಿಸಿದೆ.

ಇದನ್ನೂ ಓದಿ: All-Party Meeting: ಜು.20ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ, ಮಣಿಪುರ ಹಿಂಸಾಚಾರ ಚರ್ಚೆಗೆ ಕೇಂದ್ರ ಒಪ್ಪಿಗೆ

 ಇತ್ತ ಸರ್ಕಾರವನ್ನ ಇಕ್ಕಟ್ಟಿಗೆ ತಳ್ಳಲು ವಿಪಕ್ಷಗಳು ಸಹ ಸಜ್ಜಾಗಿವೆ. ಮಣಿಪುರ ಗಲಭೆ, ರಾಹುಲ್ ಗಾಂಧಿ ಅನರ್ಹತೆ, ದೆಹಲಿ ಸುಗ್ರೀವಾಜ್ಞೆ, ಪ್ರವಾಹ, ಒರಿಸ್ಸಾ ರೈಲು ದುರಂತ,  ಬೆಲೆ ಏರಿಕೆ, ನಿರುದ್ಯೋಗ ಮತ್ತು ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚೆಗೆ ವಿಪಕ್ಷಗಳ ಪಟ್ಟು ಹಿಡಿಯುವ ಸಾಧ್ಯತೆಗಳಿವೆ.

ಈ ಬಾರಿಯ ಅಧಿವೇಶನದಲ್ಲಿ ಒಟ್ಟು 31 ಬಿಲ್ ಮಂಡನೆ ಸಾಧ್ಯತೆ ಇದೆ. ಈ 31 ಬಿಲ್ ಲೋಕಸಭೆಯಲ್ಲಿ ಸರಾಗವಾಗಿ ಪಾಸ್ ಆಗಲಿದ್ದು ರಾಜ್ಯಸಭೆಯಲ್ಲಿ ಬಿಲ್ ಪಾಸ್ ಮಾಡಲು ವಿಪಕ್ಷಗಳು ಅಡ್ಡಿಗೆ ಯತ್ನಿಸಬಹುದು. ಸದ್ಯ ರಾಜ್ಯಸಭೆಯ ಒಟ್ಟು 238 ಸಂಸದರಿದ್ದು, ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಗಳು ಒಟ್ಟಾಗಿ 111 ಸದಸ್ಯರನ್ನು ಹೊಂದಿವೆ (ನಾಮನಿರ್ದೇಶಿತ ಸಂಸದರು ಸೇರಿದಂತೆ) ಬಿಜೆಡಿ, ವೈಎಸ್‌ಆರ್‌ಸಿಪಿ, ಬಿಎಸ್‌ಪಿ, ಟಿಡಿಪಿ ಮತ್ತು ಜೆಡಿಎಸ್ ಹೊರತುಪಡಿಸಿ ಪ್ರತಿಪಕ್ಷಗಳು 106 ಸದಸ್ಯರನ್ನ ಹೊಂದಿದೆ.

ಮುಂಗಾರು ಅಧಿವೇಶನವನ್ನು ಸುಗಮವಾಗಿ ನಡೆಸಲು ನಿನ್ನೆ  ಸರ್ವಪಕ್ಷಗಳ ಸಭೆ ನಡೆಸಲಾಗಿದ್ದು, 34 ಪಕ್ಷಗಳು ಮತ್ತು 44 ನಾಯಕರು ಹಾಜರಾಗಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಿಂದ ಪ್ರಾರಂಭವಾಗಿ ಆಗಸ್ಟ್ 11 ರಂದು ಮುಕ್ತಾಯವಾಗಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:22 am, Thu, 20 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ