AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ನನ್ನ ಹೇಳಿಕೆ ಸರ್ಕಾರ ಅಥವಾ ದೇಶದ ಬಗ್ಗೆ ಆಗಿರಲಿಲ್ಲ, ನಾನು ಏನನ್ನೂ ಹೇಳಿಲ್ಲ: ರಾಹುಲ್ ಗಾಂಧಿ

ನನ್ನ ಹೇಳಿಕೆ ಸರ್ಕಾರ ಅಥವಾ ದೇಶದ ವಿರುದ್ಧವಾಗಿರಲಿಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಲಂಡನ್​ಗೆ ತೆರಳಿದ್ದ ಸಂದರ್ಭದಲ್ಲಿ ಸಂಸತ್ತಿನಲ್ಲಿ ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ,

Rahul Gandhi: ನನ್ನ ಹೇಳಿಕೆ ಸರ್ಕಾರ ಅಥವಾ ದೇಶದ ಬಗ್ಗೆ ಆಗಿರಲಿಲ್ಲ, ನಾನು ಏನನ್ನೂ ಹೇಳಿಲ್ಲ: ರಾಹುಲ್ ಗಾಂಧಿ
ರಾಹುಲ್ ಗಾಂಧಿImage Credit source: Hindustan Times
ನಯನಾ ರಾಜೀವ್
|

Updated on: Mar 19, 2023 | 10:54 AM

Share

ನನ್ನ ಹೇಳಿಕೆ ಸರ್ಕಾರ ಅಥವಾ ದೇಶದ ವಿರುದ್ಧವಾಗಿರಲಿಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಲಂಡನ್​ಗೆ ತೆರಳಿದ್ದ ಸಂದರ್ಭದಲ್ಲಿ ಸಂಸತ್ತಿನಲ್ಲಿ ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ, ನಾವು ಮಾತನಾಡುವಾಗ ಮೈಕ್ ಆಫ್ ಮಾಡುತ್ತಾರೆ, ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎನ್ನುವ ಹೇಳಿಕೆ ನೀಡಿದ್ದರು. ಇದೀಗ ಈ ಕುರಿತು ಸಮಜಾಯಿಷಿ ನೀಡಿರುವ ಅವರು ಆಡಳಿತಾರೂಢ ಬಿಜೆಪಿ ಹೇಳಿಕೊಳ್ಳುವ ರೀತಿಯಲ್ಲಿ ನಾನು ಮಾತನಾಡಿಲ್ಲ ಸರ್ಕಾರ ಹಾಗೂ ದೇಶದ ಕುರಿತು ಏನೂ ಮಾತಾಡಿಲ್ಲ ಎಂದಿದ್ದಾರೆ.

ಭಾರತದ ಪ್ರಜಾಪ್ರಭುತ್ವದ ಬಗ್ಗೆ ಮಾತ್ರ ಪ್ರಶ್ನೆಗಳನ್ನು ಎತ್ತಿದ್ದಾರೆ ಎನ್ನುವ ಕಾರಣಕ್ಕೆ ರಾಷ್ಟ್ರವಿರೋಧಿ ಎಂಬ ಹಣೆಪಟ್ಟಿ ಕಟ್ಟಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ಅವರ ವಿದೇಶಿ ಹೇಳಿಕೆಗೆ ಕೋಲಾಹಲ ಉಂಟಾಗಿದೆ. ಸಂಸತ್ತಿನಲ್ಲಿ ನಿರಂತರ ಹೋರಾಟದ ನಡೆಯುತ್ತಿದೆ. ರಾಹುಲ್ ಗಾಂಧಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಕೇಳುತ್ತಿದೆ.

ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮೌನ ಮುರಿದಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಭೆಯಲ್ಲಿ, ಅವರು ಲಂಡನ್‌ನಲ್ಲಿ ನೀಡಿದ ಹೇಳಿಕೆಗಳನ್ನು ಸ್ಪಷ್ಟಪಡಿಸಿದರು ಮತ್ತು ಅವರ ಹೇಳಿಕೆಯು ವ್ಯಕ್ತಿಯ ಬಗ್ಗೆ ಎಂದು ಹೇಳಿದರು. ಇದು ಸರ್ಕಾರ ಅಥವಾ ದೇಶದ ಬಗ್ಗೆ ಅಲ್ಲ. ಲಂಡನ್ ಹೇಳಿಕೆ ವಿಚಾರವನ್ನು ಬಿಜೆಪಿ ಸಂಸದರು ಪ್ರಸ್ತಾಪಿಸಿದಾಗ ರಾಹುಲ್ ಈ ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ಓದಿ: Rahul Gandhi: ನಾನು ಲಂಡನ್​​ನಲ್ಲಿ ಭಾರತದ ವಿರುದ್ಧ ಏನನ್ನೂ ಹೇಳಿಲ್ಲ: ರಾಹುಲ್ ಗಾಂಧಿ

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯ ಸಭೆಯು ಶನಿವಾರ (ಮಾರ್ಚ್ 18) ಭಾರತದ ಜಿ 20 ಅಧ್ಯಕ್ಷತೆಯಲ್ಲಿ ನಡೆಯಿತು. ರಾಹುಲ್ ಗಾಂಧಿ ಹಾಗೂ ಪ್ರತಿಪಕ್ಷಗಳ ಎಲ್ಲಾ ನಾಯಕರು ಇಲ್ಲಿ ಉಪಸ್ಥಿತರಿದ್ದರು. ಈ ವೇಳೆ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ನಡೆಯಿತು.

ರಾಹುಲ್ ವಿದೇಶದಲ್ಲಿ ನೀಡಿರುವ ಹೇಳಿಕೆಗಳಿಗೆ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಇದಾದ ನಂತರವೇ ರಾಹುಲ್ ತಮ್ಮ ಸ್ಪಷ್ಟೀಕರಣ ಹೇಳಿಕೆ ನೀಡಿದ್ದಾರೆ.

ಸಭೆಯಲ್ಲಿ ಏನಾಯಿತು ಆಡಳಿತಾರೂಢ ಬಿಜೆಪಿ ಹೇಳಿಕೊಳ್ಳುವ ರೀತಿಯಲ್ಲಿ ನಾನು ಮಾತನಾಡಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ಸಂಸದರೊಬ್ಬರು ರಾಹುಲ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದು, ಈ ಬಗ್ಗೆ ಮಾತನಾಡಲು ಸಭೆ ಸೂಕ್ತ ವೇದಿಕೆಯಲ್ಲ ಎಂದಿದ್ದಾರೆ. ಸಭೆಯಲ್ಲಿ ಉಪಸ್ಥಿತರಿದ್ದ ಇತರ ಕೆಲವು ಸಂಸದರು ಕೂಡ ಇದನ್ನೇ ಹೇಳಿದರು, ಆದರೆ ವಿರೋಧ ಪಕ್ಷದ ನಾಯಕರು ರಾಹುಲ್ ಗಾಂಧಿ ಅವರ ಸ್ಪಷ್ಟೀಕರಣದ ಹಕ್ಕನ್ನು ಬೆಂಬಲಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?