AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2022: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭ; ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

Parliament Budget Session 2022: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭಗೊಳ್ಳಲಿದೆ. 2022ನೇ ಸಾಲಿನ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ.

Union Budget 2022: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭ; ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ
ಸಂಸತ್ ಭವನ
TV9 Web
| Edited By: |

Updated on:Jan 14, 2022 | 12:56 PM

Share

ಸಂಸತ್ತಿನ ಬಜೆಟ್ ಅಧಿವೇಶನ (Budget Session) ಜನವರಿ 31ರಿಂದ ಆರಂಭಗೊಳ್ಳಲಿದೆ. 2022ನೇ ಸಾಲಿನ ಕೇಂದ್ರ ಬಜೆಟ್ (Union Budget) ಫೆಬ್ರವರಿ 1ರಂದು ಮಂಡನೆಯಾಗಲಿದೆ. ಅಧಿವೇಶನದ ಎರಡನೇ ಭಾಗವು ಮಾರ್ಚ್ 14 ರಂದು ಪ್ರಾರಂಭವಾಗಿ ಏಪ್ರಿಲ್ 8 ರವರೆಗೆ ಇರುತ್ತದೆ. ಈ ಕುರಿತು ಸರ್ಕಾರ ಶುಕ್ರವಾರ ಮಾಹಿತಿ ನೀಡಿದ್ದು, ಸಂಸತ್ತಿನ ಬಜೆಟ್ ಅಧಿವೇಶನಕ್ಕಾಗಿ ಜನವರಿ 31 ರಂದು ಸಭೆ ನಡೆಯಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಫೆಬ್ರವರಿ 1 ರಂದು 2022-23ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ ಬಳಿಕ, ಬಜೆಟ್ ಮೇಲಿನ ಚರ್ಚೆ ಆರಂಭಗೊಳ್ಳಲಿದೆ. ಫೆಬ್ರವರಿ 11ಕ್ಕೆ ಅಧಿವೇಶನದ ಮೊದಲ ಭಾಗ ಮುಕ್ತಾಯವಾಗಲಿದೆ. ಒಂದು ತಿಂಗಳ ನಂತರ ಅಧಿವೇಶನದ ಎರಡನೇ ಭಾಗವು ಮಾರ್ಚ್ 14ರಂದು ಆರಂಭವಾಗಿ ಏಪ್ರಿಲ್ 8ರವರೆಗೆ ನಡೆಯಲಿದೆ.

ಸಂಸತ್ ಚಳಿಗಾಲದ ಅಧಿವೇಶನವು  ನವೆಂಬರ್ 29ರಂದು ಆರಂಭವಾಗಿ ಡಿಸೆಂಬರ್ 22ರಂದು ಮುಕ್ತಾಯವಾಗಿತ್ತು. ಇದೀಗ ದೇಶದಲ್ಲಿ ದೈನಂದಿನ 2 ಲಕ್ಷಕ್ಕೂ ಅಧಿಕ ಕೊವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿರಿವ ಬೆನ್ನಲ್ಲೇ ಬಜೆಟ್ ಅಧಿವೇಶನ ಘೋಷಿಸಲಾಗಿದೆ. ಇತ್ತೀಚೆಗಷ್ಟೇ ಸಂಸತ್​್ನ 400ಕ್ಕೂ ಅಧಿಕ ಸಿಬ್ಬಂದಿಗಳಿಗೆ ಕೊವಿಡ್ ಸೋಂಕು ತಗುಲಿತ್ತು.

ಇದನ್ನೂ ಓದಿ:

ಕೊವಿಡ್ ಸಂದರ್ಭದಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆ ಮಾಡಬಾರದು: ಹೈಕೋರ್ಟ್

ಇನ್ಸ್ಟಾಗ್ರಾಮ್​ನಲ್ಲಿ 300 ಮಿಲಿಯನ್​ ಫಾಲೋವರ್ಸ್​ ಪಡೆದ ಮೊದಲ ಮಹಿಳೆ ಎನಿಸಿಕೊಂಡ ಕೈಲಿ ಜೆನ್ನರ್

Published On - 12:34 pm, Fri, 14 January 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ