AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ತಿನಲ್ಲಿ ಭದ್ರತಾ ಲೋಪ: ಆರೋಪಿ ಸಾಗರ್ ಸಂಸತ್ತಿನೆದುರು ಬೆಂಕಿ ಹಚ್ಚಿಕೊಳ್ಳಲು ಪ್ಲ್ಯಾನ್​ ಮಾಡಿದ್ದ

ಸಂಸತ್ತಿನ ಭದ್ರತೆಯ ಲೋಪ ದೇಶವನ್ನು ಬೆಚ್ಚಿಬೀಳಿಸಿದೆ. ಈ ಪ್ರಕರಣದಲ್ಲಿ ಎಲ್ಲ ಆರೋಪಿಗಳನ್ನು ದೆಹಲಿ ಪೊಲೀಸರ ವಿಶೇಷ ದಳ ಬಂಧಿಸಿದೆ. ಪೊಲೀಸರ ವಿಚಾರಣೆ ವೇಳೆ ದಿನಕ್ಕೊಂದು ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಬಂಧಿತ ಆರೋಪಿ ಸಾಗರ್ ಶರ್ಮಾ ತಾನು ಸಂಸತ್ತಿನ ಹೊರಗೆ ಬೆಂಕಿ ಹಚ್ಚಿಕೊಳ್ಳಲು ತೀರ್ಮಾನಿಸಿದ್ದೆ ಎಂದು ಹೇಳಿದ್ದಾರೆ. ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಇಬ್ಬರು ವ್ಯಕ್ತಿಗಳು ಸದನಕ್ಕೆ ನುಗ್ಗಿ ಹೊಗೆ ಬಾಂಬ್​ ಹಾಕಿದ್ದರು.

ಸಂಸತ್ತಿನಲ್ಲಿ ಭದ್ರತಾ ಲೋಪ: ಆರೋಪಿ ಸಾಗರ್ ಸಂಸತ್ತಿನೆದುರು ಬೆಂಕಿ ಹಚ್ಚಿಕೊಳ್ಳಲು ಪ್ಲ್ಯಾನ್​ ಮಾಡಿದ್ದ
ಸಾಗರ್ ಶರ್ಮಾImage Credit source: The India Daily
ನಯನಾ ರಾಜೀವ್
|

Updated on: Dec 16, 2023 | 10:36 AM

Share

ಸಂಸತ್ತಿನ ಭದ್ರತೆಯ ಲೋಪ ದೇಶವನ್ನು ಬೆಚ್ಚಿಬೀಳಿಸಿದೆ. ಈ ಪ್ರಕರಣದಲ್ಲಿ ಎಲ್ಲ ಆರೋಪಿಗಳನ್ನು ದೆಹಲಿ ಪೊಲೀಸರ ವಿಶೇಷ ದಳ ಬಂಧಿಸಿದೆ. ಪೊಲೀಸರ ವಿಚಾರಣೆ ವೇಳೆ ದಿನಕ್ಕೊಂದು ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಬಂಧಿತ ಆರೋಪಿ ಸಾಗರ್ ಶರ್ಮಾ ತಾನು ಸಂಸತ್ತಿನ ಹೊರಗೆ ಬೆಂಕಿ ಹಚ್ಚಿಕೊಳ್ಳಲು ತೀರ್ಮಾನಿಸಿದ್ದೆ ಎಂದು ಹೇಳಿದ್ದಾರೆ. ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಇಬ್ಬರು ವ್ಯಕ್ತಿಗಳು ಸದನಕ್ಕೆ ನುಗ್ಗಿ ಹೊಗೆ ಬಾಂಬ್​ ಹಾಕಿದ್ದರು.

ದೆಹಲಿ ಪೊಲೀಸರ ವಿಚಾರಣೆ ವೇಳೆ ಸಾಗರ್ ತನ್ನನ್ನು ತಾನು ಸುಟ್ಟುಕೊಳ್ಳಲು ಬಯಸಿದ್ದೆ, ಆದರೆ ನಂತರ ಈ ಯೋಜನೆಯನ್ನು ಕೈಬಿಡಲಾಗಿತ್ತು ಎಂದು ಹೇಳಿದ್ದಾನೆ. ಜೆಲ್​ ಒಂದನ್ನು ಆನ್​ಲೈನ್​ನಲ್ಲಿ ಆರ್ಡರ್ ಮಾಡಲು ಬಯಸಿದ್ದೆ ಈ ಜೆಲ್​ ಅನ್ನು ದೇಹದ ಮೇಲೆ ಹಚ್ಚಿಕೊಳ್ಳುವ ಮೂಲಕ ಬೆಂಕಿಯಿಂದ ರಕ್ಷಣೆ ಪಡೆಯಬಹುದು, ಆದರೆ ಆನ್​ಲೈನ್​ ಹಣ ಪಾವತಿ ಸಾಧ್ಯವಾಗಿರಲಿಲ್ಲ, ಹೀಗಾಗಿ ಜೆಲ್ ಖರೀದಿಸಲಾಗಲಿಲ್ಲ, ನಂತರ ಸಂಸತ್ತಿನ ಹೊರಗೆ ಬೆಂಕಿ ಹಚ್ಚಿಕೊಳ್ಳುವ ಯೋಜನೆಯನ್ನು ಕೈಬಿಡಲಾಯಿತು ಎಂದಿದ್ದಾನೆ.

ಆರೋಪಿಗಳು ಘಟನೆ ನಡೆಸಲು ಒಂದಲ್ಲ ಎರಡಲ್ಲ 7 ಹೊಗೆ ಕ್ಯಾನ್‌ಗಳೊಂದಿಗೆ ಆಗಮಿಸಿದ್ದರು. ಆರೋಪಿಗಳು ಗೂಗಲ್ ನಲ್ಲಿ ಸರ್ಚ್ ಮಾಡಿ ಸಂಸತ್ ಭವನದ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದರು. ಸಂಸತ್ ಭದ್ರತೆಯ ಹಳೆಯ ವೀಡಿಯೋಗಳನ್ನೂ ಒಳಗೊಂಡ ವಿಡಿಯೋದಿಂದ ಸುತ್ತಮುತ್ತಲಿನ ಪ್ರದೇಶಗಳ ಬಗ್ಗೆ ಸಾಕಷ್ಟು ವಿಷಯಗಳು ತಿಳಿದುಬಂದವು.

ಮತ್ತಷ್ಟು ಓದಿ: ಸಂಸತ್ತಿನೊಳಗೆ ನಡೆದ ಹೊಗೆ ದಾಳಿ ಹಿಂದಿರುವ ಮಾಸ್ಟರ್​ ಮೈಂಡ್​ ಲಲಿತ್ ಅಲ್ಲ, ಮತ್ಯಾರು? ಇಲ್ಲಿದೆ ಮಾಹಿತಿ

ಈ ಕಾರಣಕ್ಕಾಗಿಯೇ ಈ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳೆಲ್ಲರೂ ಸಿಗ್ನಲ್ ಆ್ಯಪ್‌ನಲ್ಲಿ ಪರಸ್ಪರ ಮಾತನಾಡಿಕೊಳ್ಳುತ್ತಿದ್ದು, ಯಾರನ್ನೂ ಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಮಾಧ್ಯಮಗಳಲ್ಲಿ ತಮ್ಮ ಪ್ರಭಾವವನ್ನು ಸಾಬೀತುಪಡಿಸುವುದೇ ಆರೋಪಿಗಳ ನಿಜವಾದ ಉದ್ದೇಶ ಎಂದು ಮೂಲಗಳು ತಿಳಿಸಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಸದನದ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗಲೇ ಸಂಸತ್ ಪ್ರವೇಶಿಸುವ ಯೋಜನೆ ಸಿದ್ಧಪಡಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ