AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ತಿನ ಭದ್ರತೆ ಉಲ್ಲಂಘನೆ: ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆ

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಎಲ್ಲಾ ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ದೆಹಲಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ, ಎಲ್ಲಾ ಆರೋಪಿಗಳ ಫೋನ್‌ಗಳು ಲಲಿತ್ ಝಾ ಬಳಿ ಇತ್ತು ಎನ್ನಲಾಗಿದೆ. ಬಂಧಿತ ಆರನೇ ಆರೋಪಿ ಮಹೇಶ್ ಕುಮಾವತ್‌ನನ್ನು ಪೊಲೀಸರು ನ್ಯಾಯಾಲಯದಿಂದ ಏಳು ದಿನಗಳ ಕಸ್ಟಡಿಗೆ ಪಡೆದಿದ್ದಾರೆ.

ಸಂಸತ್ತಿನ ಭದ್ರತೆ ಉಲ್ಲಂಘನೆ: ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆ
ಮೊಬೈಲ್
ನಯನಾ ರಾಜೀವ್
|

Updated on: Dec 17, 2023 | 9:46 AM

Share

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಎಲ್ಲಾ ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ದೆಹಲಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ, ಎಲ್ಲಾ ಆರೋಪಿಗಳ ಫೋನ್‌ಗಳು ಲಲಿತ್ ಝಾ ಬಳಿ ಇತ್ತು ಎನ್ನಲಾಗಿದೆ. ಬಂಧಿತ ಆರನೇ ಆರೋಪಿ ಮಹೇಶ್ ಕುಮಾವತ್‌ನನ್ನು ಪೊಲೀಸರು ನ್ಯಾಯಾಲಯದಿಂದ ಏಳು ದಿನಗಳ ಕಸ್ಟಡಿಗೆ ಪಡೆದಿದ್ದಾರೆ.

ಆರು ಆರೋಪಿಗಳಾದ ಸಾಗರ್, ಮನೋರಂಜನ್, ನೀಲಂ ಆಜಾದ್, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಅವರನ್ನು ಬಂಧಿಸಲಾಗಿದೆ. ಲಲಿತ್ ಝಾ ಕೆಲವು ದಿನಗಳ ನಂತರ ಸಿಕ್ಕಿಬೀಳುವ ಭಯದಿಂದ ಎಲ್ಲಾ ಫೋನ್‌ಗಳನ್ನು ಸುಟ್ಟು ಹಾಕಿದ್ದಾಗಿ ಒಪ್ಪಿಕೊಂಡಿದ್ದಾರೆ. 2 ವರ್ಷಗಳಿಂದ ದೇಶದ ವಿರುದ್ಧ ಷಡ್ಯಂತ್ರ ರೂಪಿಸಲಾಗಿತ್ತು.

ಡಿಸೆಂಬರ್ 13 ರಂದು ಸಂಸತ್ತಿನ ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಸಾಗರ್ ಹಾಗೂ ಮನೋರಂಜ್ ಸಂದನದ ಒಳಗೆ ನುಗ್ಗಿದ್ದರು, ಬಳಿಕ ಹೊಗೆ ಬಾಂಬ್ ಸಿಡಿಸಿದ್ದರು. ಅವರನ್ನು ತಕ್ಷಣವೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು, ಸಂಸತ್ತಿನ ಹೊರಗೆ ಘೋಷಣೆ ಕೂಗುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ನಂತರ ಲಲಿತ್ ಝಾ ಪೊಲೀಸರಿಗೆ ಶರಣಾಗಿದ್ದ, ಒಂದು ದಿನದ ಬಳಿಕ ಮಹೇಶ್​ನನ್ನೂ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಓದಿ:  ಸಂಸತ್ ಭದ್ರತಾ ಲೋಪ: ಆರೋಪಿಗಳಿಗೆ ಪೊಲೀಸರು ಕೇಳಿದ 18 ಪ್ರಶ್ನೆಗಳಿವು

ಈ ಘಟನೆ ಕುರಿತು ಸದನದಲ್ಲಿ ಪ್ರತಿಭಟನೆ ಮಾಡಿದ್ದ 13 ಸಂಸದರಲ್ಲಿ ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ. ಈ ಕುರಿತು ಸಚಿವೆ ಸ್ಮೃತಿ ಇರಾನಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸಂಸದೆ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾತನಾಡಿ, ಲೋಕಸಭೆ ಸ್ಪೀಕರ್ ಅವರು ಯಾವುದೇ ಪಕ್ಷಪಾತವಿಲ್ಲದೆ ದೇಶದ ಪ್ರತಿಯೊಂದು ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ಮಂಡಿಸಲು ಎಲ್ಲಾ ಪಕ್ಷಗಳ ನಾಯಕರಿಗೆ ಅವಕಾಶ ನೀಡಿದ್ದಾರೆ ಆದರೆ ಅಮಾನತುಗೊಂಡಿರುವ 13 ಸಂಸದರು ರಾಜಕೀಯ ಮಾಡಲು ಪ್ರಯತ್ನಿಸಿದ್ದರು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ