AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ತಿನ ಭದ್ರತೆ ಉಲ್ಲಂಘನೆ: ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆ

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಎಲ್ಲಾ ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ದೆಹಲಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ, ಎಲ್ಲಾ ಆರೋಪಿಗಳ ಫೋನ್‌ಗಳು ಲಲಿತ್ ಝಾ ಬಳಿ ಇತ್ತು ಎನ್ನಲಾಗಿದೆ. ಬಂಧಿತ ಆರನೇ ಆರೋಪಿ ಮಹೇಶ್ ಕುಮಾವತ್‌ನನ್ನು ಪೊಲೀಸರು ನ್ಯಾಯಾಲಯದಿಂದ ಏಳು ದಿನಗಳ ಕಸ್ಟಡಿಗೆ ಪಡೆದಿದ್ದಾರೆ.

ಸಂಸತ್ತಿನ ಭದ್ರತೆ ಉಲ್ಲಂಘನೆ: ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆ
ಮೊಬೈಲ್
ನಯನಾ ರಾಜೀವ್
|

Updated on: Dec 17, 2023 | 9:46 AM

Share

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಎಲ್ಲಾ ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ದೆಹಲಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ, ಎಲ್ಲಾ ಆರೋಪಿಗಳ ಫೋನ್‌ಗಳು ಲಲಿತ್ ಝಾ ಬಳಿ ಇತ್ತು ಎನ್ನಲಾಗಿದೆ. ಬಂಧಿತ ಆರನೇ ಆರೋಪಿ ಮಹೇಶ್ ಕುಮಾವತ್‌ನನ್ನು ಪೊಲೀಸರು ನ್ಯಾಯಾಲಯದಿಂದ ಏಳು ದಿನಗಳ ಕಸ್ಟಡಿಗೆ ಪಡೆದಿದ್ದಾರೆ.

ಆರು ಆರೋಪಿಗಳಾದ ಸಾಗರ್, ಮನೋರಂಜನ್, ನೀಲಂ ಆಜಾದ್, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಅವರನ್ನು ಬಂಧಿಸಲಾಗಿದೆ. ಲಲಿತ್ ಝಾ ಕೆಲವು ದಿನಗಳ ನಂತರ ಸಿಕ್ಕಿಬೀಳುವ ಭಯದಿಂದ ಎಲ್ಲಾ ಫೋನ್‌ಗಳನ್ನು ಸುಟ್ಟು ಹಾಕಿದ್ದಾಗಿ ಒಪ್ಪಿಕೊಂಡಿದ್ದಾರೆ. 2 ವರ್ಷಗಳಿಂದ ದೇಶದ ವಿರುದ್ಧ ಷಡ್ಯಂತ್ರ ರೂಪಿಸಲಾಗಿತ್ತು.

ಡಿಸೆಂಬರ್ 13 ರಂದು ಸಂಸತ್ತಿನ ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಸಾಗರ್ ಹಾಗೂ ಮನೋರಂಜ್ ಸಂದನದ ಒಳಗೆ ನುಗ್ಗಿದ್ದರು, ಬಳಿಕ ಹೊಗೆ ಬಾಂಬ್ ಸಿಡಿಸಿದ್ದರು. ಅವರನ್ನು ತಕ್ಷಣವೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು, ಸಂಸತ್ತಿನ ಹೊರಗೆ ಘೋಷಣೆ ಕೂಗುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ನಂತರ ಲಲಿತ್ ಝಾ ಪೊಲೀಸರಿಗೆ ಶರಣಾಗಿದ್ದ, ಒಂದು ದಿನದ ಬಳಿಕ ಮಹೇಶ್​ನನ್ನೂ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಓದಿ:  ಸಂಸತ್ ಭದ್ರತಾ ಲೋಪ: ಆರೋಪಿಗಳಿಗೆ ಪೊಲೀಸರು ಕೇಳಿದ 18 ಪ್ರಶ್ನೆಗಳಿವು

ಈ ಘಟನೆ ಕುರಿತು ಸದನದಲ್ಲಿ ಪ್ರತಿಭಟನೆ ಮಾಡಿದ್ದ 13 ಸಂಸದರಲ್ಲಿ ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ. ಈ ಕುರಿತು ಸಚಿವೆ ಸ್ಮೃತಿ ಇರಾನಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸಂಸದೆ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾತನಾಡಿ, ಲೋಕಸಭೆ ಸ್ಪೀಕರ್ ಅವರು ಯಾವುದೇ ಪಕ್ಷಪಾತವಿಲ್ಲದೆ ದೇಶದ ಪ್ರತಿಯೊಂದು ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ಮಂಡಿಸಲು ಎಲ್ಲಾ ಪಕ್ಷಗಳ ನಾಯಕರಿಗೆ ಅವಕಾಶ ನೀಡಿದ್ದಾರೆ ಆದರೆ ಅಮಾನತುಗೊಂಡಿರುವ 13 ಸಂಸದರು ರಾಜಕೀಯ ಮಾಡಲು ಪ್ರಯತ್ನಿಸಿದ್ದರು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ