AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​ನಲ್ಲಿ ಭದ್ರತಾ ಲೋಪ: 8 ಸಿಬ್ಬಂದಿ ಅಮಾನತು

ಸಂಸತ್ತಿನಲ್ಲಾದ ಭದ್ರತಾ ಲೋಪ(Security Breach)ದ ಹಿನ್ನೆಲೆಯಲ್ಲಿ 8 ಸಿಬ್ಬಂದಿಯನ್ನು ಲೋಕಸಭೆ ಕಾರ್ಯಾಲಯ ಅಮಾನತುಗೊಳಿಸಿದೆ. ಬುಧವಾರ ಸಂಸತ್ತಿನ ಭದ್ರತೆಯಲ್ಲಿ ಭಾರೀ ಲೋಪವಾಗಿತ್ತು, ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಇಬ್ಬರು ಸಂಸದರಿದ್ದ ಸ್ಥಳಕ್ಕೆ ಆಗಮಿಸಿ ಅಶ್ರುವಾಯು ಸಿಡಿಸಿದ್ದರು.

ಸಂಸತ್​ನಲ್ಲಿ ಭದ್ರತಾ ಲೋಪ: 8 ಸಿಬ್ಬಂದಿ ಅಮಾನತು
ಸಂಸತ್
ನಯನಾ ರಾಜೀವ್
| Edited By: |

Updated on:Jan 22, 2024 | 11:39 AM

Share

ಸಂಸತ್ತಿನಲ್ಲಾದ ಭದ್ರತಾ ಲೋಪ(Security Breach)ದ ಹಿನ್ನೆಲೆಯಲ್ಲಿ 8 ಸಿಬ್ಬಂದಿಯನ್ನು ಲೋಕಸಭೆ ಕಾರ್ಯಾಲಯ ಅಮಾನತುಗೊಳಿಸಿದೆ. ಬುಧವಾರ ಸಂಸತ್ತಿನ ಭದ್ರತೆಯಲ್ಲಿ ಭಾರೀ ಲೋಪವಾಗಿತ್ತು, ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಇಬ್ಬರು ಸಂಸದರಿದ್ದ ಸ್ಥಳಕ್ಕೆ ಆಗಮಿಸಿ ಅಶ್ರುವಾಯು ಸಿಡಿಸಿದ್ದರು.

ಈ ಘಟನೆ ಕುರಿತು ಲೋಕಸಭೆ ಸೆಕ್ರಟರಿಯೇಟ್​ ಮಹತ್ವದ ಕ್ರಮ ಕೈಗೊಂಡಿದೆ. ಭದ್ರತಾ ಉಲ್ಲಂಘಟನೆಗಾಗಿ 8 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಸಂಸತ್ತಿನ ಭದ್ರತಾ ಲೋಪದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಾಗರ್ ಶರ್ಮಾ, ಮನೋರಂಜನ್, ನೀಲಂ ಸೇರಿದಂತೆ ಒಟ್ಟು ಐವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಯೋಜನೆಯನ್ನು 6 ಮಂದಿ ಒಟ್ಟಾಗಿ ಯೋಜಿಸಿದ್ದರು, ನಾಲ್ಕು ಜನರು ಒಂದೇ ಗುಂಪಿನ ಭಾಗವಾಗಿದ್ದಾರೆ.

ಮತ್ತಷ್ಟು ಓದಿ: ಲೋಕಸಭೆಯಲ್ಲಿ ಭದ್ರತಾ ವೈಫಲ್ಯ: CRPF ಡಿಜಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ ಗೃಹ ಇಲಾಖೆ

ಈ ಘಟನೆಗೆ ಸಂಬಂಧಿಸಿದಂತೆ 120 ಬಿ(ಕ್ರಿಮಿನಲ್ ಪಿತೂರಿ), 452(ಅನುಮತಿ ಇಲ್ಲದೆ ಪ್ರವೇಶ), 153(ಗಲಭೆಗೆ ಪ್ರಚೋದನೆ), 186(ಸಾರ್ವಜನಿಕ ಸೇವೆಗೆ ಅಡ್ಡಿಪಡಿಸುವುದು)ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:33 am, Thu, 14 December 23

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ