ಸಂಸತ್​​ನೊಳಗೆ ನುಸುಳಲು ಒಂದೂವರೆ ತಿಂಗಳ ಹಿಂದೆಯೇ ಯೋಜನೆ ರೂಪಿಸಿದ್ದರು!

Parliament security breach: ಸಂಸತ್​​ನ ಒಳಗೆ ನುಗ್ಗಲು ಸಂಚು ರೂಪಿಸಲಾಗಿತ್ತು. ಆರೋಪಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಒಂದಾಗಿದ್ದರು. ಅವರು ಭಗತ್ ಸಿಂಗ್ ಅಭಿಮಾನಿಗಳ ಸಂಘವನ್ನು ರಚಿಸಿದರು. ಒಂದೂವರೆ ವರ್ಷದ ಹಿಂದೆ ಏನು ಮಾಡಬೇಕು ಎಂಬ ಬಗ್ಗೆ ಮೈಸೂರಿನಲ್ಲಿ ಸಭೆ ನಡೆಸಿದ್ದರು. ಒಂಬತ್ತು ತಿಂಗಳ ನಂತರ ಮತ್ತೆ ಸಭೆ ನಡೆಸಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ

ಸಂಸತ್​​ನೊಳಗೆ ನುಸುಳಲು ಒಂದೂವರೆ ತಿಂಗಳ ಹಿಂದೆಯೇ ಯೋಜನೆ ರೂಪಿಸಿದ್ದರು!
ಸಂಸತ್​​ನ ಹೊರಗೆ ಆತಂಕ ಸೃಷ್ಟಿ,ಸಿದ ವ್ಯಕ್ತಿಯನ್ನು ಪೊಲೀಸರು ಸೆರೆ ಹಿಡಿದಿರುವುದು
Follow us
|

Updated on: Dec 14, 2023 | 12:45 PM

ದೆಹಲಿ ಡಿಸೆಂಬರ್ 14 : ಡಿಸೆಂಬರ್ 13 ಬುಧವಾರ ಇಬ್ಬರು ಯುವಕರು ಸಂಸತ್ (Parliament) ಒಳಗೂ ಇಬ್ಬರು ಸಂಸತ್ ಹೊರಗೆ ಸ್ಮೋಕ್ ಬಾಂಬ್ (Smoke Bomb) ಸಿಡಿಸಿ ಆತಂಕ ಸೃಷ್ಟಿಸಿದ್ದರು. ಇದರಿಂದ ಯಾವುದೇ ಹಾನಿ, ಜೀವಕ್ಕೆ ಅಪಾಯ ಸಂಭವಿಸಿಲ್ಲ. ಗಮನ ಸೆಳೆಯಲು ಅವರು ಬಣ್ಣದ ಪಟಾಕಿ ಸಿಡಿಸಿ ಹಾಗೂ ಘೋಷಣೆಗಳನ್ನು ಹಾಕಿದರು. ಲೋಕಸಭೆ ಸಭಾಂಗಣ ಮತ್ತು ಸಂಸತ್ ಆವರಣದಲ್ಲಿ ಹಳದಿ ಬಣ್ಣ (Parliament security breach) ಹರಡಿತ್ತು. ಪೊಲೀಸರು ತನಿಖೆಯ ತಿರುವು ಪಡೆದ ನಂತರ ಷಡ್ಯಂತ್ರಗಳು ಬಯಲಾಗಿವೆ. ಈ ಬಣ್ಣಬಣ್ಣದ ಪಟಾಕಿಗಳನ್ನು ಅಮೋಲ್ ಶಿಂಧೆ ತಂದಿರುವುದು ಬೆಳಕಿಗೆ ಬಂದಿದೆ. ಹಲವು ದಿನಗಳಿಂದ ಈ ಒಳನುಸುಳುವಿಕೆ ಸಂಚು ರೂಪಿಸಿರುವುದು ಬಹಿರಂಗವಾಗಿದೆ.

ಒಂದೂವರೆ ವರ್ಷದ ಹಿಂದೆ ಸಭೆ ನಡೆದಿತ್ತು

ಒಂದೂವರೆ ವರ್ಷಗಳ ಹಿಂದೆಯೇ ದೇಶದ ವಿವಿಧ ಭಾಗಗಳ ಯುವಕರು ಸಂಸತ್ತಿನ ಒಳಗೆ ನುಸುಳಿ ಗದ್ದಲ ಸೃಷ್ಟಿಸಲು ಯೋಜನೆ ರೂಪಿಸಿದ್ದರು. ಆರೋಪಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಒಂದಾಗಿದ್ದರು. ಅವರು ಭಗತ್ ಸಿಂಗ್ ಅಭಿಮಾನಿಗಳ ಸಂಘವನ್ನು ರಚಿಸಿದರು. ಒಂದೂವರೆ ವರ್ಷದ ಹಿಂದೆ ಏನು ಮಾಡಬೇಕು ಎಂಬ ಬಗ್ಗೆ ಮೈಸೂರಿನಲ್ಲಿ ಸಭೆ ನಡೆಸಿದ್ದರು. ಒಂಬತ್ತು ತಿಂಗಳ ನಂತರ ಮತ್ತೆ ಸಭೆ ನಡೆಸಲಾಯಿತು. ಅವರು ಸಂಸತ್ತಿನೊಳಗೆ ನುಸುಳಿ ಆತಂಕ ಸೃಷ್ಟಿಸಲು ಸಂಚು ರೂಪಿಸಿದರು.

ಸಾಗರ್ ಶರ್ಮಾ, ಮನೋರಂಜನ್, ಅಮೋಲ್ ಶಿಂಧೆ, ನೀಲಂ, ಲಲಿತ್ ಝಾ ಸೇರಿದಂತೆ ಕೆಲ ಯುವಕರು ಈ ಸಂಚಿನಲ್ಲಿ ಭಾಗಿಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ತನಿಖೆ ನಡೆಯುತ್ತಿದೆ. ಅದರಂತೆ ಮಾರ್ಚ್ ತಿಂಗಳಿನಲ್ಲಿ ಅವರೆಲ್ಲ ಸಭೆ ನಡೆಸಿ, ಆ ವೇಳೆ ಸಂಸತ್ ಆವರಣವನ್ನು ಪರಿಶೀಲಿಸಿದರು. ಮನೋರಂಜನ್ ಪಾಸ್ ತೆಗೆದುಕೊಂಡು ಈ ಕೆಲಸ ಮಾಡಿದ್ದ. ಆರೋಪಿಗಳು ಡಿ.12ರ ರಾತ್ರಿ ಗುರುಗ್ರಾಮದಲ್ಲಿರುವ ವಿಶಾಲ್ ಶರ್ಮಾ ಅವರ ಮನೆಯಲ್ಲಿ ತಂಗಿದ್ದರು. ಲಲಿತ್ ಝಾ ಈ ಪ್ರಕರಣದ ಮಾಸ್ಟರ್ ಮೈಂಡ್ ಎಂದು ತನಿಖೆಯಿಂದ ತಿಳಿದುಬಂದಿದೆ. ಇದು ನಡೆಯುತ್ತಿರುವಾಗಲೇ ಸಂಸತ್ತಿನ ಹೊರಗೆ ಅಮೋಲ್ ಶಿಂಧೆ ಮತ್ತು ನೀಲಂ ಅವರ ವಿಡಿಯೊ ಮಾಡುವ ಕೆಲಸವನ್ನು ಲಲಿತ್ ಅವರಿಗೆ ವಹಿಸಲಾಯಿತು. ವಿಡಿಯೊ ಮಾಡಿ ತಕ್ಷಣ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಆತನ ಬಳಿ ಎಲ್ಲ ಆರೋಪಿಗಳ ಮೊಬೈಲ್‌ಗಳಿವೆ.

ಇದನ್ನೂ ಓದಿ: ಭದ್ರತಾ ಲೋಪ, ಸದನದ ಬಾವಿಗಿಳಿದು ಪ್ರತಿಭಟಿಸಿದ್ದ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ರಾಜ್ಯಸಭೆಯಿಂದ​ ಅಮಾನತು

ಮಹಾರಾಷ್ಟ್ರದಿಂದ ತಂದಿದ್ದರು ಬಣ್ಣದ ಪಟಾಕಿ

ಈ ವೇಳೆ ಲೋಕಸಭೆ ಸಭಾಂಗಣ ಹಾಗೂ ಸಂಸತ್ ಆವರಣದಲ್ಲಿ ಹೊಗೆಸೂಸುವ ಸಿಡಿಸಲಾಯಿತು. ಇದು ಹಳದಿ ಹೊಗೆಯನ್ನು ಉಂಟುಮಾಡಿತು. ಈ ಬಣ್ಣದ ಪಟಾಕಿಗಳನ್ನು ಮಹಾರಾಷ್ಟ್ರದಿಂದ ಅಮೋಲ್ ಶಿಂಧೆ ತಂದಿರುವುದು ತನಿಖೆಯಿಂದ ತಿಳಿದುಬಂದಿದೆ. ಶೂಗಳನ್ನು ಪರಿಶೀಲಿಸದಿರುವುದು ಮನೋರಂಜನ್ ಅವರಿಗೆ ತಿಳಿದಿದ್ದರಿಂದ ಶೂಗಳ ಮೂಲಕ ಪಟಾಕಿಗಳನ್ನು ತೆಗೆದುಕೊಂಡು ಹೋಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್