AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​​ನೊಳಗೆ ನುಸುಳಲು ಒಂದೂವರೆ ತಿಂಗಳ ಹಿಂದೆಯೇ ಯೋಜನೆ ರೂಪಿಸಿದ್ದರು!

Parliament security breach: ಸಂಸತ್​​ನ ಒಳಗೆ ನುಗ್ಗಲು ಸಂಚು ರೂಪಿಸಲಾಗಿತ್ತು. ಆರೋಪಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಒಂದಾಗಿದ್ದರು. ಅವರು ಭಗತ್ ಸಿಂಗ್ ಅಭಿಮಾನಿಗಳ ಸಂಘವನ್ನು ರಚಿಸಿದರು. ಒಂದೂವರೆ ವರ್ಷದ ಹಿಂದೆ ಏನು ಮಾಡಬೇಕು ಎಂಬ ಬಗ್ಗೆ ಮೈಸೂರಿನಲ್ಲಿ ಸಭೆ ನಡೆಸಿದ್ದರು. ಒಂಬತ್ತು ತಿಂಗಳ ನಂತರ ಮತ್ತೆ ಸಭೆ ನಡೆಸಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ

ಸಂಸತ್​​ನೊಳಗೆ ನುಸುಳಲು ಒಂದೂವರೆ ತಿಂಗಳ ಹಿಂದೆಯೇ ಯೋಜನೆ ರೂಪಿಸಿದ್ದರು!
ಸಂಸತ್​​ನ ಹೊರಗೆ ಆತಂಕ ಸೃಷ್ಟಿ,ಸಿದ ವ್ಯಕ್ತಿಯನ್ನು ಪೊಲೀಸರು ಸೆರೆ ಹಿಡಿದಿರುವುದು
ರಶ್ಮಿ ಕಲ್ಲಕಟ್ಟ
|

Updated on: Dec 14, 2023 | 12:45 PM

Share

ದೆಹಲಿ ಡಿಸೆಂಬರ್ 14 : ಡಿಸೆಂಬರ್ 13 ಬುಧವಾರ ಇಬ್ಬರು ಯುವಕರು ಸಂಸತ್ (Parliament) ಒಳಗೂ ಇಬ್ಬರು ಸಂಸತ್ ಹೊರಗೆ ಸ್ಮೋಕ್ ಬಾಂಬ್ (Smoke Bomb) ಸಿಡಿಸಿ ಆತಂಕ ಸೃಷ್ಟಿಸಿದ್ದರು. ಇದರಿಂದ ಯಾವುದೇ ಹಾನಿ, ಜೀವಕ್ಕೆ ಅಪಾಯ ಸಂಭವಿಸಿಲ್ಲ. ಗಮನ ಸೆಳೆಯಲು ಅವರು ಬಣ್ಣದ ಪಟಾಕಿ ಸಿಡಿಸಿ ಹಾಗೂ ಘೋಷಣೆಗಳನ್ನು ಹಾಕಿದರು. ಲೋಕಸಭೆ ಸಭಾಂಗಣ ಮತ್ತು ಸಂಸತ್ ಆವರಣದಲ್ಲಿ ಹಳದಿ ಬಣ್ಣ (Parliament security breach) ಹರಡಿತ್ತು. ಪೊಲೀಸರು ತನಿಖೆಯ ತಿರುವು ಪಡೆದ ನಂತರ ಷಡ್ಯಂತ್ರಗಳು ಬಯಲಾಗಿವೆ. ಈ ಬಣ್ಣಬಣ್ಣದ ಪಟಾಕಿಗಳನ್ನು ಅಮೋಲ್ ಶಿಂಧೆ ತಂದಿರುವುದು ಬೆಳಕಿಗೆ ಬಂದಿದೆ. ಹಲವು ದಿನಗಳಿಂದ ಈ ಒಳನುಸುಳುವಿಕೆ ಸಂಚು ರೂಪಿಸಿರುವುದು ಬಹಿರಂಗವಾಗಿದೆ.

ಒಂದೂವರೆ ವರ್ಷದ ಹಿಂದೆ ಸಭೆ ನಡೆದಿತ್ತು

ಒಂದೂವರೆ ವರ್ಷಗಳ ಹಿಂದೆಯೇ ದೇಶದ ವಿವಿಧ ಭಾಗಗಳ ಯುವಕರು ಸಂಸತ್ತಿನ ಒಳಗೆ ನುಸುಳಿ ಗದ್ದಲ ಸೃಷ್ಟಿಸಲು ಯೋಜನೆ ರೂಪಿಸಿದ್ದರು. ಆರೋಪಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಒಂದಾಗಿದ್ದರು. ಅವರು ಭಗತ್ ಸಿಂಗ್ ಅಭಿಮಾನಿಗಳ ಸಂಘವನ್ನು ರಚಿಸಿದರು. ಒಂದೂವರೆ ವರ್ಷದ ಹಿಂದೆ ಏನು ಮಾಡಬೇಕು ಎಂಬ ಬಗ್ಗೆ ಮೈಸೂರಿನಲ್ಲಿ ಸಭೆ ನಡೆಸಿದ್ದರು. ಒಂಬತ್ತು ತಿಂಗಳ ನಂತರ ಮತ್ತೆ ಸಭೆ ನಡೆಸಲಾಯಿತು. ಅವರು ಸಂಸತ್ತಿನೊಳಗೆ ನುಸುಳಿ ಆತಂಕ ಸೃಷ್ಟಿಸಲು ಸಂಚು ರೂಪಿಸಿದರು.

ಸಾಗರ್ ಶರ್ಮಾ, ಮನೋರಂಜನ್, ಅಮೋಲ್ ಶಿಂಧೆ, ನೀಲಂ, ಲಲಿತ್ ಝಾ ಸೇರಿದಂತೆ ಕೆಲ ಯುವಕರು ಈ ಸಂಚಿನಲ್ಲಿ ಭಾಗಿಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ತನಿಖೆ ನಡೆಯುತ್ತಿದೆ. ಅದರಂತೆ ಮಾರ್ಚ್ ತಿಂಗಳಿನಲ್ಲಿ ಅವರೆಲ್ಲ ಸಭೆ ನಡೆಸಿ, ಆ ವೇಳೆ ಸಂಸತ್ ಆವರಣವನ್ನು ಪರಿಶೀಲಿಸಿದರು. ಮನೋರಂಜನ್ ಪಾಸ್ ತೆಗೆದುಕೊಂಡು ಈ ಕೆಲಸ ಮಾಡಿದ್ದ. ಆರೋಪಿಗಳು ಡಿ.12ರ ರಾತ್ರಿ ಗುರುಗ್ರಾಮದಲ್ಲಿರುವ ವಿಶಾಲ್ ಶರ್ಮಾ ಅವರ ಮನೆಯಲ್ಲಿ ತಂಗಿದ್ದರು. ಲಲಿತ್ ಝಾ ಈ ಪ್ರಕರಣದ ಮಾಸ್ಟರ್ ಮೈಂಡ್ ಎಂದು ತನಿಖೆಯಿಂದ ತಿಳಿದುಬಂದಿದೆ. ಇದು ನಡೆಯುತ್ತಿರುವಾಗಲೇ ಸಂಸತ್ತಿನ ಹೊರಗೆ ಅಮೋಲ್ ಶಿಂಧೆ ಮತ್ತು ನೀಲಂ ಅವರ ವಿಡಿಯೊ ಮಾಡುವ ಕೆಲಸವನ್ನು ಲಲಿತ್ ಅವರಿಗೆ ವಹಿಸಲಾಯಿತು. ವಿಡಿಯೊ ಮಾಡಿ ತಕ್ಷಣ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಆತನ ಬಳಿ ಎಲ್ಲ ಆರೋಪಿಗಳ ಮೊಬೈಲ್‌ಗಳಿವೆ.

ಇದನ್ನೂ ಓದಿ: ಭದ್ರತಾ ಲೋಪ, ಸದನದ ಬಾವಿಗಿಳಿದು ಪ್ರತಿಭಟಿಸಿದ್ದ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ರಾಜ್ಯಸಭೆಯಿಂದ​ ಅಮಾನತು

ಮಹಾರಾಷ್ಟ್ರದಿಂದ ತಂದಿದ್ದರು ಬಣ್ಣದ ಪಟಾಕಿ

ಈ ವೇಳೆ ಲೋಕಸಭೆ ಸಭಾಂಗಣ ಹಾಗೂ ಸಂಸತ್ ಆವರಣದಲ್ಲಿ ಹೊಗೆಸೂಸುವ ಸಿಡಿಸಲಾಯಿತು. ಇದು ಹಳದಿ ಹೊಗೆಯನ್ನು ಉಂಟುಮಾಡಿತು. ಈ ಬಣ್ಣದ ಪಟಾಕಿಗಳನ್ನು ಮಹಾರಾಷ್ಟ್ರದಿಂದ ಅಮೋಲ್ ಶಿಂಧೆ ತಂದಿರುವುದು ತನಿಖೆಯಿಂದ ತಿಳಿದುಬಂದಿದೆ. ಶೂಗಳನ್ನು ಪರಿಶೀಲಿಸದಿರುವುದು ಮನೋರಂಜನ್ ಅವರಿಗೆ ತಿಳಿದಿದ್ದರಿಂದ ಶೂಗಳ ಮೂಲಕ ಪಟಾಕಿಗಳನ್ನು ತೆಗೆದುಕೊಂಡು ಹೋಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ