Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಕುಂಭದ ಕಾಲ್ತುಳಿತದಲ್ಲಿ ಸತ್ತವರ ಶವವನ್ನು ನದಿಗೆ ಎಸೆಯಲಾಗಿದೆ; ಜಯಾ ಬಚ್ಚನ್ ಆರೋಪ

ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ನೀರಿನ ಗುಣಮಟ್ಟ ಕಲುಷಿತವಾಗಿದೆ ಎಂದು ಹೇಳಿದ್ದಾರೆ. ಸಂಸತ್ತಿನ ಅಧಿವೇಶನದಲ್ಲಿ ಮಹಾಕುಂಭವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಜಯಾ ಬಚ್ಚನ್, ಮಹಾಕುಂಭದ ನೀರು ಅತ್ಯಂತ ಕಲುಷಿತವಾಗಿದೆ. ಪವಿತ್ರ ಗಂಗೆ ಕಲುಷಿತಳಾಗಿದ್ದಾಳೆ ಎಂಬುದು ಬೇಸರದ ಸಂಗತಿ ಎಂದಿದ್ದಾರೆ. ಹಾಗೇ, ಕಾಲ್ತುಳಿತದಲ್ಲಿ ಮೃತಪಟ್ಟವರ ಶವಗಳನ್ನು ಗಂಗಾ ನದಿಗೆ ಎಸೆಯಲಾಗಿದೆ ಎಂದು ಕೂಡ ಆರೋಪಿಸಿದ್ದಾರೆ.

ಮಹಾಕುಂಭದ ಕಾಲ್ತುಳಿತದಲ್ಲಿ ಸತ್ತವರ ಶವವನ್ನು ನದಿಗೆ ಎಸೆಯಲಾಗಿದೆ; ಜಯಾ ಬಚ್ಚನ್ ಆರೋಪ
Jaya Bachchan
Follow us
ಸುಷ್ಮಾ ಚಕ್ರೆ
|

Updated on:Feb 03, 2025 | 3:25 PM

ನವದೆಹಲಿ: ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳವನ್ನು ಗುರಿಯಾಗಿಸಿಕೊಂಡು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗಂಗಾ ನೀರು ಅತ್ಯಂತ ಕಲುಷಿತವಾಗಿದೆ. “ಈಗ ದೇಶದ ಅತ್ಯಂತ ಕಲುಷಿತ ನೀರು ಎಲ್ಲಿದೆ? ಎಂಬ ಪ್ರಶ್ನೆಯನ್ನು ಯಾರನ್ನೇ ಕೇಳಿದರೂ ಅದಕ್ಕೆ ಉತ್ತರ ಮಹಾಕುಂಭದಲ್ಲಿದೆ ಎಂಬ ಉತ್ತರ ಬರುತ್ತದೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಶವಗಳನ್ನು ನದಿಗೆ ಎಸೆಯಲಾಗಿದೆ. ಇದರಿಂದಾಗಿ ನೀರು ಇನ್ನಷ್ಟು ಕಲುಷಿತವಾಗಿದೆ ಎಂದು ಜಯಾ ಬಚ್ಚನ್ ಗಂಭೀರ ಆರೋಪ ಮಾಡಿದ್ದಾರೆ.

ಮಹಾಕುಂಭ ನಡೆಯುತ್ತಿರುವ ಸ್ಥಳದ ನಿಜವಾದ ಸಮಸ್ಯೆಗಳನ್ನು ಪರಿಹರಿಸುತ್ತಿಲ್ಲ. ಮಹಾಕುಂಭಕ್ಕೆ ಭೇಟಿ ನೀಡುವ ಸಾಮಾನ್ಯ ಜನರಿಗೆ ಯಾವುದೇ ವಿಶೇಷ ಚಿಕಿತ್ಸೆ ಸಿಗುತ್ತಿಲ್ಲ. ಅವರಿಗೆ ಸರಿಯಾದ ಯಾವುದೇ ವ್ಯವಸ್ಥೆ ಇಲ್ಲ. 34ಕ್ಕೂ ಹೆಚ್ಚು ಕೋಟಿ ಜನರು ಮಹಾಕುಂಭಕ್ಕೆ ಭೇಟಿ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಸುಳ್ಳು ಹೇಳುತ್ತಿದೆ. ಒಂದು ಸ್ಥಳದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯ ಜನರು ಹೇಗೆ ಸೇರಲು ಸಾಧ್ಯ? ಎಂದು ಜಯಾ ಬಚ್ಚನ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಹಾಕುಂಭದ ಅಮೃತ ಸ್ನಾನದ ವೇಳೆ ಸಂತರು, ಋಷಿಗಳ ಮೇಲೆ ಹೆಲಿಕಾಪ್ಟರ್​ನಿಂದ ಹೂವಿನ ಮಳೆ

ಪ್ರಸ್ತುತ ಮಹಾಕುಂಭದಲ್ಲಿ ಅತ್ಯಂತ ಕಲುಷಿತ ನೀರು ಇದೆ. ಮೃತ ದೇಹಗಳನ್ನು ನದಿಗೆ ಎಸೆಯಲಾಗಿದ್ದು, ಇದು ಪ್ರಯಾಗರಾಜ್‌ನಲ್ಲಿ ನೀರು ವಿಪರೀತ ಕಲುಷಿತಗೊಂಡಿದೆ. ಅದೇ ನೀರನ್ನು ಸಾಮಾನ್ಯ ಜನರಿಗೆ ಪೂರೈಸಲಾಗುತ್ತಿದೆ. ಉತ್ತರ ಪ್ರದೇಶ ಸರ್ಕಾರ ಈ ವಾಸ್ತವದ ಸಮಸ್ಯೆಗಳಿಗೆ ಯಾವುದೇ ಉತ್ತರಗಳನ್ನು ನೀಡುತ್ತಿಲ್ಲ ಎಂದಿದ್ದಾರೆ.

ಮಹಾ ಕುಂಭಕ್ಕೆ ಭೇಟಿ ನೀಡುವ ಸಾಮಾನ್ಯ ಅಥವಾ ಬಡ ಜನರಿಗೆ ಯಾವುದೇ ವ್ಯವಸ್ಥೆಯನ್ನು ಒದಗಿಸಲಾಗಿಲ್ಲ. ಆದರೆ ವಿಐಪಿಗಳಿಗೆ ಮಾತ್ರ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಯಾ ಬಚ್ಚನ್ ಆರೋಪಿಸಿದರು.

ಇದನ್ನೂ ಓದಿ: ಸಂಸತ್ ಅಧಿವೇಶನದಲ್ಲಿ ಗದ್ದಲ, ಸರ್ಕಾರದ ವಿರುದ್ಧ ಘೋಷಣೆ; ಮಹಾಕುಂಭದ ಕಾಲ್ತುಳಿತದ ಬಗ್ಗೆ ಚರ್ಚೆಗೆ ವಿಪಕ್ಷಗಳ ಒತ್ತಾಯ

ಮಹಾ ಕುಂಭಮೇಳದಲ್ಲಿ ಸೇರಿದ ಜನರ ಬಗ್ಗೆ ಜಯಾ ಬಚ್ಚನ್ ಪ್ರಶ್ನಿಸಿದ್ದಾರೆ. “ಕೋಟ್ಯಂತರ ಜನರು ಆ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಸುಳ್ಳು ಹೇಳುತ್ತಿದೆ. ಯಾವುದೇ ಸಮಯದಲ್ಲಿ ಒಂದು ಸ್ಥಳದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯ ಜನರು ಹೇಗೆ ಸೇರಲು ಸಾಧ್ಯ? ಇದನ್ನು ನಂಬಲು ಸಾಧ್ಯವೇ” ಎಂದು ಕೇಳಿದ್ದಾರೆ.

ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆಗಳಲ್ಲಿ ಒಂದಾದ ಮಹಾಕುಂಭದಲ್ಲಿ ಗಂಗಾ ನದಿಯ ಪವಿತ್ರ ನೀರಿನಲ್ಲಿ ಸ್ನಾನ ಮಾಡಲು ಕೋಟ್ಯಂತರ ಭಕ್ತರು ಆಗಮಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Mon, 3 February 25

ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ
ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ
ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ
ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ
ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?
ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!