AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sengol: ನೂತನ ಸಂಸತ್ತಿನಲ್ಲಿ ಇರಿಸಲಾಗುವ ಅಧಿಕಾರ ಹಸ್ತಾಂತರ ಸೂಚಿಸುವ ‘ಸೆಂಗೋಲ್’ನ ಇತಿಹಾಸವೇನು?

ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರದ ಹಸ್ತಾಂತರ ಸೂಚಿಸುವ ಸ್ವಾತಂತ್ರ್ಯದ ಐತಿಹಾಸಿಕ ಸಂಕೇತವಾದ ಸೆಂಗೋಲ್ (ರಾಜದಂಡ) ಅನ್ನು ನೂತನ ಸಂಸತ್ತಿನೊಳಗೆ ಇರಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. 

Sengol: ನೂತನ ಸಂಸತ್ತಿನಲ್ಲಿ ಇರಿಸಲಾಗುವ ಅಧಿಕಾರ ಹಸ್ತಾಂತರ ಸೂಚಿಸುವ ‘ಸೆಂಗೋಲ್’ನ ಇತಿಹಾಸವೇನು?
ಸೆಂಗೋಲ್
ನಯನಾ ರಾಜೀವ್
| Edited By: |

Updated on:May 24, 2023 | 3:25 PM

Share

ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರ ಹಸ್ತಾಂತರ ಸೂಚಿಸುವ ಸ್ವಾತಂತ್ರ್ಯದ ಐತಿಹಾಸಿಕ ಸಂಕೇತವಾದ ಸೆಂಗೋಲ್ (ರಾಜದಂಡ) ಅನ್ನು ನೂತನ ಸಂಸತ್ತಿನೊಳಗೆ ಇರಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.  ದೆಹಲಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನೂತನ ಸಂಸತ್​ ಭವನ(Parliament)ದ ಉದ್ಘಾಟನಾ ಕಾರ್ಯಕ್ರಮ ಮೇ 28 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಅದರ ಉದ್ಘಾಟನೆ ಮಾಡಲಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಈ ಸೆಂಗೋಲ್​ಗೆ ಅಗಾಧ ಮಹತ್ವವಿದೆ ಆಗಸ್ಟ್ 14, 1947 ರಂದು ರಾತ್ರಿ 10.45 ರ ಸುಮಾರಿಗೆ, ಪಂಡಿತ್ ನೆಹರು ಅವರು ತಮಿಳುನಾಡಿನಿಂದ ಈ ಸೆಂಗೋಲ್ ಅನ್ನು ಪಡೆದರು ಮತ್ತು ಹಲವಾರು ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಇದನ್ನು ಸ್ವಾತಂತ್ರ್ಯವನ್ನು ಸಾಧಿಸಿದ ಸಂಕೇತವಾಗಿ ಸ್ವೀಕರಿಸಿದರು ಎಂದರು.

ಚಿನ್ನದ ಈ ರಾಜದಂಡವು ಆಭರಣಗಳಿಂದ ಕೂಡಿತ್ತು, ಆ ಅವಧಿಯಲ್ಲಿ ಈ ಸೆಂಗೋಲ್​​ನ ಬೆಲೆ 15 ಸಾವಿರ ರೂ. ಎನ್ನಲಾಗಿತ್ತು. ಬ್ರಿಟಿಷರಿಂದ ಈ ದೇಶದ ಜನರಿಗೆ ಅಧಿಕಾರವನ್ನು ವರ್ಗಾಯಿಸಲಾಯಿತು ಎಂದು ಅವರು ಹೇಳಿದರು. ಇದನ್ನು ಅಲಹಾಬಾದ್‌ನ ವಸ್ತುಸಂಗ್ರಹಾಲಯದಲ್ಲಿ ಇರಿಸಲಾಗಿದ್ದು, ಅದನ್ನು ಹೊಸ ಸಂಸತ್ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.

ಭಾರತೀಯ ಅದರಲ್ಲೂ ತಮಿಳು ಸಂಸ್ಕೃತಿಯಲ್ಲಿ ಸೆಂಗೋಲ್​ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದು ಅಮಿತ್ ಶಾ ಹೇಳಿದ್ದಾರೆ. ಚೋಳ ಸಾಮ್ರಾಜ್ಯದ ಕಾಲದಿಂದಲೂ ಸೆಂಗೋಲ್​ಗೆ ಪ್ರಾಮುಖ್ಯತೆ ಇತ್ತು. ಈ ಸೆಂಗೋಲ್​ನ್ನು ಹೊಸ ಸಂಸತ್ತಿನಲ್ಲಿ ಇಡಲಾಗುವುದು.

ಮತ್ತಷ್ಟು ಓದಿ: New Parliament Building Inauguration: ನೂತನ ಸಂಸತ್ ಭವನ ಉದ್ಘಾಟನೆ ಯಾವಾಗ? ದಿನಾಂಕ, ಸಮಯದ ಬಗ್ಗೆ ಮಾಹಿತಿ ಇಲ್ಲಿದೆ

ಹೊಸ ಸಂಸತ್ ಭವನದ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಸೆಂಗೋಲ್​​ ತೆಗೆದುಕೊಂಡು ಹೋಗುತ್ತಾರೆ ಮತ್ತು ಅದನ್ನು ಹೊಸ ಸಂಸತ್ ಭವನದಲ್ಲಿ ಇರಿಸುತ್ತಾರೆ. ಸೆಂಗೋಲ್​ ಸ್ಥಾಪನೆಗೆ ಸಂಸತ್ ಭವನಕ್ಕಿಂತ ಸೂಕ್ತ ಮತ್ತು ಪವಿತ್ರ ಸ್ಥಳ ಮತ್ತೊಂದಿಲ್ಲ ಎಂದಿದ್ದಾರೆ.

Published On - 1:12 pm, Wed, 24 May 23

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್