AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sengol: ನೂತನ ಸಂಸತ್ತಿನಲ್ಲಿ ಇರಿಸಲಾಗುವ ಅಧಿಕಾರ ಹಸ್ತಾಂತರ ಸೂಚಿಸುವ ‘ಸೆಂಗೋಲ್’ನ ಇತಿಹಾಸವೇನು?

ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರದ ಹಸ್ತಾಂತರ ಸೂಚಿಸುವ ಸ್ವಾತಂತ್ರ್ಯದ ಐತಿಹಾಸಿಕ ಸಂಕೇತವಾದ ಸೆಂಗೋಲ್ (ರಾಜದಂಡ) ಅನ್ನು ನೂತನ ಸಂಸತ್ತಿನೊಳಗೆ ಇರಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. 

Sengol: ನೂತನ ಸಂಸತ್ತಿನಲ್ಲಿ ಇರಿಸಲಾಗುವ ಅಧಿಕಾರ ಹಸ್ತಾಂತರ ಸೂಚಿಸುವ ‘ಸೆಂಗೋಲ್’ನ ಇತಿಹಾಸವೇನು?
ಸೆಂಗೋಲ್
ನಯನಾ ರಾಜೀವ್
| Edited By: |

Updated on:May 24, 2023 | 3:25 PM

Share

ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರ ಹಸ್ತಾಂತರ ಸೂಚಿಸುವ ಸ್ವಾತಂತ್ರ್ಯದ ಐತಿಹಾಸಿಕ ಸಂಕೇತವಾದ ಸೆಂಗೋಲ್ (ರಾಜದಂಡ) ಅನ್ನು ನೂತನ ಸಂಸತ್ತಿನೊಳಗೆ ಇರಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.  ದೆಹಲಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನೂತನ ಸಂಸತ್​ ಭವನ(Parliament)ದ ಉದ್ಘಾಟನಾ ಕಾರ್ಯಕ್ರಮ ಮೇ 28 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಅದರ ಉದ್ಘಾಟನೆ ಮಾಡಲಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಈ ಸೆಂಗೋಲ್​ಗೆ ಅಗಾಧ ಮಹತ್ವವಿದೆ ಆಗಸ್ಟ್ 14, 1947 ರಂದು ರಾತ್ರಿ 10.45 ರ ಸುಮಾರಿಗೆ, ಪಂಡಿತ್ ನೆಹರು ಅವರು ತಮಿಳುನಾಡಿನಿಂದ ಈ ಸೆಂಗೋಲ್ ಅನ್ನು ಪಡೆದರು ಮತ್ತು ಹಲವಾರು ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಇದನ್ನು ಸ್ವಾತಂತ್ರ್ಯವನ್ನು ಸಾಧಿಸಿದ ಸಂಕೇತವಾಗಿ ಸ್ವೀಕರಿಸಿದರು ಎಂದರು.

ಚಿನ್ನದ ಈ ರಾಜದಂಡವು ಆಭರಣಗಳಿಂದ ಕೂಡಿತ್ತು, ಆ ಅವಧಿಯಲ್ಲಿ ಈ ಸೆಂಗೋಲ್​​ನ ಬೆಲೆ 15 ಸಾವಿರ ರೂ. ಎನ್ನಲಾಗಿತ್ತು. ಬ್ರಿಟಿಷರಿಂದ ಈ ದೇಶದ ಜನರಿಗೆ ಅಧಿಕಾರವನ್ನು ವರ್ಗಾಯಿಸಲಾಯಿತು ಎಂದು ಅವರು ಹೇಳಿದರು. ಇದನ್ನು ಅಲಹಾಬಾದ್‌ನ ವಸ್ತುಸಂಗ್ರಹಾಲಯದಲ್ಲಿ ಇರಿಸಲಾಗಿದ್ದು, ಅದನ್ನು ಹೊಸ ಸಂಸತ್ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.

ಭಾರತೀಯ ಅದರಲ್ಲೂ ತಮಿಳು ಸಂಸ್ಕೃತಿಯಲ್ಲಿ ಸೆಂಗೋಲ್​ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದು ಅಮಿತ್ ಶಾ ಹೇಳಿದ್ದಾರೆ. ಚೋಳ ಸಾಮ್ರಾಜ್ಯದ ಕಾಲದಿಂದಲೂ ಸೆಂಗೋಲ್​ಗೆ ಪ್ರಾಮುಖ್ಯತೆ ಇತ್ತು. ಈ ಸೆಂಗೋಲ್​ನ್ನು ಹೊಸ ಸಂಸತ್ತಿನಲ್ಲಿ ಇಡಲಾಗುವುದು.

ಮತ್ತಷ್ಟು ಓದಿ: New Parliament Building Inauguration: ನೂತನ ಸಂಸತ್ ಭವನ ಉದ್ಘಾಟನೆ ಯಾವಾಗ? ದಿನಾಂಕ, ಸಮಯದ ಬಗ್ಗೆ ಮಾಹಿತಿ ಇಲ್ಲಿದೆ

ಹೊಸ ಸಂಸತ್ ಭವನದ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಸೆಂಗೋಲ್​​ ತೆಗೆದುಕೊಂಡು ಹೋಗುತ್ತಾರೆ ಮತ್ತು ಅದನ್ನು ಹೊಸ ಸಂಸತ್ ಭವನದಲ್ಲಿ ಇರಿಸುತ್ತಾರೆ. ಸೆಂಗೋಲ್​ ಸ್ಥಾಪನೆಗೆ ಸಂಸತ್ ಭವನಕ್ಕಿಂತ ಸೂಕ್ತ ಮತ್ತು ಪವಿತ್ರ ಸ್ಥಳ ಮತ್ತೊಂದಿಲ್ಲ ಎಂದಿದ್ದಾರೆ.

Published On - 1:12 pm, Wed, 24 May 23

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು