AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sengol: ನೂತನ ಸಂಸತ್ತಿನಲ್ಲಿ ಇರಿಸಲಾಗುವ ಅಧಿಕಾರ ಹಸ್ತಾಂತರ ಸೂಚಿಸುವ ‘ಸೆಂಗೋಲ್’ನ ಇತಿಹಾಸವೇನು?

ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರದ ಹಸ್ತಾಂತರ ಸೂಚಿಸುವ ಸ್ವಾತಂತ್ರ್ಯದ ಐತಿಹಾಸಿಕ ಸಂಕೇತವಾದ ಸೆಂಗೋಲ್ (ರಾಜದಂಡ) ಅನ್ನು ನೂತನ ಸಂಸತ್ತಿನೊಳಗೆ ಇರಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. 

Sengol: ನೂತನ ಸಂಸತ್ತಿನಲ್ಲಿ ಇರಿಸಲಾಗುವ ಅಧಿಕಾರ ಹಸ್ತಾಂತರ ಸೂಚಿಸುವ ‘ಸೆಂಗೋಲ್’ನ ಇತಿಹಾಸವೇನು?
ಸೆಂಗೋಲ್
ನಯನಾ ರಾಜೀವ್
| Edited By: |

Updated on:May 24, 2023 | 3:25 PM

Share

ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರ ಹಸ್ತಾಂತರ ಸೂಚಿಸುವ ಸ್ವಾತಂತ್ರ್ಯದ ಐತಿಹಾಸಿಕ ಸಂಕೇತವಾದ ಸೆಂಗೋಲ್ (ರಾಜದಂಡ) ಅನ್ನು ನೂತನ ಸಂಸತ್ತಿನೊಳಗೆ ಇರಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.  ದೆಹಲಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನೂತನ ಸಂಸತ್​ ಭವನ(Parliament)ದ ಉದ್ಘಾಟನಾ ಕಾರ್ಯಕ್ರಮ ಮೇ 28 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಅದರ ಉದ್ಘಾಟನೆ ಮಾಡಲಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಈ ಸೆಂಗೋಲ್​ಗೆ ಅಗಾಧ ಮಹತ್ವವಿದೆ ಆಗಸ್ಟ್ 14, 1947 ರಂದು ರಾತ್ರಿ 10.45 ರ ಸುಮಾರಿಗೆ, ಪಂಡಿತ್ ನೆಹರು ಅವರು ತಮಿಳುನಾಡಿನಿಂದ ಈ ಸೆಂಗೋಲ್ ಅನ್ನು ಪಡೆದರು ಮತ್ತು ಹಲವಾರು ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಇದನ್ನು ಸ್ವಾತಂತ್ರ್ಯವನ್ನು ಸಾಧಿಸಿದ ಸಂಕೇತವಾಗಿ ಸ್ವೀಕರಿಸಿದರು ಎಂದರು.

ಚಿನ್ನದ ಈ ರಾಜದಂಡವು ಆಭರಣಗಳಿಂದ ಕೂಡಿತ್ತು, ಆ ಅವಧಿಯಲ್ಲಿ ಈ ಸೆಂಗೋಲ್​​ನ ಬೆಲೆ 15 ಸಾವಿರ ರೂ. ಎನ್ನಲಾಗಿತ್ತು. ಬ್ರಿಟಿಷರಿಂದ ಈ ದೇಶದ ಜನರಿಗೆ ಅಧಿಕಾರವನ್ನು ವರ್ಗಾಯಿಸಲಾಯಿತು ಎಂದು ಅವರು ಹೇಳಿದರು. ಇದನ್ನು ಅಲಹಾಬಾದ್‌ನ ವಸ್ತುಸಂಗ್ರಹಾಲಯದಲ್ಲಿ ಇರಿಸಲಾಗಿದ್ದು, ಅದನ್ನು ಹೊಸ ಸಂಸತ್ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.

ಭಾರತೀಯ ಅದರಲ್ಲೂ ತಮಿಳು ಸಂಸ್ಕೃತಿಯಲ್ಲಿ ಸೆಂಗೋಲ್​ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದು ಅಮಿತ್ ಶಾ ಹೇಳಿದ್ದಾರೆ. ಚೋಳ ಸಾಮ್ರಾಜ್ಯದ ಕಾಲದಿಂದಲೂ ಸೆಂಗೋಲ್​ಗೆ ಪ್ರಾಮುಖ್ಯತೆ ಇತ್ತು. ಈ ಸೆಂಗೋಲ್​ನ್ನು ಹೊಸ ಸಂಸತ್ತಿನಲ್ಲಿ ಇಡಲಾಗುವುದು.

ಮತ್ತಷ್ಟು ಓದಿ: New Parliament Building Inauguration: ನೂತನ ಸಂಸತ್ ಭವನ ಉದ್ಘಾಟನೆ ಯಾವಾಗ? ದಿನಾಂಕ, ಸಮಯದ ಬಗ್ಗೆ ಮಾಹಿತಿ ಇಲ್ಲಿದೆ

ಹೊಸ ಸಂಸತ್ ಭವನದ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಸೆಂಗೋಲ್​​ ತೆಗೆದುಕೊಂಡು ಹೋಗುತ್ತಾರೆ ಮತ್ತು ಅದನ್ನು ಹೊಸ ಸಂಸತ್ ಭವನದಲ್ಲಿ ಇರಿಸುತ್ತಾರೆ. ಸೆಂಗೋಲ್​ ಸ್ಥಾಪನೆಗೆ ಸಂಸತ್ ಭವನಕ್ಕಿಂತ ಸೂಕ್ತ ಮತ್ತು ಪವಿತ್ರ ಸ್ಥಳ ಮತ್ತೊಂದಿಲ್ಲ ಎಂದಿದ್ದಾರೆ.

Published On - 1:12 pm, Wed, 24 May 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!