AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sengol: ನೂತನ ಸಂಸತ್ತಿನಲ್ಲಿ ಇರಿಸಲಾಗುವ ಅಧಿಕಾರ ಹಸ್ತಾಂತರ ಸೂಚಿಸುವ ‘ಸೆಂಗೋಲ್’ನ ಇತಿಹಾಸವೇನು?

ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರದ ಹಸ್ತಾಂತರ ಸೂಚಿಸುವ ಸ್ವಾತಂತ್ರ್ಯದ ಐತಿಹಾಸಿಕ ಸಂಕೇತವಾದ ಸೆಂಗೋಲ್ (ರಾಜದಂಡ) ಅನ್ನು ನೂತನ ಸಂಸತ್ತಿನೊಳಗೆ ಇರಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. 

Sengol: ನೂತನ ಸಂಸತ್ತಿನಲ್ಲಿ ಇರಿಸಲಾಗುವ ಅಧಿಕಾರ ಹಸ್ತಾಂತರ ಸೂಚಿಸುವ ‘ಸೆಂಗೋಲ್’ನ ಇತಿಹಾಸವೇನು?
ಸೆಂಗೋಲ್
ನಯನಾ ರಾಜೀವ್
| Edited By: |

Updated on:May 24, 2023 | 3:25 PM

Share

ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರ ಹಸ್ತಾಂತರ ಸೂಚಿಸುವ ಸ್ವಾತಂತ್ರ್ಯದ ಐತಿಹಾಸಿಕ ಸಂಕೇತವಾದ ಸೆಂಗೋಲ್ (ರಾಜದಂಡ) ಅನ್ನು ನೂತನ ಸಂಸತ್ತಿನೊಳಗೆ ಇರಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.  ದೆಹಲಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನೂತನ ಸಂಸತ್​ ಭವನ(Parliament)ದ ಉದ್ಘಾಟನಾ ಕಾರ್ಯಕ್ರಮ ಮೇ 28 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಅದರ ಉದ್ಘಾಟನೆ ಮಾಡಲಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಈ ಸೆಂಗೋಲ್​ಗೆ ಅಗಾಧ ಮಹತ್ವವಿದೆ ಆಗಸ್ಟ್ 14, 1947 ರಂದು ರಾತ್ರಿ 10.45 ರ ಸುಮಾರಿಗೆ, ಪಂಡಿತ್ ನೆಹರು ಅವರು ತಮಿಳುನಾಡಿನಿಂದ ಈ ಸೆಂಗೋಲ್ ಅನ್ನು ಪಡೆದರು ಮತ್ತು ಹಲವಾರು ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಇದನ್ನು ಸ್ವಾತಂತ್ರ್ಯವನ್ನು ಸಾಧಿಸಿದ ಸಂಕೇತವಾಗಿ ಸ್ವೀಕರಿಸಿದರು ಎಂದರು.

ಚಿನ್ನದ ಈ ರಾಜದಂಡವು ಆಭರಣಗಳಿಂದ ಕೂಡಿತ್ತು, ಆ ಅವಧಿಯಲ್ಲಿ ಈ ಸೆಂಗೋಲ್​​ನ ಬೆಲೆ 15 ಸಾವಿರ ರೂ. ಎನ್ನಲಾಗಿತ್ತು. ಬ್ರಿಟಿಷರಿಂದ ಈ ದೇಶದ ಜನರಿಗೆ ಅಧಿಕಾರವನ್ನು ವರ್ಗಾಯಿಸಲಾಯಿತು ಎಂದು ಅವರು ಹೇಳಿದರು. ಇದನ್ನು ಅಲಹಾಬಾದ್‌ನ ವಸ್ತುಸಂಗ್ರಹಾಲಯದಲ್ಲಿ ಇರಿಸಲಾಗಿದ್ದು, ಅದನ್ನು ಹೊಸ ಸಂಸತ್ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.

ಭಾರತೀಯ ಅದರಲ್ಲೂ ತಮಿಳು ಸಂಸ್ಕೃತಿಯಲ್ಲಿ ಸೆಂಗೋಲ್​ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದು ಅಮಿತ್ ಶಾ ಹೇಳಿದ್ದಾರೆ. ಚೋಳ ಸಾಮ್ರಾಜ್ಯದ ಕಾಲದಿಂದಲೂ ಸೆಂಗೋಲ್​ಗೆ ಪ್ರಾಮುಖ್ಯತೆ ಇತ್ತು. ಈ ಸೆಂಗೋಲ್​ನ್ನು ಹೊಸ ಸಂಸತ್ತಿನಲ್ಲಿ ಇಡಲಾಗುವುದು.

ಮತ್ತಷ್ಟು ಓದಿ: New Parliament Building Inauguration: ನೂತನ ಸಂಸತ್ ಭವನ ಉದ್ಘಾಟನೆ ಯಾವಾಗ? ದಿನಾಂಕ, ಸಮಯದ ಬಗ್ಗೆ ಮಾಹಿತಿ ಇಲ್ಲಿದೆ

ಹೊಸ ಸಂಸತ್ ಭವನದ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಸೆಂಗೋಲ್​​ ತೆಗೆದುಕೊಂಡು ಹೋಗುತ್ತಾರೆ ಮತ್ತು ಅದನ್ನು ಹೊಸ ಸಂಸತ್ ಭವನದಲ್ಲಿ ಇರಿಸುತ್ತಾರೆ. ಸೆಂಗೋಲ್​ ಸ್ಥಾಪನೆಗೆ ಸಂಸತ್ ಭವನಕ್ಕಿಂತ ಸೂಕ್ತ ಮತ್ತು ಪವಿತ್ರ ಸ್ಥಳ ಮತ್ತೊಂದಿಲ್ಲ ಎಂದಿದ್ದಾರೆ.

Published On - 1:12 pm, Wed, 24 May 23

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ