AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farm Laws Repeal Bill 2021 ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ರಾಜ್ಯಸಭೆ ಅಂಗೀಕಾರ

ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ಲೋಕಸಭೆಯಲ್ಲಿ ಅಂಗೀಕಾರವಾದ ನಂತರ ಮಧ್ಯಾಹ್ನ 2 ಗಂಟೆೆಗೆ ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗಿ ಅಂಗೀಕಾರವಾಗಿದೆ.

Farm Laws Repeal Bill 2021 ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ರಾಜ್ಯಸಭೆ ಅಂಗೀಕಾರ
ರಾಜ್ಯಸಭೆಯಲ್ಲಿ ಕೃಷಿ ಕಾನೂನು ರದ್ದತಿ ಮಸೂದೆ ಅಂಗೀಕಾರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 29, 2021 | 2:34 PM

Share

ದೆಹಲಿ : ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ (Narendra Singh Tomar) ಅವರು ಮಂಡಿಸಿದ್ದ ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ( Farm Laws Repeal Bill 2021) ಅಂಗೀಕಾರವಾದ ನಂತರ ಇಂದು (ಸೋಮವಾರ) ಮಧ್ಯಾಹ್ನ 2 ಗಂಟೆೆಗೆ ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗಿ ಅಂಗೀಕಾರವಾಗಿದೆ. ವಿಪಕ್ಷಗಳ  ಗದ್ದಲದ ನಡುವೆಯೇ  ಮಸೂದೆ ಅಂಗೀಕಾರವಾಗಿದೆ.  ಈ ಮೊದಲು ಕಲಾಪವನ್ನುದ್ದೇಶಿಸಿ ಮಾತನಾಡಿದ ರಾಜ್ಯಸಭೆಯ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡುಚಳಿಗಾಲದ ಅಧಿವೇಶನವನ್ನು ಸಕ್ರಿಯಗೊಳಿಸಲು ‘ಪ್ರಜಾಪ್ರಭುತ್ವ ಮತ್ತು ಸಂಸದೀಯ ಸ್ಥಳ’ವನ್ನು ಬಳಸಿ ಎಂದು ಸದಸ್ಯರಲ್ಲಿ ಒತ್ತಾಯಿಸಿದರು. ಕಳೆದ ಮುಂಗಾರು ಅಧಿವೇಶನದಲ್ಲಿ ಅಶಿಸ್ತಿನ ಘಟನೆಗಳ ಬಗ್ಗೆ ಆತ್ಮಾವಲೋಕನ ಮಾಡುವಲ್ಲಿ ಸಂಬಂಧಪಟ್ಟವರೆಲ್ಲ ವಿಫಲರಾಗಿದ್ದಾರೆ ಎಂದು ನಾಯ್ಡು ವಿಷಾದಿಸಿದರು.  ಕೃಷಿ ಕಾನೂನು ರದ್ದತಿ ಮಸೂದೆ  ಅಂಗೀಕಾರವಾದ ನಂತರ ರಾಜ್ಯಸಭೆಯನ್ನು ಅರ್ಧ ಗಂಟೆ ಮುಂದೂಡಲಾಗಿದೆ.

ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದನ್ನು ನಾವು ಸ್ವಾಗತಿಸುತ್ತೇವೆ. ಲಖೀಂಪುರ ಖೇರಿ ಘಟನೆ ಮತ್ತು ವಿದ್ಯುತ್ ಬಿಲ್ ಸೇರಿದಂತೆ ಆಂದೋಲನದ ಸಂದರ್ಭದಲ್ಲಿ ನಡೆದ ಹಲವಾರು ಘಟನೆಗಳ ಬಗ್ಗೆ ನಾವು ಚರ್ಚೆಗೆ ಒತ್ತಾಯಿಸಿದ್ದೇವೆ. ರೈತರು ಇನ್ನೂ ಪ್ರತಿಭಟನಾ ಸ್ಥಳದಲ್ಲಿದ್ದಾರೆ.  ಕೃಷಿ ಕಾನೂನುಗಳ ರದ್ದತಿ ಮಸೂದೆ, 2021 ರ ಮೇಲೆ ಚರ್ಚೆ ನಡೆಯಬೇಕೆಂದು ನಾವು ಬಯಸುತ್ತೇವೆ. ಆದರೆ ಲೋಕಸಭೆಯಲ್ಲಿ ಈ ಮಸೂದೆಯನ್ನು ತರಾತುರಿಯಲ್ಲಿ ಅಂಗೀಕರಿಸುವುದರೊಂದಿಗೆ, ಅವರು (ಸರ್ಕಾರ) ಅವರು ರೈತರ ಪರವಾಗಿದ್ದಾರೆ ಎಂದು ಸಾಬೀತುಪಡಿಸಲು ಬಯಸುತ್ತಾರೆ  ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

3 ಕೃಷಿ ವಿರೋಧಿ ಕಾನೂನುಗಳನ್ನು ಚರ್ಚೆಯಿಲ್ಲದೆ ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ ಮತ್ತು ಚರ್ಚೆಯಿಲ್ಲದೆ ರದ್ದುಪಡಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಟ್ವೀಟ್‌ ಮಾಡಿದ್ದಾರೆ.

ಲೋಕಸಭೆ ಕಲಾಪವನ್ನು ಮಂಗಳವಾರ ಬೆಳಗ್ಗೆ 11ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: Farm Laws Repeal Bill 2021 ಲೋಕಸಭೆಯಲ್ಲಿ ವಿಪಕ್ಷಗಳ ಗದ್ದಲದ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ಅಂಗೀಕಾರ

Published On - 2:18 pm, Mon, 29 November 21

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು