AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament Winter Session: ನವೆಂಬರ್ 25ರಿಂದ ಸಂಸತ್​ನ ಚಳಿಗಾಲದ ಅಧಿವೇಶನ ಆರಂಭ

ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25ರಂದು ಆರಂಭಗೊಂಡು ಡಿಸೆಂಬರ್ 20ರಂದು ಕೊನೆಗೊಳ್ಳಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಘೋಷಿಸಿದ್ದಾರೆ. ನವೆಂಬರ್ 26ರಂದು ಸದನದ ಸೆಂಟ್ರಲ್ ಹಾಲ್‌ನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುವುದು ಎಂದಿದ್ದಾರೆ.

Parliament Winter Session: ನವೆಂಬರ್ 25ರಿಂದ ಸಂಸತ್​ನ ಚಳಿಗಾಲದ ಅಧಿವೇಶನ ಆರಂಭ
ಸಂಸತ್ತಿನ ಚಳಿಗಾಲದ ಅಧಿವೇಶನ
ಸುಷ್ಮಾ ಚಕ್ರೆ
|

Updated on: Nov 05, 2024 | 4:41 PM

Share

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25ರಂದು ಪ್ರಾರಂಭವಾಗಲಿದ್ದು, ಡಿಸೆಂಬರ್ 20ರಂದು ಮುಕ್ತಾಯವಾಗಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಇಂದು ಪ್ರಕಟಿಸಿದ್ದಾರೆ. ಚಳಿಗಾಲದ ಅಧಿವೇಶನದ ವೇಳಾಪಟ್ಟಿಯನ್ನು ಪ್ರಕಟಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ನವೆಂಬರ್ 26ರಂದು ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆಗಳ ನಂತರ ಪ್ರಾರಂಭವಾಗುವ ಅಧಿವೇಶನದಲ್ಲಿ ಸರ್ಕಾರವು ವಕ್ಫ್ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಉಭಯ ಸದನಗಳು ಅಂಗೀಕರಿಸುವುದನ್ನು ಖಚಿತಪಡಿಸಿಕೊಳ್ಳಲು ನರೇಂದ್ರ ಮೋದಿ ಸರ್ಕಾರವು ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ರಾಜತಾಂತ್ರಿಕರನ್ನು ಹೆದರಿಸುವ ಹೇಡಿತನದ ಪ್ರಯತ್ನ; ಕೆನಡಾದ ಹಿಂದೂ ದೇವಾಲಯದ ದಾಳಿಗೆ ಪಿಎಂ ಮೋದಿ ಖಂಡನೆ

ಈ ಬಾರಿಯ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಒಂದು ರಾಷ್ಟ್ರ ಒಂದು ಚುನಾವಣಾ ಮಸೂದೆಯನ್ನು ಪರಿಚಯಿಸುವ ಸಾಧ್ಯತೆಯಿದೆ. ಇತ್ತೀಚೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರವು ಒಂದು ರಾಷ್ಟ್ರ ಒಂದು ಚುನಾವಣೆಯನ್ನು ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹೈಲೈಟ್ ಮಾಡಿದ್ದು, ಇದರಿಂದ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳು ನಡೆಯಲಿದೆ.

ನವೆಂಬರ್ 23ರಂದು ಪ್ರಕಟವಾಗಲಿರುವ ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಫಲಿತಾಂಶಗಳ ಬಗ್ಗೆಯೂ ಉಭಯ ಸದನಗಳಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?