AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಗುಂಪು ಹತ್ಯೆಯ ಅಪರಾಧಕ್ಕೆ ಮರಣದಂಡನೆ: ಅಮಿತ್ ಶಾ

ಭಾರತದಲ್ಲಿ ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿ ಚರ್ಚೆಗೆ ಪ್ರತಿಕ್ರಿಯಿಸಿದ ಅಮಿತ್ ಶಾ, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ, ನಮ್ಮ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ನಿಯಂತ್ರಿಸುವ 150 ವರ್ಷಗಳ ಹಿಂದಿನ ಮೂರು ಕಾನೂನುಗಳಿಗೆ ಕೆಲವು ಪ್ರಮುಖ ಬದಲಾವಣೆಗಳನ್ನು ತರಲು ನಾನು ಬಂದಿದ್ದೇನೆ ಎಂದು ಹೇಳಿದ್ದಾರೆ.

ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಗುಂಪು ಹತ್ಯೆಯ ಅಪರಾಧಕ್ಕೆ ಮರಣದಂಡನೆ: ಅಮಿತ್ ಶಾ
ಅಮಿತ್ ಶಾ
Follow us
ರಶ್ಮಿ ಕಲ್ಲಕಟ್ಟ
|

Updated on:Dec 20, 2023 | 5:01 PM

ದೆಹಲಿ ಡಿಸೆಂಬರ್ 20: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಭಾರತದಲ್ಲಿ ಕ್ರಿಮಿನಲ್ ಕಾನೂನುಗಳನ್ನು (Criminal Laws) ಬದಲಿಸಲು ಲೋಕಸಭೆಯಲ್ಲಿ (Lok sabha)ಮಸೂದೆಯನ್ನು ಮಂಡಿಸಿ ಚರ್ಚೆಗೆ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ, ನಮ್ಮ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ನಿಯಂತ್ರಿಸುವ 150 ವರ್ಷಗಳ ಹಿಂದಿನ ಮೂರು ಕಾನೂನುಗಳಿಗೆ ಕೆಲವು ಪ್ರಮುಖ ಬದಲಾವಣೆಗಳನ್ನು ತರಲು ನಾನು ಬಂದಿದ್ದೇನೆ” ಎಂದು ಅವರು ಹೇಳಿದರು. ಭಾರತೀಯ ದಂಡ ಸಂಹಿತೆಯ ಉದ್ದೇಶವು ಶಿಕ್ಷೆಯನ್ನು ನೀಡುವುದು, ನ್ಯಾಯವಲ್ಲ, ಭಾರತೀಯ ದಂಡ ಸಂಹಿತೆ ಬದಲಿಗೆ ಭಾರತೀಯ ನ್ಯಾಯ (ಎರಡನೇ) ಸಂಹಿತಾ 2023ಸದನದ ಅಂಗೀಕಾರದ ನಂತರ ದೇಶದಲ್ಲಿ  ಜಾರಿಗೆ ಬರಲಿದೆ ಎಂದು ಶಾ ಹೇಳಿದ್ದಾರೆ..

ಹೊಸ ಕ್ರಿಮಿನಲ್ ಕಾನೂನು ಮಸೂದೆಗಳ ಬಗ್ಗೆ ಮಾತನಾಡಿದ  ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಸ್ತಾಪಿಸಿದ ಕಾನೂನುಗಳ ಪ್ರಕಾರ ಗುಂಪು ಹತ್ಯೆಯ ಅಪರಾಧಕ್ಕೆ ಮರಣದಂಡನೆಗೆ ಅವಕಾಶವಿದೆ ಎಂದು ಹೇಳಿದರು. ಕೇಂದ್ರ ಸರ್ಕಾರದ ಪ್ರಕಾರ ಹೊಸ ಮಸೂದೆಗಳು “ಶಿಕ್ಷೆ” ಬದಲಿಗೆ “ನ್ಯಾಯ”ದ ಮೇಲೆ ಕೇಂದ್ರೀಕರಿಸುವ ಮೂಲಕ ದೇಶದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ನವೀಕರಿಸುವ ಗುರಿಯನ್ನು ಹೊಂದಿವೆ.

ಭಾರತೀಯ ನ್ಯಾಯ ಸಂಹಿತಾ ಮಸೂದೆ, 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮಸೂದೆ, 2023, ಮತ್ತು ಭಾರತೀಯ ಸಾಕ್ಷ್ಯ ಮಸೂದೆ, 2023 ಅನ್ನು ಸಂಸತ್ತಿನಲ್ಲಿ ಮಾನ್ಸೂನ್ ಅಧಿವೇಶನದಲ್ಲಿ ಮೊದಲು ಪರಿಚಯಿಸಲಾಯಿತು. ಚಳಿಗಾಲದ ಅಧಿವೇಶನದಲ್ಲಿ ಶಾ ಮಸೂದೆಗಳ ತಿದ್ದುಪಡಿ ಆವೃತ್ತಿಗಳನ್ನು ಮಂಡಿಸಿದ್ದರು.

ಉದ್ದೇಶಿತ ಕಾನೂನುಗಳು ಪೊಲೀಸ್ ಹೊಣೆಗಾರಿಕೆಯನ್ನು ಬಲಪಡಿಸುವ ವ್ಯವಸ್ಥೆಯನ್ನು ತರುತ್ತವೆ ಎಂದು ಶಾ ಹೇಳಿದರು. ಬಂಧಿತ ವ್ಯಕ್ತಿಗಳ ವಿವರಗಳನ್ನು ಈಗ ಪ್ರತಿ ಪೊಲೀಸ್ ಠಾಣೆಯಲ್ಲಿ ದಾಖಲಿಸಬೇಕು ಮತ್ತು ಈ ದಾಖಲೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಗೊತ್ತುಪಡಿಸಿದ ಪೊಲೀಸ್ ಅಧಿಕಾರಿ ಹೊಂದಿರುತ್ತಾರೆ ಎಂದು ಸಚಿವರು ಹೇಳಿದ್ದಾರೆ.

ಹೊಸ ಕ್ರಿಮಿನಲ್ ಮಸೂದೆಗಳಲ್ಲಿನ ನಿಬಂಧನೆಗಳ ಕುರಿತು ಮಾತನಾಡಿದ ಶಾ, ಸರ್ಕಾರವು ಕಳ್ಳಸಾಗಣೆ ಕಾನೂನುಗಳನ್ನು ಲಿಂಗ-ತಟಸ್ಥಗೊಳಿಸಿದೆ ಎಂದು ಹೇಳಿದರು. ಇದರ ಜೊತೆಗೆ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯ ಮೇಲಿನ ಅತ್ಯಾಚಾರವು ಹೊಸ ಕಾನೂನುಗಳ ಅಡಿಯಲ್ಲಿ ಸ್ವಯಂಚಾಲಿತವಾಗಿ POCSO ಸಮಾನ ನಿಬಂಧನೆಗಳನ್ನು ವಿಧಿಸಲಾಗುವುದು ಎಂದು ಕೇಂದ್ರ ಗೃಹ ಸಚಿವರು ಹೇಳಿದರು.

ಚರ್ಚೆಗೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವರು, 158 ಸಭೆಗಳನ್ನು ನಡೆಸಿ ಎಲ್ಲವನ್ನೂ ವಿವರವಾಗಿ ಪರಿಶೀಲಿಸಿದ್ದೇನೆ. ಹೊಸ ಕ್ರಿಮಿನಲ್ ಕಾನೂನುಗಳ ಪೂರ್ಣ ವಿರಾಮ, ಪ್ರತಿ ಅಲ್ಪವಿರಾಮವನ್ನು ನೋಡಿದ್ದೇನೆ. ಈ ಮಸೂದೆಗಳು ಸಂವಿಧಾನದ ಮನೋಭಾವಕ್ಕೆ ಅನುಗುಣವಾಗಿವೆ ಎಂದಿದ್ದಾರೆ.

ಭಾರತೀಯ ನ್ಯಾಯ (ಎರಡನೇ) ಸಂಹಿತಾ, 2023, ಭಾರತೀಯ ನಾಗರಿಕ ಸುರಕ್ಷಾ (ದ್ವಿತೀಯ) ಸಂಹಿತಾ, 2023 ಮತ್ತು ಭಾರತೀಯ ಸಾಕ್ಷ್ಯ (ಎರಡನೇ) ಮಸೂದೆ, 2023 ಅನ್ನು ಬುಧವಾರ ಸಂಸತ್ತಿನಲ್ಲಿ ಮಂಡನೆ ಮಾಡಲಾಗಿದೆ. ಹೊಸ ಕಾನೂನುಗಳು ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆಯನ್ನು ಬದಲಿಸುತ್ತವೆ.ಹೊಸ ಮಸೂದೆಗಳು “ಭಾರತೀಯತೆ, ಭಾರತೀಯ ಸಂವಿಧಾನ ಮತ್ತು ಜನರ ಯೋಗಕ್ಷೇಮಕ್ಕೆ ಒತ್ತು ನೀಡುತ್ತವೆ” ಎಂದಿದ್ದಾರೆ ಶಾ.

ಇದನ್ನೂ ಓದಿ:ಸಂಸತ್‌ನಲ್ಲಿ ಮತ್ತೆ ಮಂಡನೆಯಾಗಲಿವೆ ಮೂರು ಹೊಸ ಕ್ರಿಮಿನಲ್ ಕಾನೂನು ವಿಧೇಯಕಗಳು; ಇದರಲ್ಲೇನಿದೆ? ಸಿಆರ್‌ಪಿಸಿಯಲ್ಲಿ 484 ವಿಭಾಗಗಳಿದ್ದವು, ಈಗ ಅದರಲ್ಲಿ 531 ವಿಭಾಗಗಳಿವೆ. 177 ವಿಭಾಗಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಮತ್ತು 9 ಹೊಸ ವಿಭಾಗಗಳನ್ನು ಸೇರಿಸಲಾಗಿದೆ. 39 ಹೊಸ ಉಪವಿಭಾಗಗಳನ್ನು ಸೇರಿಸಲಾಗಿದೆ. 44 ಹೊಸ ನಿಬಂಧನೆಗಳನ್ನು ಸೇರಿಸಲಾಗಿದೆ ಎಂದಿದ್ದಾರೆ.

ಬಡವರಿಗೆ ನ್ಯಾಯ ಪಡೆಯುವ ದೊಡ್ಡ ಸವಾಲು ಆರ್ಥಿಕ ಸವಾಲು. ವರ್ಷಗಳಿಂದ ‘ತಾರೀಖ್ ಪೇ ತಾರೀಖ್’ ಮುಂದುವರಿಯುತ್ತದೆ. ಪೊಲೀಸರು ನ್ಯಾಯಾಂಗ ವ್ಯವಸ್ಥೆಯನ್ನು ಹೊಣೆ ಮಾಡುತ್ತಾರೆ. ಸರ್ಕಾರ ಪೊಲೀಸ್ ಮತ್ತು ನ್ಯಾಯಾಂಗವನ್ನು ಹೊಣೆಗಾರರನ್ನಾಗಿ ಮಾಡುತ್ತದೆ. ವಿಳಂಬಕ್ಕೆ ಸರ್ಕಾರವನ್ನು ಪೊಲೀಸರು ಮತ್ತು ನ್ಯಾಯಾಂಗವು ಹೊಣೆಗಾರರನ್ನಾಗಿ ಮಾಡುತ್ತದೆ. ಈಗ ನಾವು ಹೊಸ ಕಾನೂನುಗಳಲ್ಲಿ ಹಲವು ವಿಷಯಗಳನ್ನು ಸ್ಪಷ್ಟಪಡಿಸಿದ್ದೇವೆ. ನಾವು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಆದಷ್ಟು ಬೇಗ ಮಾಡುತ್ತೇವೆ ಮತ್ತು ಜನವರಿ 22 ರಂದು ಅಲ್ಲಿ ಶ್ರೀರಾಮನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಹೇಳಿದ್ದೇವೆ. ಇದು ಪ್ರಧಾನಿ ಮೋದಿಯವರ ಸರ್ಕಾರ, ಅವರು ಹೇಳಿದ್ದನ್ನು ಮಾಡಿದ್ದೇವೆ. ನಾವು ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುತ್ತೇವೆ ಎಂದು ಹೇಳಿದೆವು. ಕಾಂಗ್ರೆಸ್ ಹಲವು ಬಾರಿ ಅಧಿಕಾರಕ್ಕೆ ಬಂದಿತು ಮತ್ತು ದಿನಾಂಕಗಳನ್ನು ನೀಡುತ್ತಲೇ ಇತ್ತು. ಆದರೆ ನಾವು ಮಹಿಳೆಯರ ಸಬಲೀಕರಣಕ್ಕಾಗಿ ಹೆಚ್ಚಿನ ಮತಗಳೊಂದಿಗೆ ಅದನ್ನು ಜಾರಿಗೆ ತಂದೆವು ಎಂದು ಅಮಿತ್ ಶಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Wed, 20 December 23

ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್