Sign In

By signing in or creating an account, you agree with Associated Broadcasting Company's Terms & Conditions and Privacy Policy.

Uniform Civil Code: ಏಕರೂಪ ನಾಗರಿಕ ಸಂಹಿತೆ ಕುರಿತು ಜುಲೈ 3ರಂದು ಸಂಸದೀಯ ಸ್ಥಾಯಿ ಸಮಿತಿ ಸಭೆ, 31 ಸಂಸದರ ಅಭಿಪ್ರಾಯ ಸಂಗ್ರಹ

ಏಕರೂಪ ನಾಗರಿಕ ಸಂಹಿತೆ (Uniform Civil Code)ಕುರಿತು ಸಂಸದರ ಅಭಿಪ್ರಾಯ ತಿಳಿಯಲು ಸಂಸದೀಯ ಸ್ಥಾಯಿ ಸಮಿತಿ ಸಭೆ ಕರೆಯಲಾಗಿದೆ. ಜುಲೈ 3 ರಂದು ಸಭೆ ನಡೆಯಲಿದೆ.

Uniform Civil Code: ಏಕರೂಪ ನಾಗರಿಕ ಸಂಹಿತೆ ಕುರಿತು ಜುಲೈ 3ರಂದು ಸಂಸದೀಯ ಸ್ಥಾಯಿ ಸಮಿತಿ ಸಭೆ, 31 ಸಂಸದರ ಅಭಿಪ್ರಾಯ ಸಂಗ್ರಹ
ಸಂಸತ್Image Credit source: NDTV
Follow us
ನಯನಾ ರಾಜೀವ್
|

Updated on: Jun 30, 2023 | 11:16 AM

ಏಕರೂಪ ನಾಗರಿಕ ಸಂಹಿತೆ (Uniform Civil Code)ಕುರಿತು ಸಂಸದರ ಅಭಿಪ್ರಾಯ ತಿಳಿಯಲು ಸಂಸದೀಯ ಸ್ಥಾಯಿ ಸಮಿತಿ(Parliamentary Standing Committee) ಸಭೆ ಕರೆಯಲಾಗಿದೆ. ಜುಲೈ 3 ರಂದು ಸಭೆ ನಡೆಯಲಿದೆ. ಬಿಜೆಪಿ ರಾಜ್ಯಸಭಾ ಸಂಸದ ಸುಶೀಲ್ ಮೋದಿ ನೇತೃತ್ವದ ಸಮಿತಿಯು 31 ಸದಸ್ಯ ಸಂಸದರಿಗೆ ಮಾಹಿತಿ ನೀಡಿದೆ. ಯುಸಿಸಿ ಕುರಿತು ಅವರ ಅಭಿಪ್ರಾಯಗಳನ್ನು ಸಭೆಯಲ್ಲಿ ಕೇಳಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜುಲೈನಲ್ಲಿ ನಡೆಯಲಿರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ(Uniform Civil Code) ಯನ್ನು ಜಾರಿಗೊಳಿಸುವ ಮಸೂದೆಯನ್ನು ಸರ್ಕಾರ ಮಂಡಿಸಬಹುದು ಎಂದು ಹೇಳಲಾಗುತ್ತಿದೆ. ಮಸೂದೆಯನ್ನು ಸಂಸದೀಯ ಸ್ಥಾಯಿ ಸಮಿತಿಗೆ ಕಳುಹಿಸಲಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಸಂಬಂಧಿಸಿದಂತೆ ಕಾನೂನು ಆಯೋಗವು ಜನರಿಂದ ಅಭಿಪ್ರಾಯ ಕೇಳಿತ್ತು, ಇದಕ್ಕಾಗಿ ಒಂದು ತಿಂಗಳ ಕಾಲಾವಕಾಶ ನೀಡಲಾಗಿದ್ದು ಅದು ಜುಲೈ 14ಕ್ಕೆ ಕೊನೆಗೊಳ್ಳಲಿದೆ.

ಮತ್ತಷ್ಟು ಓದಿ: Uniform Civil Code: ಸಂಸತ್ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ ಸಾಧ್ಯತೆ

ಸಂಸತ್ ಮುಂಗಾರು ಅಧಿವೇಶನವು ಜುಲೈ ಕೊನೆಯ ವಾರದಲ್ಲಿ ಆರಂಭವಾಗಿ ಆಗಸ್ಟ್ 10ಕ್ಕೆ ಕೊನೆಗೊಳ್ಳಬಹುದು ಎಂದು ಅಂದಾಜಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಅಧಿವೇಶನದ ದಿನಾಂಕವನ್ನು ಇನ್ನೆರಡು ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಜುಲೈ 17 ಅಥವಾ 20ರಿಂದ ಅಧಿವೇಶನ ಪ್ರಾರಂಭವಾಗಬಹುದು ಎಂದು ಅಂದಾಜಿಸಲಾಗಿದೆ.

ಬಿಜೆಪಿ ಈ ವಿಚಾರದಲ್ಲಿ ಹಿಂದೆ ಸರಿಯುವಂತೆ ಕಾಣುತ್ತಿಲ್ಲ, ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ