AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uniform Civil Code: ಏಕರೂಪ ನಾಗರಿಕ ಸಂಹಿತೆ ಕುರಿತು ಜುಲೈ 3ರಂದು ಸಂಸದೀಯ ಸ್ಥಾಯಿ ಸಮಿತಿ ಸಭೆ, 31 ಸಂಸದರ ಅಭಿಪ್ರಾಯ ಸಂಗ್ರಹ

ಏಕರೂಪ ನಾಗರಿಕ ಸಂಹಿತೆ (Uniform Civil Code)ಕುರಿತು ಸಂಸದರ ಅಭಿಪ್ರಾಯ ತಿಳಿಯಲು ಸಂಸದೀಯ ಸ್ಥಾಯಿ ಸಮಿತಿ ಸಭೆ ಕರೆಯಲಾಗಿದೆ. ಜುಲೈ 3 ರಂದು ಸಭೆ ನಡೆಯಲಿದೆ.

Uniform Civil Code: ಏಕರೂಪ ನಾಗರಿಕ ಸಂಹಿತೆ ಕುರಿತು ಜುಲೈ 3ರಂದು ಸಂಸದೀಯ ಸ್ಥಾಯಿ ಸಮಿತಿ ಸಭೆ, 31 ಸಂಸದರ ಅಭಿಪ್ರಾಯ ಸಂಗ್ರಹ
ಸಂಸತ್Image Credit source: NDTV
ನಯನಾ ರಾಜೀವ್
|

Updated on: Jun 30, 2023 | 11:16 AM

Share

ಏಕರೂಪ ನಾಗರಿಕ ಸಂಹಿತೆ (Uniform Civil Code)ಕುರಿತು ಸಂಸದರ ಅಭಿಪ್ರಾಯ ತಿಳಿಯಲು ಸಂಸದೀಯ ಸ್ಥಾಯಿ ಸಮಿತಿ(Parliamentary Standing Committee) ಸಭೆ ಕರೆಯಲಾಗಿದೆ. ಜುಲೈ 3 ರಂದು ಸಭೆ ನಡೆಯಲಿದೆ. ಬಿಜೆಪಿ ರಾಜ್ಯಸಭಾ ಸಂಸದ ಸುಶೀಲ್ ಮೋದಿ ನೇತೃತ್ವದ ಸಮಿತಿಯು 31 ಸದಸ್ಯ ಸಂಸದರಿಗೆ ಮಾಹಿತಿ ನೀಡಿದೆ. ಯುಸಿಸಿ ಕುರಿತು ಅವರ ಅಭಿಪ್ರಾಯಗಳನ್ನು ಸಭೆಯಲ್ಲಿ ಕೇಳಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜುಲೈನಲ್ಲಿ ನಡೆಯಲಿರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ(Uniform Civil Code) ಯನ್ನು ಜಾರಿಗೊಳಿಸುವ ಮಸೂದೆಯನ್ನು ಸರ್ಕಾರ ಮಂಡಿಸಬಹುದು ಎಂದು ಹೇಳಲಾಗುತ್ತಿದೆ. ಮಸೂದೆಯನ್ನು ಸಂಸದೀಯ ಸ್ಥಾಯಿ ಸಮಿತಿಗೆ ಕಳುಹಿಸಲಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಸಂಬಂಧಿಸಿದಂತೆ ಕಾನೂನು ಆಯೋಗವು ಜನರಿಂದ ಅಭಿಪ್ರಾಯ ಕೇಳಿತ್ತು, ಇದಕ್ಕಾಗಿ ಒಂದು ತಿಂಗಳ ಕಾಲಾವಕಾಶ ನೀಡಲಾಗಿದ್ದು ಅದು ಜುಲೈ 14ಕ್ಕೆ ಕೊನೆಗೊಳ್ಳಲಿದೆ.

ಮತ್ತಷ್ಟು ಓದಿ: Uniform Civil Code: ಸಂಸತ್ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ ಸಾಧ್ಯತೆ

ಸಂಸತ್ ಮುಂಗಾರು ಅಧಿವೇಶನವು ಜುಲೈ ಕೊನೆಯ ವಾರದಲ್ಲಿ ಆರಂಭವಾಗಿ ಆಗಸ್ಟ್ 10ಕ್ಕೆ ಕೊನೆಗೊಳ್ಳಬಹುದು ಎಂದು ಅಂದಾಜಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಅಧಿವೇಶನದ ದಿನಾಂಕವನ್ನು ಇನ್ನೆರಡು ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಜುಲೈ 17 ಅಥವಾ 20ರಿಂದ ಅಧಿವೇಶನ ಪ್ರಾರಂಭವಾಗಬಹುದು ಎಂದು ಅಂದಾಜಿಸಲಾಗಿದೆ.

ಬಿಜೆಪಿ ಈ ವಿಚಾರದಲ್ಲಿ ಹಿಂದೆ ಸರಿಯುವಂತೆ ಕಾಣುತ್ತಿಲ್ಲ, ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ