AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೋಡನೋಡುತ್ತಿದ್ದಂತೆ ಕುಸಿದುಬಿದ್ದ ಬೆಟ್ಟ; ರುದ್ರಪ್ರಯಾಗದ ಭೂಕುಸಿತದ ವಿಡಿಯೋ ವೈರಲ್

Rudraprayag Landslide: ಗುಡ್ಡದ ಒಂದು ಭಾಗ ಕುಸಿದು ಬೀಳುವ ಮುನ್ನ ಸ್ಥಳೀಯರು ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Viral Video: ನೋಡನೋಡುತ್ತಿದ್ದಂತೆ ಕುಸಿದುಬಿದ್ದ ಬೆಟ್ಟ; ರುದ್ರಪ್ರಯಾಗದ ಭೂಕುಸಿತದ ವಿಡಿಯೋ ವೈರಲ್
ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಭೂಕುಸಿತ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 22, 2022 | 1:39 PM

Share

ರುದ್ರಪ್ರಯಾಗ: ಉತ್ತರಾಖಂಡದ ರುದ್ರಪ್ರಯಾಗದಲ್ಲಿ (Rudraprayag) ಇಂದು (ಗುರುವಾರ) ಭಾರೀ ಭೂಕುಸಿತ  (Landslide) ಉಂಟಾಗಿ ರಾಷ್ಟ್ರೀಯ ಹೆದ್ದಾರಿ-109ರಲ್ಲಿ ಸಂಚಾರ ಸ್ಥಗಿತಗೊಂಡಿದೆ. ನೋಡನೋಡುತ್ತಿದ್ದಂತೆ ಬೆಟ್ಟದ ಒಂದು ಭಾಗವು ತರ್ಸಲಿ ಗ್ರಾಮದ ಬಳಿ ರಸ್ತೆಗೆ ಕುಸಿದು ಬಿದ್ದಿದೆ. ಈ ಭಯಾನಕ ವಿಡಿಯೋ ವೈರಲ್ (Shocking Video Viral) ಆಗಿದೆ. ಅದೃಷ್ಟವಶಾತ್ ಜೀಪ್, ಬೈಕ್, ಬಸ್​ಗಳು ಆ ಸ್ಥಳದತ್ತ ಚಲಿಸುವ ಮೊದಲೇ ಈ ಘಟನೆ ನಡೆದಿರುವುದರಿಂದ ಸಾಕಷ್ಟು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಸ್ತೆ ಬಂದ್ ಆಗಿರುವುದರಿಂದ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಗುಡ್ಡದ ಒಂದು ಭಾಗ ಕುಸಿದು ಬೀಳುವ ಮುನ್ನ ಸ್ಥಳೀಯರು ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸದ್ಯದಲ್ಲೇ ಹೆದ್ದಾರಿಯನ್ನು ಸಂಚಾರಮುಕ್ತಗೊಳಿಸಲಾಗುವುದು, ವಾಹನಗಳ ಸಂಚಾರ ಪುನರಾರಂಭವಾಗಲಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮಯೂರ್ ದೀಕ್ಷಿತ್ ತಿಳಿಸಿದ್ದಾರೆ.

ಇದನ್ನೂ ಓದಿ: BIG NEWS: ನೇಪಾಳದಲ್ಲಿ ಭಾರಿ ಭೂಕುಸಿತ, 13 ಮಂದಿ ಸಾವು, 10 ಮಂದಿ ಕಾಣೆ

“ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಲ್ಲಿ ನಿಲ್ಲಿಸಲಾಗಿದೆ. ಹೆದ್ದಾರಿಯನ್ನು ತೆರೆಯಲಾಗುತ್ತಿದೆ. ಬೆಟ್ಟದ ಮಣ್ಣಿನ ಅವಶೇಷಗಳನ್ನು ತೆರವುಗೊಳಿಸಿದ ನಂತರ ವಾಹನ ಸಂಚಾರ ಪುನರಾರಂಭವಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಕೇದಾರನಾಥದ ಕಡೆಗೆ ಹೋಗುವ ಯಾತ್ರಾರ್ಥಿಗಳನ್ನು ರುದ್ರಪ್ರಯಾಗ, ತಿಲವಾರ, ಅಗಸ್ತ್ಯಮುನಿ ಮತ್ತು ಗುಪ್ತಕಾಶಿಯಲ್ಲಿ ತಡೆಯಗಾಲಿದೆ. ಸೋನ್‌ಪ್ರಯಾಗದಿಂದ ಹಿಂತಿರುಗುತ್ತಿದ್ದವರನ್ನು ಸೋನ್‌ಪ್ರಯಾಗ ಮತ್ತು ಸೀತಾಪುರದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ತಡೆದು ನಿಲ್ಲಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ