AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿಗೆ ಆ.18ರವರೆಗೆ ನ್ಯಾಯಾಂಗ ಬಂಧನ

ಎಸ್‌ಎಸ್‌ಸಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾ ನ್ಯಾಯಾಲಯವು ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿಗೆ ಆಗಸ್ಟ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

BIG NEWS: ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿಗೆ ಆ.18ರವರೆಗೆ ನ್ಯಾಯಾಂಗ ಬಂಧನ
Partha Chatterjee and Arpita Mukherjee
TV9 Web
| Edited By: |

Updated on:Aug 05, 2022 | 6:19 PM

Share

ಶಿಕ್ಷಕರ ನೇಮಕಾತಿ  (SSC) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾ ನ್ಯಾಯಾಲಯವು ಪಾರ್ಥ ಚಟರ್ಜಿ (Partha Chatterjee) ಮತ್ತು ಅರ್ಪಿತಾ ಮುಖರ್ಜಿಗೆ ಆಗಸ್ಟ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣದ ಆರೋಪಿಗಳಾದ ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಅವರನ್ನು ಜುಲೈ 23ರಂದು ಇಡಿ ಬಂಧಿಸಿದ್ದು ಅವರು ಇಲ್ಲಿಯವರೆಗೆ ಇಡಿ ವಶದಲ್ಲೇ ಇದ್ದಾರೆ. ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಚಟರ್ಜಿ ಅವರನ್ನು ಮಮತಾ ಬ್ಯಾನರ್ಜಿ ಟಿಎಂಸಿ ನೇತೃತ್ವದ ತಮ್ಮ ಸಚಿವ ಸಂಪುಟದಿಂದ ತೆಗೆದು ಹಾಕಿದ್ದಾರೆ. ಚಟರ್ಜಿ ಅವರು 15 ದಿನ ನಮ್ಮ ವಶದಲ್ಲಿದ್ದರು. ಅದರಲ್ಲಿ ಎರಡು ದಿನ ಸರ್ಕಾರಿ ಎಸ್ಎಸ್ ಕೆಎಂ ಆಸ್ಪತ್ರೆಗೆ ದಾಖಲಾಗುವ ಮೂಲಕ ಎರಡು ದಿನಗಳನ್ನು ಅವರು ವ್ಯರ್ಥ ಮಾಡಿದ್ದಾರೆ. ಕಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಚಟರ್ಜಿ ಅವರನ್ನು ಭುವನೇಶ್ವರದಲ್ಲಿರುವ ಏಮ್ಸ್ ಗೆ ಕರದೊಯ್ದು ಅಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿತ್ತು. ಚಟರ್ಜಿ ಅವರಿಗೆ ಆರೋಗ್ಯ ಸಮಸ್ಯೆಯೇನೂ ಇಲ್ಲ ಎಂದು ಅಲ್ಲಿನ ವೈದ್ಯರು ಹೇಳಿದ್ದರು. ಮುಖರ್ಜಿ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ಹಲವು ದಾಖಲೆ ಪತ್ರಗಳ ಜತೆ 49.8 ಕೋಟಿ ನಗದು, ದೊಡ್ಡ ಪ್ರಮಾಣದ ಚಿನ್ನಾಭರಣ, ಚಿನ್ನದ ಗಟ್ಟಿಯನ್ನು ಇಡಿ ವಶ ಪಡಿಸಿದೆ.

ಅರ್ಪಿತಾ ಮುಖರ್ಜಿ ಎಲ್ಐಸಿ ಪಾಲಿಸಿಗಳಿಗೆ ಪಾರ್ಥ ಚಟರ್ಜಿ ನಾಮಿನಿ

ಅರ್ಪಿತಾ ಮುಖರ್ಜಿ (Arpita Mukherjee) ಅವರ ಹೆಸರಲ್ಲಿ 31 ಎಲ್ಐಸಿ (LIC)  ಪಾಲಿಸಿ ಇದೆ. ಈ ಪಾಲಿಸಿಗಳ ನಾಮಿನಿ ಪಾರ್ಥ  ಚಟರ್ಜಿ ಆಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಅರ್ಪಿತಾ ಮತ್ತು ಪಾರ್ಥ ಚಟರ್ಜಿ 2012 ಜನವರಿ 1ರಂದು ಎಪಿಎ ಯುಟಿಲಿಟಿ ಸರ್ವೀಸಸ್​​​ನಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆರೋಪಿಗಳ ಈ ಪಾಲುದಾರಿಕೆಯ ಸಂಸ್ಥೆಯ ಹೆಸರಿಗೆ ಆಸ್ತಿಯನ್ನು ತರಲಾಗಿತ್ತು ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ. ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂಲ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಇದನ್ನೂ ಓದಿ
Image
National Handloom Day: ಆ.7ರಂದು 8ನೇ ರಾಷ್ಟ್ರೀಯ ಕೈಮಗ್ಗ ದಿನದ ಆಚರಣೆ: ಸಚಿವ ದರ್ಶನಾ ಜರ್ದೋಶ್
Image
ಕಾನ್ಸ್‌ಟೇಬಲ್ ಹಣೆಬರಹ ಬದಲಾಯಿಸಿಬಿಟ್ಟ 6 ರೂಪಾಯಿ ಲಾಟರಿ ಟಿಕೆಟ್!
Image
ನೂರಾರು ಪ್ರಯಾಣಿಕರಿದ್ದ ಅಮರನಾಥ್ ಎಕ್ಸ್ ಪ್ರೆಸ್ ರೈಲು ಹಾದಿ ಬಿಟ್ಟು ಬೇರೊಂದು ಟ್ರ್ಯಾಕ್​ನಲ್ಲಿ 3 ಕಿಮೀ ಸಂಚರಿಸಿತು! ಆಮೇಲೇನಾಯ್ತು?
Image
Freedom Fighters: ಸ್ವಾತಂತ್ರ್ಯ ಸಂಗ್ರಾಮದ ಸ್ಮೃತಿಗಳು; ಇದು ನಿಮ್ಮೂರಿನಲ್ಲೇ ನಡೆದ ಸ್ವಾತಂತ್ರ್ಯ ಹೋರಾಟದ ಕೈಗನ್ನಡಿ

ಆರೋಪಿಗಳ ಈ ಪಾಲುದಾರಿಕೆಯ ಸಂಸ್ಥೆಯ ಹೆಸರಿಗೆ ಆಸ್ತಿಯನ್ನು ತರಲಾಗಿತ್ತು ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ. ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂವ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ಇಡಿ ಶೋಧ  ನಡೆಸಿದಾಗ ಎಡಿಎಸ್ಆರ್ ಬೋಲಾಪುರ್  ಕಚೇರಿಯಲ್ಲಿ  ನೋಂದಣಿ ಮಾಡಿದ ಒಪ್ಪಂದ ಪತ್ರ ಸಿಕ್ಕಿದೆ. ಈ ದಾಖಲೆಗಳನ್ನು ಇಡಿ ವಶಪಡಿಸಿಕೊಂಡಿದೆ. ಈ ದಾಖಲೆಗಳ ಪ್ರಕಾರ ಇವರಿಬ್ಬರೂ 2012ರಿಂದ ಪಾಲುದಾರರಾಗಿದ್ದಾರೆ. ಕೊಲ್ಕತ್ತಾದ ವಿಶೇಷ ನ್ಯಾಯಾಲಯ ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಅವರನ್ನು ಆಗಸ್ಟ್ 5ರ ವರೆಗೆ ಇಡಿ ವಶಕ್ಕೆ ನೀಡಿದೆ. ಜುಲೈ 22ರಂದು ಇಡಿ ಅರ್ಪಿತಾ ಮುಖರ್ಜಿ ಮನೆ ಮೇಲೆ ದಾಳಿ ನಡೆಸಿ 21.90 ಕೋಟಿ ನಗದು ವಶಪಡಿಸಿತ್ತು. ತನಿಖಾ ಸಂಸ್ಥೆ  56 ಲಕ್ಷ ಮೌಲ್ಯದ ವಿದೇಶಿ ಹಣ ಮತ್ತು 76ಲಕ್ಷ ಮೌಲ್ಯದ ಚಿನ್ನ ವಶಪಡಿಸಿದೆ.

ಹೆಚ್ಚಿನ ರಾಷ್ಟ್ರೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Published On - 5:59 pm, Fri, 5 August 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ