AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪೂರೈಕೆಗೆ ಪೇಟೆಂಟ್ ಸಡಿಲಿಕೆ ಜೊತೆಗೆ ಸಹಭಾಗಿತ್ವ ಕೂಡ ಮುಖ್ಯ; ಭಾರತ್ ಬಯೋಟೆಕ್ ಜಂಟಿ ನಿರ್ದೇಶಕಿ

ಭಾರತ್ ಬಯೋಟೆಕ್ ಸಂಸ್ಥೆ ಈ ಬಗ್ಗೆ ಇತರ ಕಂಪೆನಿಗಳೊಂದಿಗೆ ಕೈಜೋಡಿಸಲು ತಯಾರಿದೆ. ಕಂಪೆನಿಯ ಈ ಮೊದಲ ಇತಿಹಾಸವೇ ಭಾರತ್ ಬಯೋಟೆಕ್ ಸಹಭಾಗಿತ್ವವನ್ನು ಬೆಂಬಲಿಸುತ್ತದೆ ಎಂಬುದಕ್ಕೆ ಸಾಕ್ಷಿ ಎಂದು ಎಲ್ಲಾ ನುಡಿದಿದ್ದಾರೆ.

ಕೊರೊನಾ ಲಸಿಕೆ ಪೂರೈಕೆಗೆ ಪೇಟೆಂಟ್ ಸಡಿಲಿಕೆ ಜೊತೆಗೆ ಸಹಭಾಗಿತ್ವ ಕೂಡ ಮುಖ್ಯ; ಭಾರತ್ ಬಯೋಟೆಕ್ ಜಂಟಿ ನಿರ್ದೇಶಕಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 23, 2021 | 12:41 PM

Share

ದೆಹಲಿ: ಸಹಭಾಗಿತ್ವ, ತಂತ್ರಜ್ಞಾನ ಹಂಚಿಕೆ ಹಾಗೂ ಉಪಕರಣಗಳ ಸಾಗಾಣಿಕೆ, ಕೊರೊನಾ ಲಸಿಕೆ ಹಂಚಿಕೆ ಸರಿಯಾಗಿ ಆಗಲು ಮುಖ್ಯ ಅಂಶಗಳು ಎಂದು ಭಾರತ್ ಬಯೋಟೆಕ್​ನ ಜಂಟಿ ಎಮ್​ಡಿ ಸುಚಿತ್ರಾ ಎಲ್ಲಾ ಶನಿವಾರ ತಿಳಿಸಿದ್ದಾರೆ. ಬಹುದೊಡ್ಡ ಮಟ್ಟದಲ್ಲಿ ಲಸಿಕೆ ಪೂರೈಕೆಗೆ ಈ ಅಂಶಗಳನ್ನು ಪರಿಗಣಿಸುವುದು ಅವಶ್ಯಕ ಎಂದು ಅವರು ಹೇಳಿದ್ದಾರೆ. ಇಯು- ಇಂಡಿಯಾ ಬ್ಯುಸಿನೆಸ್ ದುಂಡುಮೇಜಿನಲ್ಲಿ ಮಾತನಾಡಿದ ಎಲ್ಲಾ, ಪೇಟೆಂಟ್ ಸಡಿಲಿಕೆಗಿಂತಲೂ ಈ ಮೇಲೆ ಸೂಚಿಸಿದ ವಿಚಾರಗಳು ಮುಖ್ಯ. ಇದು ದೇಶದ ಲಸಿಕೆ ಬೇಡಿಕೆ ಮಾತ್ರವಲ್ಲ, ಜಾಗತಿಕ ಲಸಿಕೆ ಪೂರೈಕೆಗೆ ಅಗತ್ಯ ವಿಚಾರ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ಲಸಿಕೆಯನ್ನು ಭಾರತದಂಥ ಬೃಹತ್ ರಾಷ್ಟ್ರಕ್ಕೆ ಪೂರೈಸುವುದಕ್ಕೆ ಸಹಭಾಗಿತ್ವದಲ್ಲಿ ಕೆಲಸ ಮಾಡುವುದು ಅಗತ್ಯವಾಗಿದೆ. ನಾವು ಕೊವ್ಯಾಕ್ಸಿನ್ ಲಸಿಕೆಯನ್ನು ಯುಎಸ್​ನಲ್ಲಿ ರಿಜಿಸ್ಟರ್ ಮಾಡಿಸಿಕೊಳ್ಳುತ್ತಿದ್ದೇವೆ. ಯುರೋಪ್​ನಲ್ಲಿ ಕೂಡ ಈ ಕಾರ್ಯ ಆಗುವುದು ಬೇಕಿದೆ. ಯುರೋಪಿಯನ್ ಕಂಪೆನಿಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳೊಂದಿಗೆ ಸಹಭಾಗಿತ್ವ ಹೊಂದಬೇಕಿದೆ ಎಂದು ಸುಚಿತ್ರಾ ಎಲ್ಲಾ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಭಾರತ ದೇಶದ 1.3 ಬಿಲಿಯನ್ ಜನರಿಗೆ ಬೇಕಿರುವ ಲಸಿಕೆಯನ್ನು ಪೂರೈಸುವುದು ಕಷ್ಟಸಾಧ್ಯ. ನಮಗೆಲ್ಲರಿಗೂ ಈ ವಿಚಾರ ತಿಳಿದೇ ಇದೆ. ಇದಕ್ಕೆ ಪರಿಹಾರವಾಗಿ ನಾವು ಹೆಚ್ಚಿನ ತಂತ್ರಜ್ಞಾನವನ್ನು, ಪೇಟೆಂಟ್ ಸಡಿಲಿಕೆಯನ್ನು ನಮ್ಮ ಸೌಲಭ್ಯ ಬಳಸಿ ಲಸಿಕೆ ಹಂಚಿಕೆಯನ್ನು ವೇಗವಾಗಿ ನಡೆಸುವುದು ಸಾಧ್ಯವಿದೆ ಎಂದು ತಿಳಿಸಿದ್ದಾರೆ.

ಭಾರತ್ ಬಯೋಟೆಕ್ ಸಂಸ್ಥೆ ಈ ಬಗ್ಗೆ ಇತರ ಕಂಪೆನಿಗಳೊಂದಿಗೆ ಕೈಜೋಡಿಸಲು ತಯಾರಿದೆ. ಕಂಪೆನಿಯ ಈ ಮೊದಲ ಇತಿಹಾಸವೇ ಭಾರತ್ ಬಯೋಟೆಕ್ ಸಹಭಾಗಿತ್ವವನ್ನು ಬೆಂಬಲಿಸುತ್ತದೆ ಎಂಬುದಕ್ಕೆ ಸಾಕ್ಷಿ ಎಂದು ಎಲ್ಲಾ ನುಡಿದಿದ್ದಾರೆ.

ಇದನ್ನೂ ಓದಿ: ನಗರಗಳ ಬಳಿಕ ಹಳ್ಳಿಗಳು ಈಗ ಕೊರೊನಾ ಸೋಂಕಿನ ಅಪಾಯದಲ್ಲಿ; ಪರಮಾತ್ಮ ನಿರ್ಭರ್ ಭಾರತ್ ಎಂದ ರಾಹುಲ್ ಗಾಂಧಿ

ನಿಮ್ಮ ಹತ್ತಿರದ ಕೇಂದ್ರದಲ್ಲಿ ಕೊವ್ಯಾಕ್ಸಿನ್​ ಅಥವಾ ಕೊವಿಶೀಲ್ಡ್​ ಇವೆರಡರಲ್ಲಿ ಯಾವುದು ಲಭ್ಯವಿದೆ ಎಂದು ತಿಳಿಯಲು ಹೀಗೆ ಮಾಡಿ

(Partnerships Tech transfers supply of materials must to scale up Vaccine Production says Bharat Biotech Joint MD)

Published On - 10:55 pm, Sun, 9 May 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?