AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indigo Flight: ಇಂಡಿಗೋ ವಿಮಾನ ಪ್ರಯಾಣಿಕ ಅಸ್ವಸ್ಥ: ಜೆಡ್ಡಾದಿಂದ ದೆಹಲಿಗೆ ಹೊರಟಿದ್ದ ವಿಮಾನ ಜೋಧ್​ಪುರದಲ್ಲಿ ತುರ್ತು ಭೂಸ್ಪರ್ಶ

ಪ್ರಯಾಣಿಕರೊಬ್ಬರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಮಂಗಳವಾರ ಜೆಡ್ಡಾದಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನವನ್ನು ಜೋಧ್​ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು.

Indigo Flight: ಇಂಡಿಗೋ ವಿಮಾನ ಪ್ರಯಾಣಿಕ ಅಸ್ವಸ್ಥ: ಜೆಡ್ಡಾದಿಂದ ದೆಹಲಿಗೆ ಹೊರಟಿದ್ದ ವಿಮಾನ ಜೋಧ್​ಪುರದಲ್ಲಿ ತುರ್ತು ಭೂಸ್ಪರ್ಶ
ಇಂಡಿಗೋ ವಿಮಾನ
ನಯನಾ ರಾಜೀವ್
|

Updated on: Feb 07, 2023 | 12:55 PM

Share

ಪ್ರಯಾಣಿಕರೊಬ್ಬರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಮಂಗಳವಾರ ಜೆಡ್ಡಾದಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನವನ್ನು ಜೋಧ್​ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಪ್ರಯಾಣಿಕನನ್ನು ಜೋಧ್‌ಪುರದ ಗೋಯಲ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಕಸ್ಟಮ್ಸ್ ಅಧಿಕಾರಿಗಳು ಈಗ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಕೆಲ ದಿನಗಳ ಹಿಂದೆ ಮಧುರೈ-ದೆಹಲಿ ಇಂಡಿಗೋ ವಿಮಾನದಲ್ಲಿ 60 ವರ್ಷದ ಪ್ರಯಾಣಿಕರೊಬ್ಬರಿಗೆ ರಕ್ತಸ್ರಾವವನ್ನು ಶುರುವಾಗಿದ್ದ ಕಾರಣ, ಕೆಲವೇ ಇಂದೋರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು, ಆದರೆ, ಸ್ಥಳೀಯ ಆಸ್ಪತ್ರೆಯ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಪ್ರಯಾಣಿಕರು ನೋಯ್ಡಾ ನಿವಾಸಿ ಎಂಬುದು ತಿಳಿದುಬಂದಿತ್ತು.

ಮತ್ತಷ್ಟು ಓದಿ: Nepal Air Crash: ಯೇತಿ ಏರ್‌ಲೈನ್ಸ್ ವಿಮಾನ ಪತನಕ್ಕೆ ಎಂಜಿನ್ ಸಮಸ್ಯೆ ಕಾರಣ: ವರದಿ

ಕಳೆದ ನಾಲ್ಕು ದಿನಗಳ ಹಿಂದೆ ಏರ್ ಇಂಡಿಯಾ ವಿಮಾನದ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ತುರ್ತು ಭೂಸ್ಪರ್ಶ ಮಾಡಲಾಗಿತ್ತು, ಅಬುದಾಬಿಯಿಂದ ಕ್ಯಾಲಿಕಟ್‍ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಒಂದು ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ವಿಮಾನವು ನಿಲ್ದಾಣಕ್ಕೆ ಹಿಂದಿರುಗಿದೆ. ಯಾವುದೇ ಅಪಾಯ ಪ್ರಕರಣಗಳು ಜರುಗಿಲ್ಲದ ಕಾರಣ ಆತಂಕ ದೂರವಾಗಿತ್ತು.

ಏರ್ ಇಂಡಿಯಾ ಎಕ್ಸ್‍ಪ್ರೆಸ್ ವಿಮಾನದ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಬುದಾಬಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಡೈರೆಕ್ಟರ್ ಜನರಲ್ ಆಫ್ ಸಿವಿಲ್ ಏವಿಯೇಷನ್ ಹೇಳಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ