AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ವಿಮಾನದಲ್ಲಿ ಅವಾಂತರ ಸೃಷ್ಟಿಸಿದ ಪ್ರಯಾಣಿಕ; ಸಹಪ್ರಯಾಣಿಕರು, ಸಿಬ್ಬಂದಿ ಕಂಗಾಲು

ಆ ಪ್ರಯಾಣಿಕನಿಗೆ ಮಾನಸಿಕವಾಗಿ ಏನೋ ಸಮಸ್ಯೆ ಇದ್ದಂತೆ ತೋರುತ್ತಿತ್ತು. ಆತ ಮೊದಲು ಮಾಡುವುದು ನೋಡಿ, ವಿಮಾನವನ್ನು ತುರ್ತು ಲ್ಯಾಂಡಿಂಗ್​ ಮಾಡುವ ಪರಿಸ್ಥಿತಿ ಎದುರಾಗಬಹುದು ಎಂದುಕೊಳ್ಳಲಾಗಿತ್ತು.

ದೆಹಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ವಿಮಾನದಲ್ಲಿ ಅವಾಂತರ ಸೃಷ್ಟಿಸಿದ ಪ್ರಯಾಣಿಕ; ಸಹಪ್ರಯಾಣಿಕರು, ಸಿಬ್ಬಂದಿ ಕಂಗಾಲು
ಸ್ಪೈಸ್​ ಜೆಟ್​ ವಿಮಾನ
Lakshmi Hegde
|

Updated on: Mar 28, 2021 | 12:11 PM

Share

ದೆಹಲಿ: ವಿಮಾನದಲ್ಲಿ ಹಲವು ವಿಚಿತ್ರ ಘಟನೆಗಳು ನಡೆಯುತ್ತವೆ. ಕೆಲವು ಪ್ರಯಾಣಿಕರಂತೂ ತಮ್ಮ ವಿಲಕ್ಷಣ ವರ್ತನೆಗಳಿಂದ ಈಗಾಗಲೇ ಸುದ್ದಿ ಮಾಡಿದ್ದಾರೆ. ಹಾಗೇ ಈಗೊಬ್ಬ ಪ್ರಯಾಣಿಕರ ಆಕಾಶದೆತ್ತರ ವಿಮಾನ ಹಾರಾಡುತ್ತಿದ್ದಾಗ ಅವಘಡವೊಂದನ್ನು ಸೃಷ್ಟಿಸಿ ಸುದ್ದಿಯಾಗಿದ್ದಾರೆ. ಶನಿವಾರ ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ಸ್ಪೈಸ್​ಜೆಟ್​ ವಿಮಾನದಲ್ಲಿ ಘಟನೆ ನಡೆದಿದ್ದು, ಪುಣ್ಯಕ್ಕೆ ಯಾವುದೇ ದೊಡ್ಡ ಅನಾಹುತ ಆಗಿಲ್ಲ.

ದೆಹಲಿಯಿಂದ ವಿಮಾನ (SG-2003) ಹೊರಟ ಕೆಲವು ಹೊತ್ತುಗಳ ಬಳಿಕ ಪ್ರಯಾಣಿಕನೊಬ್ಬ ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು ತೆರೆಯಲು ಇನ್ನಿಲ್ಲದಂತೆ ಪ್ರಯತ್ನಿಸಿದ್ದಾನೆ. ಎಷ್ಟೇ ಹೇಳಿದರೂ ಹಿಂದೆ ಸರಿಯದೆ ಸಿಕ್ಕಾಪಟೆ ಆಕ್ರಮಣಕಾರಿ ಮನೋಭಾವದಲ್ಲಿ ಒಂದೇ ಸಮ ಬಾಗಿಲನ್ನು ಎಳೆದಿದ್ದಾನೆ. ನಂತರ ವಿಮಾನ ಸಿಬ್ಬಂದಿ ಆತನನ್ನು ಗಟ್ಟಿಯಾಗಿ ಹಿಡಿದುಕೊಂಡು, ತಡೆದಿದ್ದಾರೆ. ಇದರಿಂದಾಗಿ ಇಡೀ ವಿಮಾನದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಫ್ಲೈಟ್​ ವಾರಾಣಸಿಗೆ ಹೋಗುವವರೆಗೂ ವಿಮಾನ ಸಿಬ್ಬಂದಿ ಆತನನ್ನು ಬಿಡಲಿಲ್ಲ. ಸಹ ಪ್ರಯಾಣಿಕರೂ ಕೂಡ ಆತನನ್ನು ನಿಯಂತ್ರಿಸಲು ಸಹಾಯ ಮಾಡಿದರು ಎಂದು ಸ್ಪೈಸ್​ ಜೆಟ್​ ತಿಳಿಸಿದೆ.

ಆ ಪ್ರಯಾಣಿಕನಿಗೆ ಮಾನಸಿಕವಾಗಿ ಏನೋ ಸಮಸ್ಯೆ ಇದ್ದಂತೆ ತೋರುತ್ತಿತ್ತು. ಆತ ಮೊದಲು ಮಾಡುವುದು ನೋಡಿ, ವಿಮಾನವನ್ನು ತುರ್ತು ಲ್ಯಾಂಡಿಂಗ್​ ಮಾಡುವ ಪರಿಸ್ಥಿತಿ ಎದುರಾಗಬಹುದು ಎಂದುಕೊಳ್ಳಲಾಗಿತ್ತು. ಆದರೆ ಅವನನ್ನು ನಿಯಂತ್ರಣಕ್ಕೆ ತರುವ ಮೂಲಕ ವಾರಾಣಸಿಯಲ್ಲಿ ವಿಮಾನ ಲ್ಯಾಂಡ್​ ಮಾಡಲಾಯಿತು. ಏರ್​ಪೋರ್ಟ್​ನಲ್ಲಿ ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದೂ ತಿಳಿಸಿದೆ.

ಇದನ್ನೂ ಓದಿ: Filmfare Awards: 66ನೇ ಫಿಲ್ಮ್​ ಫೇರ್​ ಪ್ರಶಸ್ತಿ ಪಡೆದು ಮಿಂಚುತ್ತಿರುವವರು ಯಾರೆಲ್ಲ? ಇಲ್ಲಿದೆ ಪೂರ್ಣ ಪಟ್ಟಿ

UPSC Recruitment 2021: ಯುಪಿಎಸ್​ಸಿಯಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

Follow Us
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್