AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ವಿಮಾನದಲ್ಲಿ ಅವಾಂತರ ಸೃಷ್ಟಿಸಿದ ಪ್ರಯಾಣಿಕ; ಸಹಪ್ರಯಾಣಿಕರು, ಸಿಬ್ಬಂದಿ ಕಂಗಾಲು

ಆ ಪ್ರಯಾಣಿಕನಿಗೆ ಮಾನಸಿಕವಾಗಿ ಏನೋ ಸಮಸ್ಯೆ ಇದ್ದಂತೆ ತೋರುತ್ತಿತ್ತು. ಆತ ಮೊದಲು ಮಾಡುವುದು ನೋಡಿ, ವಿಮಾನವನ್ನು ತುರ್ತು ಲ್ಯಾಂಡಿಂಗ್​ ಮಾಡುವ ಪರಿಸ್ಥಿತಿ ಎದುರಾಗಬಹುದು ಎಂದುಕೊಳ್ಳಲಾಗಿತ್ತು.

ದೆಹಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ವಿಮಾನದಲ್ಲಿ ಅವಾಂತರ ಸೃಷ್ಟಿಸಿದ ಪ್ರಯಾಣಿಕ; ಸಹಪ್ರಯಾಣಿಕರು, ಸಿಬ್ಬಂದಿ ಕಂಗಾಲು
ಸ್ಪೈಸ್​ ಜೆಟ್​ ವಿಮಾನ
Lakshmi Hegde
|

Updated on: Mar 28, 2021 | 12:11 PM

Share

ದೆಹಲಿ: ವಿಮಾನದಲ್ಲಿ ಹಲವು ವಿಚಿತ್ರ ಘಟನೆಗಳು ನಡೆಯುತ್ತವೆ. ಕೆಲವು ಪ್ರಯಾಣಿಕರಂತೂ ತಮ್ಮ ವಿಲಕ್ಷಣ ವರ್ತನೆಗಳಿಂದ ಈಗಾಗಲೇ ಸುದ್ದಿ ಮಾಡಿದ್ದಾರೆ. ಹಾಗೇ ಈಗೊಬ್ಬ ಪ್ರಯಾಣಿಕರ ಆಕಾಶದೆತ್ತರ ವಿಮಾನ ಹಾರಾಡುತ್ತಿದ್ದಾಗ ಅವಘಡವೊಂದನ್ನು ಸೃಷ್ಟಿಸಿ ಸುದ್ದಿಯಾಗಿದ್ದಾರೆ. ಶನಿವಾರ ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ಸ್ಪೈಸ್​ಜೆಟ್​ ವಿಮಾನದಲ್ಲಿ ಘಟನೆ ನಡೆದಿದ್ದು, ಪುಣ್ಯಕ್ಕೆ ಯಾವುದೇ ದೊಡ್ಡ ಅನಾಹುತ ಆಗಿಲ್ಲ.

ದೆಹಲಿಯಿಂದ ವಿಮಾನ (SG-2003) ಹೊರಟ ಕೆಲವು ಹೊತ್ತುಗಳ ಬಳಿಕ ಪ್ರಯಾಣಿಕನೊಬ್ಬ ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು ತೆರೆಯಲು ಇನ್ನಿಲ್ಲದಂತೆ ಪ್ರಯತ್ನಿಸಿದ್ದಾನೆ. ಎಷ್ಟೇ ಹೇಳಿದರೂ ಹಿಂದೆ ಸರಿಯದೆ ಸಿಕ್ಕಾಪಟೆ ಆಕ್ರಮಣಕಾರಿ ಮನೋಭಾವದಲ್ಲಿ ಒಂದೇ ಸಮ ಬಾಗಿಲನ್ನು ಎಳೆದಿದ್ದಾನೆ. ನಂತರ ವಿಮಾನ ಸಿಬ್ಬಂದಿ ಆತನನ್ನು ಗಟ್ಟಿಯಾಗಿ ಹಿಡಿದುಕೊಂಡು, ತಡೆದಿದ್ದಾರೆ. ಇದರಿಂದಾಗಿ ಇಡೀ ವಿಮಾನದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಫ್ಲೈಟ್​ ವಾರಾಣಸಿಗೆ ಹೋಗುವವರೆಗೂ ವಿಮಾನ ಸಿಬ್ಬಂದಿ ಆತನನ್ನು ಬಿಡಲಿಲ್ಲ. ಸಹ ಪ್ರಯಾಣಿಕರೂ ಕೂಡ ಆತನನ್ನು ನಿಯಂತ್ರಿಸಲು ಸಹಾಯ ಮಾಡಿದರು ಎಂದು ಸ್ಪೈಸ್​ ಜೆಟ್​ ತಿಳಿಸಿದೆ.

ಆ ಪ್ರಯಾಣಿಕನಿಗೆ ಮಾನಸಿಕವಾಗಿ ಏನೋ ಸಮಸ್ಯೆ ಇದ್ದಂತೆ ತೋರುತ್ತಿತ್ತು. ಆತ ಮೊದಲು ಮಾಡುವುದು ನೋಡಿ, ವಿಮಾನವನ್ನು ತುರ್ತು ಲ್ಯಾಂಡಿಂಗ್​ ಮಾಡುವ ಪರಿಸ್ಥಿತಿ ಎದುರಾಗಬಹುದು ಎಂದುಕೊಳ್ಳಲಾಗಿತ್ತು. ಆದರೆ ಅವನನ್ನು ನಿಯಂತ್ರಣಕ್ಕೆ ತರುವ ಮೂಲಕ ವಾರಾಣಸಿಯಲ್ಲಿ ವಿಮಾನ ಲ್ಯಾಂಡ್​ ಮಾಡಲಾಯಿತು. ಏರ್​ಪೋರ್ಟ್​ನಲ್ಲಿ ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದೂ ತಿಳಿಸಿದೆ.

ಇದನ್ನೂ ಓದಿ: Filmfare Awards: 66ನೇ ಫಿಲ್ಮ್​ ಫೇರ್​ ಪ್ರಶಸ್ತಿ ಪಡೆದು ಮಿಂಚುತ್ತಿರುವವರು ಯಾರೆಲ್ಲ? ಇಲ್ಲಿದೆ ಪೂರ್ಣ ಪಟ್ಟಿ

UPSC Recruitment 2021: ಯುಪಿಎಸ್​ಸಿಯಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!