ಬಿಹಾರದ ಸಹರ್ಸಾದಲ್ಲಿ ಪ್ರಯಾಣಿಕರ ರೈಲಿನಲ್ಲಿ ಅಗ್ನಿ ಅವಘಡ, ಪ್ರಯಾಣಿಕರು ಸುರಕ್ಷಿತ

ಬಿಹಾರದ ಸಹರ್ಸಾದಲ್ಲಿ ಇಂದು ಬೆಳಗಿನ ಜಾವ ಪ್ರಯಾಣಿಕರ ರೈಲೊಂದರಲ್ಲಿ ಭೀಕರ ಅಗ್ನಿ ಅವಘಡ(Fire Accident) ಸಂಭವಿಸಿದೆ. ಅದೃಷ್ಟವಶಾತ್ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತಕ್ಷಣವೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಮಷ್ಟಿಪುರ ಮತ್ತು ಸಹರ್ಸಾ ನಡುವೆ ಚಲಿಸುವ ‘ರೈಲು ಸಂಖ್ಯೆ 63344 ಸಿಮ್ರಿ ಭಕ್ತಿಯಾರ್ಪುರ್ ರೈಲು ನಿಲ್ದಾಣದಲ್ಲಿ ನಿಂತಿದ್ದಾಗ, ಬೆಳಗಿನ ಜಾವ ಸುಮಾರು 3 ಗಂಟೆಗೆ ರೈಲಿನ ಎಂಜಿನ್ ಮತ್ತು ಅದನ್ನು ಹೊಂದಿಕೊಂಡಿದ್ದ ಬೋಗಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.

ಬಿಹಾರದ ಸಹರ್ಸಾದಲ್ಲಿ ಪ್ರಯಾಣಿಕರ ರೈಲಿನಲ್ಲಿ ಅಗ್ನಿ ಅವಘಡ, ಪ್ರಯಾಣಿಕರು ಸುರಕ್ಷಿತ
ರೈಲು

Updated on: Aug 03, 2026 | 10:54 AM

ಸಹರ್ಸಾ, ಆಗಸ್ಟ್​ 03: ಬಿಹಾರದ ಸಹರ್ಸಾದಲ್ಲಿ ಇಂದು ಬೆಳಗಿನ ಜಾವ ಪ್ರಯಾಣಿಕರ ರೈಲೊಂದರಲ್ಲಿ ಭೀಕರ ಅಗ್ನಿ ಅವಘಡ(Fire Accident) ಸಂಭವಿಸಿದೆ. ಅದೃಷ್ಟವಶಾತ್ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತಕ್ಷಣವೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಮಷ್ಟಿಪುರ ಮತ್ತು ಸಹರ್ಸಾ ನಡುವೆ ಚಲಿಸುವ ‘ರೈಲು ಸಂಖ್ಯೆ 63344 ಸಿಮ್ರಿ ಭಕ್ತಿಯಾರ್ಪುರ್ ರೈಲು ನಿಲ್ದಾಣದಲ್ಲಿ ನಿಂತಿದ್ದಾಗ, ಬೆಳಗಿನ ಜಾವ ಸುಮಾರು 3 ಗಂಟೆಗೆ ರೈಲಿನ ಎಂಜಿನ್ ಮತ್ತು ಅದನ್ನು ಹೊಂದಿಕೊಂಡಿದ್ದ ಬೋಗಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಹೊತ್ತಿಕೊಂಡಾಗ ಹೆಚ್ಚಿನ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು. ಆದರೆ ಬೆಂಕಿಯ ಜ್ವಾಲೆ ಮತ್ತು ಹೊಗೆಯನ್ನು ಕಂಡ ಸಿಬ್ಬಂದಿ ಹಾಗೂ ಸ್ಥಳೀಯರು ತಕ್ಷಣವೇ ಪ್ರಯಾಣಿಕರನ್ನು ಎಚ್ಚರಿಸಿ ಹೊರತರಲು ಯಶಸ್ವಿಯಾದರು. ಬೆಂಕಿಯ ಕೆನ್ನಾಲಗೆಗೆ ಇಡೀ ಬೋಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಕಪ್ಪು ಬಣ್ಣಕ್ಕೆ ತಿರುಗಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಹಾಗೂ ರೈಲ್ವೆ ಸುರಕ್ಷತಾ ಪಡೆ (RPF) ಸಿಬ್ಬಂದಿ ಸುಮಾರು ಎರಡೂವರೆ ಗಂಟೆಗಳ ಕಾಲ ಸತತ ಶ್ರಮಿಸಿ ಬೆಂಕಿಯನ್ನು ನಂದಿಸಿದರು. ಈ ಘಟನೆಯಿಂದಾಗಿ ಈ ಮಾರ್ಗದಲ್ಲಿ ಕೆಲವು ಗಂಟೆಗಳ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಹಾನಿಗೊಳಗಾದ ಬೋಗಿಯನ್ನು ಬೇರ್ಪಡಿಸಿದ ನಂತರ, ಬೆಳಿಗ್ಗೆ 6 ಗಂಟೆಯ ಹೊತ್ತಿಗೆ ಮಾರ್ಗವನ್ನು ಸುಸ್ಥಿತಿಗೆ ತರಲಾಯಿತು.

ಮತ್ತಷ್ಟು ಓದಿ: ಧಗಧಗಿಸಿದ ಮಲೆ ಮಹದೇಶ್ವರ ಬೆಟ್ಟಡ ಒಡಲು: 100 ಎಕರೆಗೂ ಅಧಿಕ ವನಸಂಪತ್ತು ನಾಶ

ಬೆಂಕಿ ಅವಘಡಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆಯೇ ಎಂಬ ಕೋನದಲ್ಲಿ ರೈಲ್ವೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ‘ಮೆಮು’ (MEMU) ಮತ್ತು ‘ಡೆಮು’ (DEMU) ಪ್ಯಾಸೆಂಜರ್ ರೈಲುಗಳಲ್ಲಿ ಎಲೆಕ್ಟ್ರಿಕಲ್ ಶಾರ್ಟ್ ಸರ್ಕ್ಯೂಟ್‌ಗಳಿಂದ ಬೆಂಕಿ ಬೀಳುವ ಘಟನೆಗಳು ಹೆಚ್ಚುತ್ತಿದ್ದು, ಪೂರ್ವ ಮಧ್ಯ ರೈಲ್ವೆ ಆಡಳಿತ ಮಂಡಳಿಯು ಈ ಘಟನೆಯ ಜಂಟಿ ಪರಿಶೀಲನೆಗೆ ಆದೇಶಿಸಿದೆ.

ಬೆಳಗಿನ ಜಾವ ನಿಲ್ದಾಣಗಳಲ್ಲಿ ನಿಲ್ಲುವ ರೈಲುಗಳಲ್ಲಿ ತುರ್ತು ನಿರ್ಗಮನ ವ್ಯವಸ್ಥೆ ಮತ್ತು ಅಗ್ನಿಶಾಮಕ ಉಪಕರಣಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಆದೇಶಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us