AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುರೈ ರೈಲಿನಲ್ಲಿ ಬೆಂಕಿಗೆ ಕಾರಣವಾಗಿದ್ದು ಅಕ್ರಮವಾಗಿ ಸಾಗಿಸಲಾಗಿದ್ದ ಗ್ಯಾಸ್ ಸಿಲಿಂಡರ್: ದಕ್ಷಿಣ ರೈಲ್ವೆ

ಶನಿವಾರ ಬೆಳಿಗ್ಗೆ 5:15 ಕ್ಕೆ ಮಧುರೈ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ವರದಿ ಮಾಡಿದ್ದಾರೆ. ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಬೆಳಗ್ಗೆ 5.45ಕ್ಕೆ ಆಗಮಿಸಿದ್ದಾರೆ. ಬೆಳಗ್ಗೆ 7.15ಕ್ಕೆ ಬೆಂಕಿ ನಂದಿಸಲಾಯಿತು. ಉಳಿದ ಬೋಗಿಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ದಕ್ಷಿಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಮಧುರೈ ರೈಲಿನಲ್ಲಿ ಬೆಂಕಿಗೆ ಕಾರಣವಾಗಿದ್ದು ಅಕ್ರಮವಾಗಿ ಸಾಗಿಸಲಾಗಿದ್ದ ಗ್ಯಾಸ್ ಸಿಲಿಂಡರ್: ದಕ್ಷಿಣ ರೈಲ್ವೆ
ಮಧುರೈ ರೈಲು
ರಶ್ಮಿ ಕಲ್ಲಕಟ್ಟ
|

Updated on:Aug 26, 2023 | 2:12 PM

Share

ಮಧುರೈ ಆಗಸ್ಟ್ 26: ಖಾಸಗಿ ಕೋಚ್/ವೈಯಕ್ತಿಕ ಕೋಚ್‌ನಲ್ಲಿದ್ದ ಪ್ರಯಾಣಿಕರು ಅಕ್ರಮವಾಗಿ ಎಲ್‌ಪಿಜಿ ಸಿಲಿಂಡರ್ (LPG) ಅನ್ನು ಕಳ್ಳಸಾಗಣೆ ಮಾಡಿದ್ದಾರೆ ಎಂದು ಶಂಕಿಸಲಾಗಿದ್ದು, ಶನಿವಾರ ನಸುಕಿನ ವೇಳೆ ಮಧುರೈ ರೈಲು ನಿಲ್ದಾಣದ ಬಳಿ ಭಾರತ್ ಗೌರವ್ ವಿಶೇಷ ರೈಲಿಗೆ (Bharat Gaurav special train) ಬೆಂಕಿಗೆ ಕಾರಣ  ಇದೇ ಆಗಿದೆ ಎಂದು ದಕ್ಷಿಣ ರೈಲ್ವೆ (Southern Railways) ಹೇಳಿದೆ. ಮಧುರೈ ರೈಲ್ವೇ ಜಂಕ್ಷನ್ ಬಳಿ ನಿಲುಗಡೆಯಾಗಿದ್ದ ಟೂರಿಸ್ಟ್ ಕೋಚ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 3 ಮಹಿಳೆಯರು ಸೇರಿದಂತೆ 9 ಮಂದಿ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ ಎಂದು ರೈಲ್ವೇ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಶನಿವಾರ ಬೆಳಿಗ್ಗೆ 5:15 ಕ್ಕೆ ಮಧುರೈ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ವರದಿ ಮಾಡಿದ್ದಾರೆ. ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಬೆಳಗ್ಗೆ 5.45ಕ್ಕೆ ಆಗಮಿಸಿದ್ದಾರೆ. ಬೆಳಗ್ಗೆ 7.15ಕ್ಕೆ ಬೆಂಕಿ ನಂದಿಸಲಾಯಿತು. ಉಳಿದ ಬೋಗಿಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ದಕ್ಷಿಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಸಂಯೋಜಿತ ಕೋಚ್‌ನಲ್ಲಿ ಉತ್ತರ ಪ್ರದೇಶದ ಸುಮಾರು 55 ಪ್ರಯಾಣಿಕರು ಇದ್ದರು. ಅವರಲ್ಲಿ ಕೆಲವರು ಕಾಫಿ ಮಾಡಲು ಗ್ಯಾಸ್ ಸ್ಟೌವ್ ಅನ್ನು ಹೊತ್ತಿಸಿದರು. ಆಗ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಮೂಲಗಳು ತಿಳಿಸಿವೆ. 3:47 ಕ್ಕೆ ಮಧುರೈಗೆ ಆಗಮಿಸಿದ ಪುನಲೂರ್-ಮದುರೈ ಎಕ್ಸ್‌ಪ್ರೆಸ್‌ನಲ್ಲಿ ನಿನ್ನೆ ನಾಗರ್‌ಕೋಯಿಲ್ ಜಂಕ್ಷನ್‌ನಲ್ಲಿ ಪ್ರೈವೆಟ್ ಕೋಚ್/ವೈಯಕ್ತಿಕ ಕೋಚ್, ಪಾರ್ಟಿ ಕೋಚ್ ಅನ್ನು ಬೇರ್ಪಡಿಸಿ ಮಧುರೈ ಸ್ಟೇಬ್ಲಿಂಗ್ ಲೈನ್‌ನಲ್ಲಿ ಇರಿಸಲಾಗಿತ್ತು.

ಪಾರ್ಟಿ ಕೋಚ್ ಆಗಸ್ಟ್ 17 ರಂದು ಲಕ್ನೋದಿಂದ ತಮ್ಮ ಪ್ರಯಾಣವನ್ನು ಪ್ರಾರಂಭಿಸಿತ್ತು. ಕೊಲ್ಲಂ ಎಕ್ಸ್‌ಪ್ರೆಸ್‌ನಲ್ಲಿ ಚೆನ್ನೈಗೆ ಹಿಂತಿರುಗಲು ಮತ್ತು ಚೆನ್ನೈನಿಂದ ಲಕ್ನೋಗೆ ಹಿಂತಿರುಗಲು ನಿರ್ಧರಿಸಲಾಗಿತ್ತು. ಮೃತರ ಕುಟುಂಬ ಸದಸ್ಯರಿಗೆ ದಕ್ಷಿಣ ರೈಲ್ವೇ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಶನಿವಾರ ಮುಂಜಾನೆ 5:30 ರ ಸುಮಾರಿಗೆ ಮಧುರೈ ರೈಲು ನಿಲ್ದಾಣದಲ್ಲಿ ನಿಂತಿದ್ದ ಭಾರತ್ ಗೌರವ್ ವಿಶೇಷ  ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದರಲ್ಲಿ ಉತ್ತರ ಪ್ರದೇಶದಿಂದ ಬಂದ ಪ್ರಯಾಣಿಕರು ಇದ್ದರು. ಕಾಫಿ ಮಾಡಲು ಗ್ಯಾಸ್ ಸ್ಟವ್ ಹೊತ್ತಿಸಿದಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸದ್ಯಕ್ಕೆ ನಾವು ಒಂಬತ್ತು ಮೃತದೇಹಗಳನ್ನು ಹೊರತೆಗೆದಿದ್ದೇವೆ ಎಂದು ಮಧುರೈ ಜಿಲ್ಲಾಧಿಕಾರಿ ಎಂಎಸ್ ಸಂಗೀತಾ ಹೇಳಿದ್ದಾರೆ.

ಶುಕ್ರವಾರ ನಾಗರ್‌ಕೋಯಿಲ್ ಜಂಕ್ಷನ್‌ನಲ್ಲಿ ರೈಲಿಗೆ ಖಾಸಗಿ ಕೋಚ್ ಅನ್ನು ಜೋಡಿಸಲಾಯಿತು. ಅಲ್ಲಿಂದ ರೈಲು ಮಧುರೈಗೆ ಬಂದು ನಿಂತಿದೆ. ಖಾಸಗಿ ಕೋಚ್‌ನಲ್ಲಿದ್ದ ಪ್ರಯಾಣಿಕರು ಗ್ಯಾಸ್ ಸಿಲಿಂಡರ್ ಅನ್ನು ಅಕ್ರಮವಾಗಿ ಸಾಗಿಸಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ದಕ್ಷಿಣ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿ.ಗುಗನೇಶನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:  ಮಧುರೈ: ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಅಗ್ನಿ ಅವಘಡ; 10 ಪ್ರಯಾಣಿಕರ ಸಾವು

ಖಾಸಗಿ ಪಾರ್ಟಿ ಕೋಚ್‌ನಲ್ಲಿನ ಪ್ರಯಾಣಿಕರು ಗ್ಯಾಸ್ ಸಿಲಿಂಡರ್ ಅನ್ನು ಕಳ್ಳಸಾಗಣೆ ಮಾಡಿದ್ದಾರೆ. ಇದರಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯನ್ನು ಗಮನಿಸಿದ ಅನೇಕ ಪ್ರಯಾಣಿಕರು ಕೋಚ್‌ನಿಂದ ಹೊರಬಂದಿದ್ದಾರೆ. ಕೆಲವು ಪ್ರಯಾಣಿಕರು ಪ್ಲಾಟ್‌ಫಾರ್ಮ್‌ನಲ್ಲಿಯೇ  ಉಳಿದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:09 pm, Sat, 26 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ