AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಗಳಲ್ಲಿ ನಮಾಜ್ ಮಾಡಿದರೆ ಪಾಸ್​ಪೋರ್ಟ್​, ಚಾಲನಾ ಪರವಾನಗಿ ರದ್ದು

ಒಂದೊಮ್ಮೆ ರಸ್ತೆಗಳಲ್ಲಿ ನಮಾಜ್ ಮಾಡಿದರೆ ಅವರ ಪಾಸ್​ಪೋರ್ಟ್​, ಚಾಲನಾ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಮೀರತ್ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಬಾರಿ ನಗರದಲ್ಲಿ ರಸ್ತೆಯಲ್ಲಿ ನಮಾಜ್ ಮಾಡಲು ಅನುಮತಿ ಇಲ್ಲ, ಯಾರಾದರೂ ಕಂಡು ಬಂದರೆ ಅವರ ಮೇಲೆ ಎಫ್​ಐಆರ್​ ದಾಖಲಿಸಲಾಗುವುದು. ಮೀರತ್ ಎಸ್​ಪಿ ಆಯುಷ್ ವಿಕ್ರಮ್ ಮಾತನಾಡಿ, ಧಾರ್ಮಿಕ ಮುಖಂಡರು ಮತ್ತು ಇಮಾಮ್‌ಗಳಿಗೆ ಮನವಿ ಮಾಡಲಾಗಿದೆ, ಜನರು ಮಸೀದಿಗಳಲ್ಲಿ ಮಾತ್ರ ಪ್ರಾರ್ಥನೆ ಸಲ್ಲಿಸುವಂತೆ ಒತ್ತಾಯಿಸಲಾಗಿದೆ. ಈ ನಿರ್ದೇಶನವನ್ನು ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ರಸ್ತೆಗಳಲ್ಲಿ ನಮಾಜ್ ಮಾಡಿದರೆ ಪಾಸ್​ಪೋರ್ಟ್​, ಚಾಲನಾ ಪರವಾನಗಿ ರದ್ದು
ನಮಾಜ್-ಸಾಂದರ್ಭಿಕ ಚಿತ್ರ Image Credit source: NDTV
ನಯನಾ ರಾಜೀವ್
|

Updated on:Mar 28, 2025 | 11:01 AM

Share

ಲಕ್ನೋ, ಮಾರ್ಚ್​ 28: ಒಂದೊಮ್ಮೆ ರಸ್ತೆಗಳಲ್ಲಿ ನಮಾಜ್(Namaz) ಮಾಡಿದರೆ ಅವರ ಪಾಸ್​ಪೋರ್ಟ್​, ಚಾಲನಾ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಮೀರತ್ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಬಾರಿ ನಗರದಲ್ಲಿ ರಸ್ತೆಯಲ್ಲಿ ನಮಾಜ್ ಮಾಡಲು ಅನುಮತಿ ಇಲ್ಲ, ಯಾರಾದರೂ ಕಂಡು ಬಂದರೆ ಅವರ ಮೇಲೆ ಎಫ್​ಐಆರ್​ ದಾಖಲಿಸಲಾಗುವುದು. ಮೀರತ್ ಎಸ್​ಪಿ ಆಯುಷ್ ವಿಕ್ರಮ್ ಮಾತನಾಡಿ, ಧಾರ್ಮಿಕ ಮುಖಂಡರು ಮತ್ತು ಇಮಾಮ್‌ಗಳಿಗೆ ಮನವಿ ಮಾಡಲಾಗಿದೆ, ಜನರು ಮಸೀದಿಗಳಲ್ಲಿ ಮಾತ್ರ ಪ್ರಾರ್ಥನೆ ಸಲ್ಲಿಸುವಂತೆ ಒತ್ತಾಯಿಸಲಾಗಿದೆ. ಈ ನಿರ್ದೇಶನವನ್ನು ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ಕಳೆದ ವರ್ಷ ಇದೇ ರೀತಿಯ ಉಲ್ಲಂಘನೆಗಳಿಗಾಗಿ 200 ಜನರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದ್ದು, 80 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಗುರುತಿಸಲಾಗಿದೆ. ಈ ವರ್ಷ, ಪೊಲೀಸರು ಸಂಭಾವ್ಯ ಅಪರಾಧಿಗಳ ಮೇಲೆ ನಿಕಟ ಕಣ್ಗಾವಲು ಇರಿಸಲಾಗಿದೆ. ಸೂಕ್ಷ್ಮ ಪ್ರದೇಶಗಳನ್ನು ಡ್ರೋನ್‌ಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತದೆ. ಪೊಲೀಸರು ಸಾಮಾಜಿಕ ಮಾಧ್ಯಮಗಳ ಮೇಲೆಯೂ ನಿಗಾ ಇಡುತ್ತಾರೆ ಮತ್ತು ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ನಿಯಮಗಳನ್ನು ಉಲ್ಲಂಘಿಸುವ ಯಾರಾದರೂ ಅವರ ಪಾಸ್‌ಪೋರ್ಟ್ ಮತ್ತು ಚಾಲನಾ ಪರವಾನಗಿಯನ್ನು ರದ್ದುಗೊಳಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಅಧಿಕಾರಿಗಳು ಎಚ್ಚರಿಸಿದ್ದಾರೆ. ಹೆಚ್ಚುವರಿಯಾಗಿ, ಹೊಸ ಪಾಸ್‌ಪೋರ್ಟ್ ಪಡೆಯಲು ನ್ಯಾಯಾಲಯದಿಂದ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಅಗತ್ಯವಿರುತ್ತದೆ.

ಮತ್ತಷ್ಟು ಓದಿ: Viral: ಮುಸ್ಲಿಂ ಗೆಳತಿಯ ಜೊತೆ ರಂಜಾನ್‌ ಉಪವಾಸ ಆಚರಿಸಿದ ಹಿಂದೂ ಯುವತಿ; ವಿಡಿಯೋ ವೈರಲ್‌

ಕಳೆದ ವರ್ಷ ಈದ್ ಸಮಯದಲ್ಲಿ ಕೆಲವು ವ್ಯಕ್ತಿಗಳು ನಿಯಮಗಳನ್ನು ಉಲ್ಲಂಘಿಸಿದ್ದರು, ಇದರಿಂದಾಗಿ ಕಾನೂನು ಕ್ರಮ ಜರುಗಿಸಲಾಗಿತ್ತು ಎಂದು ಎಸ್‌ಪಿ ಸಿಟಿ ಆಯುಷ್ ವಿಕ್ರಮ್ ನೆನಪಿಸಿಕೊಂಡರು. ಆಡಳಿತವು ಈಗ ಜಾಗರೂಕವಾಗಿದೆ ಮತ್ತು ಕಾನೂನು ಉಲ್ಲಂಘಿಸುವವರನ್ನು ಬಿಡುವುದಿಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಯಾವುದೇ ಅಡಚಣೆಗಳನ್ನು ತಡೆಗಟ್ಟಲು ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗುವುದು. ಲಕ್ನೋ, ಸಂಭಾಲ್, ಅಲಿಗಢ ಸೇರಿದಂತೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ರಸ್ತೆಗಳು, ಅಪಾಯಕಾರಿ ಕಟ್ಟಡಗಳ ಮೇಲೆ ನಮಾಜ್​ ಮಾಡುವುದನ್ನು ನಿಷೇಧಿಸಿ ಪೊಲೀಸರು ಆದೇಶ ಹೊರಡಿಸಿದ್ದಾರೆ.

ಸಂಭಾಲ್ ಎಸ್ಪಿ ಸಂಸದ ಜಿಯಾವುರ್ ರೆಹಮಾನ್ ಬರ್ಕೆ ಈ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ನಮಾಜ್‌ಗೆ ಸಂಬಂಧಿಸಿದಂತೆ ಎಸ್‌ಪಿ ಸಂಸದ ಜಿಯಾವುರ್ ರಹಮಾನ್ ಬರ್ಕೆ ಅವರು ಹೈಕೋರ್ಟ್‌ಗೆ ಹೋಗಿದ್ದಾರೆ.

ರಸ್ತೆಗಳ ಮೇಲೆ ಜನರು ಸೇರಿಸಿದಾಗ ಅಪಘಾತ ಉಂಟಾಗುವ ಸಾಧ್ಯತೆ ಇರುತ್ತದೆ. ಅಪಾಯಕಾರಿ ಕಟ್ಟಡಗಳ ಮೇಲೆ ಜನರು ಒಗ್ಗೂಡುವುದರಿಂದಲೂ ಅಪಾಯವಿರುತ್ತದೆ. ಯಾವುದೇ ಅವಘಡಗಳು ಸಂಭವಿಸದಂತೆ ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:00 am, Fri, 28 March 25

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು