AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ‘ರಾಮ’ ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?

ಹರಿದ್ವಾರ:ಕೊರೊನಾ ಕರಿನೆರಳು ಇಡೀ ದೇಶವನ್ನ ಆವರಿಸಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡು ಮುಂದೆ ನುಗ್ಗುತ್ತಿದೆ. ಕೊವಿಡ್ ಆತಂಕದಲ್ಲಿದ್ದ ಜನರಿಗೆ ಸೋಂಕಿಗೆ ಮದ್ದು ಸಿಗುವುದು ಯಾವಾಗ ಎಂಬ ಪ್ರಶ್ನೆ ಕಾಡುತ್ತಿತ್ತು. ಸದ್ಯ ಯೋಗ ಗುರು ಬಾಬಾ ರಾಮದೇವ್​ರ ಪತಂಜಲಿ ಸಂಸ್ಥೆ ಬಳಿ ಔಷಧಿ ಇದೆ ಎಂದು ಈ ಹಿಂದೆ ಹೇಳಿದ್ದರು. ಕೊರೊನಾ ಮದ್ದಿಗೆ ಸಂಬಂಧಿಸಿ ಹರಿದ್ವಾರದಲ್ಲಿ ಪತಂಜಲಿ ಯೋಗ ಪೀಠದಿಂದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಪತಂಜಲಿಯಿಂದ ಕೊರೊನಾಗೆ ಆಯುರ್ವೇದಿಕ್ ಔಷಧ ಕಂಡು ಹಿಡಿಯಲಾಗಿದೆ. ಪತಂಜಲಿ […]

ಕೊರೊನಾಗೆ 'ರಾಮ' ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?
ಆಯೇಷಾ ಬಾನು
|

Updated on: Jun 23, 2020 | 12:33 PM

Share

ಹರಿದ್ವಾರ:ಕೊರೊನಾ ಕರಿನೆರಳು ಇಡೀ ದೇಶವನ್ನ ಆವರಿಸಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡು ಮುಂದೆ ನುಗ್ಗುತ್ತಿದೆ. ಕೊವಿಡ್ ಆತಂಕದಲ್ಲಿದ್ದ ಜನರಿಗೆ ಸೋಂಕಿಗೆ ಮದ್ದು ಸಿಗುವುದು ಯಾವಾಗ ಎಂಬ ಪ್ರಶ್ನೆ ಕಾಡುತ್ತಿತ್ತು. ಸದ್ಯ ಯೋಗ ಗುರು ಬಾಬಾ ರಾಮದೇವ್​ರ ಪತಂಜಲಿ ಸಂಸ್ಥೆ ಬಳಿ ಔಷಧಿ ಇದೆ ಎಂದು ಈ ಹಿಂದೆ ಹೇಳಿದ್ದರು.

ಕೊರೊನಾ ಮದ್ದಿಗೆ ಸಂಬಂಧಿಸಿ ಹರಿದ್ವಾರದಲ್ಲಿ ಪತಂಜಲಿ ಯೋಗ ಪೀಠದಿಂದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಪತಂಜಲಿಯಿಂದ ಕೊರೊನಾಗೆ ಆಯುರ್ವೇದಿಕ್ ಔಷಧ ಕಂಡು ಹಿಡಿಯಲಾಗಿದೆ. ಪತಂಜಲಿ ಸಂಸ್ಥೆಯಿಂದ ಕೊರೋನಿಲ್ ಔಷಧ ಕಂಡುಹಿಡಿದಿರುವುದಾಗಿ ಆಚಾರ್ಯ ಬಾಲಕೃಷ್ಣ ತಿಳಿಸಿದ್ದಾರೆ.

ಆಯುರ್ವೇದಿಕ್ ಔಷಧ ಸಂಶೋಧನೆ: ಕೊರೊನಾದ ವಿರುದ್ಧ ಮೊದಲ ಆಯುರ್ವೇದಿಕ್ ಔಷಧ ಸಂಶೋಧನೆ ಮಾಡಲಾಗಿದೆ. ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸಂಶೋಧನೆ ಮಾಡಿ ಕಂಡುಹಿಡಿದಿದ್ದೇವೆ. ಕೊರೋನಿಲ್ ಔಷಧದಿಂದ ಕೊರೊನಾಗೆ ಚಿಕಿತ್ಸೆ ನೀಡಬಹುದು. 280 ಸೋಂಕಿತರ ಮೇಲೆ ಈ ಔಷಧವನ್ನು ಪ್ರಯೋಗಿಸಿದ್ದೇವೆ. ಅವರೆಲ್ಲರೂ ಕೊರೊನಾದಿಂದ ಗುಣಮುಖರಾಗಿದ್ದಾರೆ. 3 ದಿನದೊಳಗೆ ಶೇ.69ರಷ್ಟು ಸೋಂಕಿತರು ಚೇತರಿಸಿಕೊಂಡಿದ್ದಾರೆ. 7 ದಿನದೊಳಗೆ ಶೇ.100ರಷ್ಟು ಸೋಂಕಿತರು ಚೇತರಿಸಿಕೊಂಡಿದ್ದಾರೆ. 500ಕ್ಕೂ ಹೆಚ್ಚು ತಜ್ಞರ ತಂಡದಿಂದ ಈ ಔಷಧ ಸಂಶೋಧನೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ರು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್