AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Shortage: ಆಮ್ಲಜನಕದ ಅಭಾವದಿಂದ ದೆಹಲಿ ಆಸ್ಪತ್ರೆಯಲ್ಲಿ 8, ಜಮ್ಮುವಿನ ಆಸ್ಪತ್ರೆಯಲ್ಲಿ 4 ರೋಗಿಗಳು ಸಾವು

ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಗಳ ಕುಟುಂಬದವರು ಕೋಪಗೊಂಡು ಗಲಾಟೆ ಮಾಡಿದ್ದಾರೆ. ಆಸ್ಪತ್ರೆ ಆವರಣದಲ್ಲಿ ದಾಂಧಲೆ ನಡೆಸಿದ್ದಾರೆ. ರೋಗಿಗಳು ಆಕ್ಸಿಜನ್​ ಇಲ್ಲದೆ ಮೃತಪಟ್ಟಿದ್ದರೂ ನಮ್ಮ ಬಳಿ ಆಸ್ಪತ್ರೆಯವರು ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

Oxygen Shortage: ಆಮ್ಲಜನಕದ ಅಭಾವದಿಂದ ದೆಹಲಿ ಆಸ್ಪತ್ರೆಯಲ್ಲಿ 8, ಜಮ್ಮುವಿನ ಆಸ್ಪತ್ರೆಯಲ್ಲಿ 4 ರೋಗಿಗಳು ಸಾವು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 01, 2021 | 3:34 PM

Share

ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ಆಮ್ಲಜನಕ ಅಭಾವದಿಂದ 8 ಮಂದಿ ಮೃತಪಟ್ಟಿದ್ದಾರೆ. ಹೀಗೆ ಮೃತಪಟ್ಟವರಲ್ಲಿ ಒಬ್ಬರು ವೈದ್ಯರೂ ಹೌದು. ಈ ವಿಷಯವನ್ನು ಬಾತ್ರಾ ಆಸ್ಪತ್ರೆ ಹೈಕೋರ್ಟ್​ಗೆ ತಿಳಿಸಿದೆ. ನಮ್ಮ ಆಸ್ಪತ್ರೆಯಲ್ಲಿ ಮಧ್ಯಾಹ್ನ 12ಗಂಟೆ ಹೊತ್ತಿಗೇ ಆಕ್ಸಿಜನ್ ಖಾಲಿಯಾಗಿತ್ತು. ಆಮ್ಲಜನಕ ಖಾಲಿ ಆಗುವ ಬಗ್ಗೆ ನಾವು ಮಾಹಿತಿ ನೀಡಿದ್ದರೂ ಒಂದು ತಾಸು ತಡ ಮಾಡಿದರು. ಅಂದರೆ ಸುಮಾರು 1.35ರ ಹೊತ್ತಿಗೆ ಆಕ್ಸಿಜನ್ ಪೂರೈಕೆಯಾಗಿದೆ. ಹೀಗಾಗಿ ರೋಗಿಗಳ ಸಾವಾಗಿದೆ. ಅದರಲ್ಲಿ ಒಬ್ಬರು ವೈದ್ಯರೂ ಇದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಸ್​ಸಿಎಲ್​ ಗುಪ್ತಾ ತಿಳಿಸಿದ್ದಾರೆ.

ಜಮ್ಮುವಿನ ಬಾತ್ರಾ ಆಸ್ಪತ್ರೆಯಲ್ಲೂ 4 ರೋಗಿಗಳು ಸಾವು ಇನ್ನು ಜಮ್ಮುವಿನ ಅತಿದೊಡ್ಡ ಆಸ್ಪತ್ರೆಯಲ್ಲೂ ಕೂಡ ಇಂದು ಆಕ್ಸಿಜನ್ ಅಭಾವದಿಂದ 4 ರೋಗಿಗಳು ಮೃತಪಟ್ಟಿದ್ದಾಗಿ ವರದಿಯಾಗಿದೆ. ಈಗ ಈ ಆಸ್ಪತ್ರೆಗೆ ಆಮ್ಲಜನಕ ಪೂರೈಕೆ ಆಗಿದ್ದಾಗಿ ಆಡಳಿತ ತಿಳಿಸಿದ್ದು, ಅಷ್ಟರಲ್ಲಾಗಲೇ ನಾಲ್ವರು ಜೀವ ಕಳೆದುಕೊಂಡಿದ್ದಾರೆ. ಬಾತ್ರಾ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಮಾತ್ರವಲ್ಲ, ಬೇರೆ ಆರೋಗ್ಯ ಸಮಸ್ಯೆ ಇರುವವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮುಂಜಾನೆ ಹೊತ್ತಿಗೆ ಆಮ್ಲಜನಕ ಖಾಲಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.

ಈ ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಗಳ ಕುಟುಂಬದವರು ಕೋಪಗೊಂಡು ಗಲಾಟೆ ಮಾಡಿದ್ದಾರೆ. ಆಸ್ಪತ್ರೆ ಆವರಣದಲ್ಲಿ ದಾಂಧಲೆ ನಡೆಸಿದ್ದಾರೆ. ರೋಗಿಗಳು ಆಕ್ಸಿಜನ್​ ಇಲ್ಲದೆ ಮೃತಪಟ್ಟಿದ್ದರೂ ನಮ್ಮ ಬಳಿ ಆಸ್ಪತ್ರೆಯವರು ಸುಳ್ಳು ಹೇಳಿದ್ದಾರೆ. ಹಾರ್ಟ್​ ಅಟ್ಯಾಕ್​, ಮತ್ತೊಂದು ಎಂದು ಕತೆ ಕಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಚಿತ್ರರಂಗಕ್ಕೆ ಶಾಪವಾದ ಕೊರೊನಾ; ಬಾಲಿವುಡ್​ನ ಖ್ಯಾತ ನಟ ಕೊವಿಡ್​​ಗೆ ಬಲಿ

ಕೊರೊನಾ ಎಂಬ ಬ್ರಹ್ಮ ರಾಕ್ಷಸ ನಮ್ಮ ಜೀವಗಳನ್ನು ಹಿಂಡಿಹಿಪ್ಪೆ ಮಾಡಿದ: ಮೊದಲು ಮಾಸ್ಕ್​ ಹಾಕಿಕೊಳ್ಳಿ, ಲಸಿಕೆ ತೆಗೆದುಕೊಳ್ಳಿ ಎಂದ ಕ್ರಿಕೆಟರ್ ಅಶ್ವಿನ್ ಅವರ ಪತ್ನಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?