AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Shortage: ಆಮ್ಲಜನಕದ ಅಭಾವದಿಂದ ದೆಹಲಿ ಆಸ್ಪತ್ರೆಯಲ್ಲಿ 8, ಜಮ್ಮುವಿನ ಆಸ್ಪತ್ರೆಯಲ್ಲಿ 4 ರೋಗಿಗಳು ಸಾವು

ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಗಳ ಕುಟುಂಬದವರು ಕೋಪಗೊಂಡು ಗಲಾಟೆ ಮಾಡಿದ್ದಾರೆ. ಆಸ್ಪತ್ರೆ ಆವರಣದಲ್ಲಿ ದಾಂಧಲೆ ನಡೆಸಿದ್ದಾರೆ. ರೋಗಿಗಳು ಆಕ್ಸಿಜನ್​ ಇಲ್ಲದೆ ಮೃತಪಟ್ಟಿದ್ದರೂ ನಮ್ಮ ಬಳಿ ಆಸ್ಪತ್ರೆಯವರು ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

Oxygen Shortage: ಆಮ್ಲಜನಕದ ಅಭಾವದಿಂದ ದೆಹಲಿ ಆಸ್ಪತ್ರೆಯಲ್ಲಿ 8, ಜಮ್ಮುವಿನ ಆಸ್ಪತ್ರೆಯಲ್ಲಿ 4 ರೋಗಿಗಳು ಸಾವು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 01, 2021 | 3:34 PM

Share

ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ಆಮ್ಲಜನಕ ಅಭಾವದಿಂದ 8 ಮಂದಿ ಮೃತಪಟ್ಟಿದ್ದಾರೆ. ಹೀಗೆ ಮೃತಪಟ್ಟವರಲ್ಲಿ ಒಬ್ಬರು ವೈದ್ಯರೂ ಹೌದು. ಈ ವಿಷಯವನ್ನು ಬಾತ್ರಾ ಆಸ್ಪತ್ರೆ ಹೈಕೋರ್ಟ್​ಗೆ ತಿಳಿಸಿದೆ. ನಮ್ಮ ಆಸ್ಪತ್ರೆಯಲ್ಲಿ ಮಧ್ಯಾಹ್ನ 12ಗಂಟೆ ಹೊತ್ತಿಗೇ ಆಕ್ಸಿಜನ್ ಖಾಲಿಯಾಗಿತ್ತು. ಆಮ್ಲಜನಕ ಖಾಲಿ ಆಗುವ ಬಗ್ಗೆ ನಾವು ಮಾಹಿತಿ ನೀಡಿದ್ದರೂ ಒಂದು ತಾಸು ತಡ ಮಾಡಿದರು. ಅಂದರೆ ಸುಮಾರು 1.35ರ ಹೊತ್ತಿಗೆ ಆಕ್ಸಿಜನ್ ಪೂರೈಕೆಯಾಗಿದೆ. ಹೀಗಾಗಿ ರೋಗಿಗಳ ಸಾವಾಗಿದೆ. ಅದರಲ್ಲಿ ಒಬ್ಬರು ವೈದ್ಯರೂ ಇದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಸ್​ಸಿಎಲ್​ ಗುಪ್ತಾ ತಿಳಿಸಿದ್ದಾರೆ.

ಜಮ್ಮುವಿನ ಬಾತ್ರಾ ಆಸ್ಪತ್ರೆಯಲ್ಲೂ 4 ರೋಗಿಗಳು ಸಾವು ಇನ್ನು ಜಮ್ಮುವಿನ ಅತಿದೊಡ್ಡ ಆಸ್ಪತ್ರೆಯಲ್ಲೂ ಕೂಡ ಇಂದು ಆಕ್ಸಿಜನ್ ಅಭಾವದಿಂದ 4 ರೋಗಿಗಳು ಮೃತಪಟ್ಟಿದ್ದಾಗಿ ವರದಿಯಾಗಿದೆ. ಈಗ ಈ ಆಸ್ಪತ್ರೆಗೆ ಆಮ್ಲಜನಕ ಪೂರೈಕೆ ಆಗಿದ್ದಾಗಿ ಆಡಳಿತ ತಿಳಿಸಿದ್ದು, ಅಷ್ಟರಲ್ಲಾಗಲೇ ನಾಲ್ವರು ಜೀವ ಕಳೆದುಕೊಂಡಿದ್ದಾರೆ. ಬಾತ್ರಾ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಮಾತ್ರವಲ್ಲ, ಬೇರೆ ಆರೋಗ್ಯ ಸಮಸ್ಯೆ ಇರುವವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮುಂಜಾನೆ ಹೊತ್ತಿಗೆ ಆಮ್ಲಜನಕ ಖಾಲಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.

ಈ ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಗಳ ಕುಟುಂಬದವರು ಕೋಪಗೊಂಡು ಗಲಾಟೆ ಮಾಡಿದ್ದಾರೆ. ಆಸ್ಪತ್ರೆ ಆವರಣದಲ್ಲಿ ದಾಂಧಲೆ ನಡೆಸಿದ್ದಾರೆ. ರೋಗಿಗಳು ಆಕ್ಸಿಜನ್​ ಇಲ್ಲದೆ ಮೃತಪಟ್ಟಿದ್ದರೂ ನಮ್ಮ ಬಳಿ ಆಸ್ಪತ್ರೆಯವರು ಸುಳ್ಳು ಹೇಳಿದ್ದಾರೆ. ಹಾರ್ಟ್​ ಅಟ್ಯಾಕ್​, ಮತ್ತೊಂದು ಎಂದು ಕತೆ ಕಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಚಿತ್ರರಂಗಕ್ಕೆ ಶಾಪವಾದ ಕೊರೊನಾ; ಬಾಲಿವುಡ್​ನ ಖ್ಯಾತ ನಟ ಕೊವಿಡ್​​ಗೆ ಬಲಿ

ಕೊರೊನಾ ಎಂಬ ಬ್ರಹ್ಮ ರಾಕ್ಷಸ ನಮ್ಮ ಜೀವಗಳನ್ನು ಹಿಂಡಿಹಿಪ್ಪೆ ಮಾಡಿದ: ಮೊದಲು ಮಾಸ್ಕ್​ ಹಾಕಿಕೊಳ್ಳಿ, ಲಸಿಕೆ ತೆಗೆದುಕೊಳ್ಳಿ ಎಂದ ಕ್ರಿಕೆಟರ್ ಅಶ್ವಿನ್ ಅವರ ಪತ್ನಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?