AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತಡೇ ಪಾರ್ಟಿಯಲ್ಲಿ ಸಂಭ್ರಮಾಚರಣೆ ವೇಳೆ ದುರಂತ; ಫೈರಿಂಗ್​ನಲ್ಲಿ ಪಾಟ್ನಾದ ಹುಡುಗ ಸಾವು

ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಂಭ್ರಮಾಚರಣೆ ವೇಳೆ ಗುಂಡಿನ ದಾಳಿಯಿಂದ ಪಾಟ್ನಾ ಹುಡುಗ ಸಾವನ್ನಪ್ಪಿದ್ದಾನೆ. ತಕ್ಷಣ ಸ್ನೇಹಿತರು ಅವನನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅಲ್ಲಿ ಆತ ಸಾವನ್ನಪ್ಪಿರುವುದಾಗಿ ಘೋಷಿಸಲಾಯಿತು. ಬರ್ತಡೇ ಪಾರ್ಟಿಯಲ್ಲಿ 16 ವರ್ಷದ ಬಾಲಕನಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾನೆ. ಇದೀಗ ತಲೆಮರೆಸಿಕೊಂಡಿರುವ ಆತನ ಸ್ನೇಹಿತರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬರ್ತಡೇ ಪಾರ್ಟಿಯಲ್ಲಿ ಸಂಭ್ರಮಾಚರಣೆ ವೇಳೆ ದುರಂತ; ಫೈರಿಂಗ್​ನಲ್ಲಿ ಪಾಟ್ನಾದ ಹುಡುಗ ಸಾವು
Firing
ಸುಷ್ಮಾ ಚಕ್ರೆ
|

Updated on: Dec 25, 2024 | 5:33 PM

Share

ಪಾಟ್ನಾ: ಪಾಟ್ನಾದಲ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಂಭ್ರಮಾಚರಣೆಯ ವೇಳೆ ಫೈರಿಂಗ್ ಮಾಡುವಾಗ ಗಾಯಗೊಂಡಿದ್ದ 16 ವರ್ಷದ ಹುಡುಗ ಸಾವನ್ನಪ್ಪಿದ್ದಾನೆ. ಸೋಮವಾರ (ಡಿಸೆಂಬರ್ 23) ಶ್ರೀಕೃಷ್ಣಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಲಾಡ್ಜ್‌ನಲ್ಲಿ ಫೈರಿಂಗ್ ನಡೆದಿದೆ. ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಮಂಗಳವಾರ ಮೃತಪಟ್ಟಿದ್ದಾನೆ ಎಂದು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದೆ. ಮೃತ ರಿಶು ಕುಮಾರ್​ನನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಆತನ ಸ್ನೇಹಿತರು ಪರಾರಿಯಾಗಿದ್ದಾರೆ.

“ನಮಗೆ ಮಧ್ಯರಾತ್ರಿಯ ಹೊತ್ತಿಗೆ ಗಾಂಧಿನಗರ ಪ್ರದೇಶದಲ್ಲಿ ಗುಂಡಿನ ದಾಳಿಯ ಬಗ್ಗೆ ಮಾಹಿತಿ ಬಂದಿತ್ತು. ಹುಟ್ಟುಹಬ್ಬದ ಪಾರ್ಟಿಯಲ್ಲಿ ಗುಂಡು ಹಾರಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆದಾಗ ತಡರಾತ್ರಿ ಸುಮಾರು 5ರಿಂದ 6 ಯುವಕರು ಲಾಡ್ಜ್‌ನ ಟೆರೇಸ್‌ನಲ್ಲಿ ಪಾರ್ಟಿ ಮಾಡುತ್ತಿದ್ದರು. ಗುಂಡು ಹಾರಿಸಿದ ಪಿಸ್ತೂಲ್​ಗೆ ಲೈಸೆನ್ಸ್​ ಇರಲಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ: ಉತ್ತರಾಖಂಡದ ನೈನಿತಾಲ್‌ನಲ್ಲಿ ಆಳವಾದ ಕಂದಕಕ್ಕೆ ಬಸ್ ಬಿದ್ದು 4 ಜನ ಸಾವು, 24 ಮಂದಿಗೆ ಗಾಯ

ಪಾರ್ಟಿಯಲ್ಲಿದ್ದ ಓರ್ವ ಬಾಲಕ ಗುಂಡು ಹಾರಿಸಿದ್ದು, ಈ ವೇಳೆ ರಿಶು ಕುಮಾರ್‌ ಕುತ್ತಿಗೆಗೆ ಗುಂಡು ತಗುಲಿದೆ. ಆತನ ಸ್ನೇಹಿತರು ಆತನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಪರಾರಿಯಾಗಿದ್ದಾರೆ. ಎಲ್ಲರೂ ತಲೆಮರೆಸಿಕೊಂಡಿದ್ದಾರೆ. ಈ ಘಟನೆಯ ಕುರಿತು ಮೃತ ಬಾಲಕನ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಕುಟುಂಬದವರ ಹೇಳಿಕೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ