AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಮನೆ ನೆಲಸಮ ಮಾಡಲು ಬುಲ್ಡೋಜರ್ ಬಳಸಿದ ಪೊಲೀಸರಿಗೆ ಹೈಕೋರ್ಟ್ ತರಾಟೆ

ಭೂಮಾಫಿಯಾದ ನಿದರ್ಶನದಲ್ಲಿ ಜಮೀನು ತೆರವು ಮಾಡುವಂತೆ ಒತ್ತಾಯಿಸಲು ಆಕೆಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಅರ್ಜಿದಾರರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದಾಗ, ನ್ಯಾಯಾಧೀಶರು ಅರ್ಜಿದಾರರ ರಕ್ಷಣೆಗೆ ನಾನು ಇದ್ದೇನೆ ಎಂದು ಹೇಳಿದರು.

ಬಿಹಾರದಲ್ಲಿ ಮನೆ ನೆಲಸಮ ಮಾಡಲು ಬುಲ್ಡೋಜರ್ ಬಳಸಿದ ಪೊಲೀಸರಿಗೆ ಹೈಕೋರ್ಟ್ ತರಾಟೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Dec 04, 2022 | 3:43 PM

Share

ಪಾಟ್ನಾ: ಬುಲ್ಡೋಜರ್‌ಗಳಿಂದ (bulldozers) ಮನೆಗಳನ್ನು ಕೆಡವುವುದು ತಮಾಷೆ ಅಥವಾ ಸಾರ್ವಜನಿಕ ಪ್ರದರ್ಶನವೇ ಎಂದು ಪಾಟ್ನಾ ಹೈಕೋರ್ಟ್  (Patna High Court) ಕೇಳಿದೆ. ಭೂಮಾಫಿಯಾ ಆರೋಪದಲ್ಲಿ ಮಹಿಳೆಯ ಮನೆಯನ್ನು ಧ್ವಂಸ ಮಾಡಿದ್ದಕ್ಕಾಗಿ ಬಿಹಾರ ಪೊಲೀಸರನ್ನು (Bihar Police) ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.”ಕ್ಯಾ ಯಹಾನ್ ಭಿ ಬುಲ್ಡೋಜರ್ ಚಲ್ನೆ ಲಗಾ? (ಇಲ್ಲಿಯೂ ಬುಲ್ಡೋಜರ್ ಕಾರ್ಯಾಚರಣೆ ಪ್ರಾರಂಭಿಸಿದೆಯೇ?) ನೀವು ಯಾರನ್ನು ಪ್ರತಿನಿಧಿಸುತ್ತೀರಿ, ರಾಜ್ಯ ಅಥವಾ ಕೆಲವು ಖಾಸಗಿ ವ್ಯಕ್ತಿ? ಯಾರಾದಾದ್ದರೂ ಮನೆಯನ್ನು ಬುಲ್ಡೋಜರ್ ಬಳಸಿ ಕೆಡವಿದ್ದು ತಮಾಷೆಯೇ? ಎಂದು ನ್ಯಾಯಮೂರ್ತಿ ಸಂದೀಪ್ ಕುಮಾರ್ ಹೇಳಿದ್ದಾರೆ. ಮನೆಯನ್ನು ಅಕ್ರಮವಾಗಿ ನೆಲಸಮಗೊಳಿಸಿರುವುದು ಕಂಡು ಬಂದಲ್ಲಿ ಪ್ರತಿಯೊಬ್ಬ ಅಧಿಕಾರಿಯ ಜೇಬಿನಿಂದ ಅರ್ಜಿದಾರರಿಗೆ ₹ 5 ಲಕ್ಷ ಪಾವತಿ ಆಗುವಂತೆ ಮಾಡಲಾಗುವುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.ಮನೆ ಕೆಡವಿದರೆ ಅಧಠಿಕಾರಿಗಳ ಜೇಬಿನಿಂದಲೇ 5 ಲಕ್ಷ ಹಣ ವಸೂಲಿ ಮಾಡಿಸುತ್ತೇವೆ. ಈಗ ಪೊಲೀಸರು ಮತ್ತು ಸಿಒ ಜತೆ ಸೇರಿ ಬುಲ್ಡೋಜರ್ ಬಳಸಿ ಮನೆ ಕೆಡವುತ್ತಿದ್ದಾರೆ. ಇದನ್ನು ನಿಲ್ಲಿಸಲೇಬೇಕು ಎಂದು ನ್ಯಾಯಮೂರ್ತಿ ಕುಮಾರ್ ಹೇಳಿದ್ದಾರೆ. ಅದೇ ವೇಳೆ ಗುರುವಾರ ನಡೆಯಲಿರುವ ಮುಂದಿನ ವಿಚಾರಣೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಖುದ್ದಾಗಿ ಹಾಜರಾಗುವಂತೆ ನ್ಯಾಯಮೂರ್ತಿ ಕುಮಾರ್ ಹೇಳಿದ್ದಾರೆ.

ಈ ಪ್ರಕರಣವನ್ನು ನವೆಂಬರ್ 24 ರಂದು ವಿಚಾರಣೆ ನಡೆಸಲಾಯಿತು, ಆದರೆ ಶನಿವಾರದಂದು ಪ್ರಕ್ರಿಯೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.ಪ್ರಕರಣದ ಪೊಲೀಸ್ ವರದಿಯನ್ನು ಅಧ್ಯಯನ ಮಾಡಿದ ನ್ಯಾಯಾಲಯ, ಕಾನೂನು ಪ್ರಕ್ರಿಯೆಗಳನ್ನು ಅನುಸರಿಸದೆ ರಾಜ್ಯ ಪೊಲೀಸರು ಕಾನೂನುಬಾಹಿರವಾಗಿ ಮನೆಯನ್ನು ಕೆಡವಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಅಧಿಕಾರಿಗಳು ಕೆಲವು ಭೂ ಮಾಫಿಯಾಗಳೊಂದಿಗೆ “ಕೈ” ಜೋಡಿಸಿದಂತೆ ತೋರುತ್ತಿದ್ದಾರೆ ಎಂದು ನ್ಯಾಯಾಧೀಶರು ಹೇಳಿರುವುದಾಗಿ ಲೈವ್ ಲಾ ವರದಿ ಮಾಡಿದೆ.

ಭೂಮಾಫಿಯಾದ ನಿದರ್ಶನದಲ್ಲಿ ಜಮೀನು ತೆರವು ಮಾಡುವಂತೆ ಒತ್ತಾಯಿಸಲು ಆಕೆಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಅರ್ಜಿದಾರರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದಾಗ, ನ್ಯಾಯಾಧೀಶರು ಅರ್ಜಿದಾರರ ರಕ್ಷಣೆಗೆ ನಾನು ಇದ್ದೇನೆ ಎಂದು ಹೇಳಿದರು.

“ನಾನು ನಿಮ್ಮನ್ನು ರಕ್ಷಿಸಲು ಇಲ್ಲಿದ್ದೇನೆ, ನಿಮಗೆ ತೊಂದರೆ ನೀಡುವುದಿಲ್ಲ” ಎಂದು ನ್ಯಾಯಮೂರ್ತಿ ಕುಮಾರ್ ಹೇಳಿದರು. ಇದೀಗ ಎಫ್‌ಐಆರ್ ಅನ್ನು ತಡೆಹಿಡಿಯಲಾಗಿದ್ದು ಪ್ರಕರಣದಲ್ಲಿ ಅರ್ಜಿದಾರರನ್ನು ಮತ್ತು ಅವರ ಕುಟುಂಬ ಸದಸ್ಯರನ್ನು ಬಂಧಿಸದಂತೆ ಪೊಲೀಸರನ್ನು ನಿರ್ಬಂಧಿಸಿದ್ದಾರೆ. ಅಪರಾಧದ ಶಂಕಿತರನ್ನು ಗುರಿಯಾಗಿಸಲು ಬುಲ್ಡೋಜರ್‌ಗಳನ್ನು ಬಳಸುವುದು ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದ ಪ್ರವೃತ್ತಿಯಾಗಿದೆ. ಅಲ್ಲಿ ಅಧಿಕಾರಿಗಳು ಅಕ್ರಮ ಆಸ್ತಿಯನ್ನು ಕೆಡವಲು ಬುಲ್ಡೋಜರ್ ಬಳಸಿದ್ದಾರೆ. ಇದಾದ ನಂತರ ಬಿಜೆಪಿ ಅಧಿಕಾರದಲ್ಲಿರಕುವ ರಾಜ್ಯಗಳು ಬುಲ್ಡೋಜರ್ ಬಳಸಿ ನೆಲಸಮ ಮಾಡುವ ಕಾರ್ಯವನ್ನು ಮಾಡಿದ್ದವು. ಬುಲ್ಡೋಜರ್ ಬಳಕೆ ಮಾಡುವ ರಾಜ್ಯಗಳ ಕ್ರಮಕ್ಕೆ ಸುಪ್ರೀಂಕೋರ್ಟ್ ಚಾಟಿ ಬೀಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:41 pm, Sun, 4 December 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?