ಹಣೆಗೆ ಸಿಂಧೂರ ಹಚ್ಚಿದಾಕ್ಷಣ ಮದುವೆ ಎನಿಸಿಕೊಳ್ಳುವುದಿಲ್ಲ: ಪಾಟ್ನಾ ಹೈಕೋರ್ಟ್​

ಹಣೆಗೆ ಸಿಂಧೂರ ಹಚ್ಚಿದಾಕ್ಷಣ ಅದು ಮದುವೆ(Marriage) ಎನಿಸಿಕೊಳ್ಳುವುದಿಲ್ಲ ಎಂದು ಪಾಟ್ನಾ ಹೈಕೋರ್ಟ್​ ಹೇಳಿದೆ. ಮದುವೆಗೆ ಸಂಬಂಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪಾಟ್ನಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮದುವೆಗೆ ಯಾವ ವಿಧಿ ವಿಧಾನಗಳಿವೆಯೋ ಅವೆಲ್ಲವನ್ನೂ ಅನುಸರಿಸಬೇಕು, ಒತ್ತಾಯ ಮಾಡಿ ಹಣೆಗೆ ಸಿಂಧೂರವಿಟ್ಟಾಕ್ಷಣ ಅದು ಮದುವೆಯಾಗದು, ಹೀಗಾದರೆ ಅದನ್ನು ಮಾನ್ಯವೆಂದು ಪರಿಗಣಿಸುವುದಿಲ್ಲ ಎಂದು ಹೇಳಿದೆ.

ಹಣೆಗೆ ಸಿಂಧೂರ ಹಚ್ಚಿದಾಕ್ಷಣ ಮದುವೆ ಎನಿಸಿಕೊಳ್ಳುವುದಿಲ್ಲ: ಪಾಟ್ನಾ ಹೈಕೋರ್ಟ್​
ಮದುವೆ- ಸಾಂದರ್ಭಿಕ ಚಿತ್ರ
Image Credit source: India Times

Updated on: Nov 23, 2023 | 12:44 PM

ಹಣೆಗೆ ಸಿಂಧೂರ ಹಚ್ಚಿದಾಕ್ಷಣ ಅದು ಮದುವೆ(Marriage) ಎನಿಸಿಕೊಳ್ಳುವುದಿಲ್ಲ ಎಂದು ಪಾಟ್ನಾ ಹೈಕೋರ್ಟ್​ ಹೇಳಿದೆ. ಮದುವೆಗೆ ಸಂಬಂಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪಾಟ್ನಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮದುವೆಗೆ ಯಾವ ವಿಧಿ ವಿಧಾನಗಳಿವೆಯೋ ಅವೆಲ್ಲವನ್ನೂ ಅನುಸರಿಸಬೇಕು, ಒತ್ತಾಯ ಮಾಡಿ ಹಣೆಗೆ ಸಿಂಧೂರವಿಟ್ಟಾಕ್ಷಣ ಅದು ಮದುವೆಯಾಗದು, ಹೀಗಾದರೆ ಅದನ್ನು ಮಾನ್ಯವೆಂದು ಪರಿಗಣಿಸುವುದಿಲ್ಲ ಎಂದು ಹೇಳಿದೆ.

ಹಿಂದೂ ಧರ್ಮದಲ್ಲಿ ಮದುವೆಗೆ ಅದರದ್ದೇ ಆದ ವ್ಯಾಖ್ಯಾನವಿದೆ, ಸಂಪ್ರದಾಯ, ವಿಧಿವಿಧಾನಗಳಿವೆ, ಅಗ್ನಿ ಮುಂದೆ 7 ಸುತ್ತು ಪ್ರದಕ್ಷಿಣೆ ಹಾಕಬೇಕು, ಸಪ್ತಪದಿ ತುಳಿಯಬೇಕು, ಕನ್ಯಾದಾನ ಮಾಡಬೇಕು ಹೀಗೆ ಹತ್ತು ಹಲವಾರು ವಿಧಿಗಳಿವೆ ಅದ್ಯಾವುದನ್ನೂ ಮಾಡದೆ ನೇರಾ ನೇರ ಬಂದು ಹಣೆಗೆ ಸಿಂಧೂರವಿಟ್ಟರೆ ಅದು ಮದುವೆ ಹೇಗಾಗುತ್ತದೆ ಎಂದು ಕೋರ್ಟ್​ ಪ್ರಶ್ನೆ ಮಾಡಿದೆ.

ವರ ವಧು ಇಬ್ಬರದ್ದೂ ಮದುವೆಗೆ ಒಪ್ಪಿಗೆ ಇರಬೇಕು ಎಂದು ಪಿಬಿ ಬಜಂತಾರಿ ಮತ್ತು ಅರುಣ್ ಕುಮಾರ್ ಝಾ ಅವರ ಪೀಠ ಹೇಳಿದೆ.
ಲವಂತದ ಮದುವೆ ಪ್ರಕರಣದಲ್ಲಿ ನವೆಂಬರ್ 10 ರಂದು ಪಾಟ್ನಾ ಹೈಕೋರ್ಟ್ ಈ ತೀರ್ಪು ನೀಡಿತು. 10 ವರ್ಷಗಳ ಹಿಂದೆ ಸೇನೆಯಲ್ಲಿ ನಿಯೋಜಿತರಾಗಿದ್ದ ಯೋಧ ರವಿಕಾಂತ್ ಅವರು ಬಲವಂತವಾಗಿ ಮದುವೆಯಾಗಿದ್ದರು.ಸಪ್ತಪದಿ ತುಳಿಯದೆ ಮದುವೆ ಮಾನ್ಯವಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ.

ಮತ್ತಷ್ಟು ಓದಿ: ಆಕೆ ಸಹಾಯಕ್ಕಾಗಿ ಅಂಗಲಾಚ್ತಿದ್ಲು, ಯುವತಿಯನ್ನು ಹೊತ್ತುಕೊಂಡು ಬಲವಂತವಾಗಿ ಮದುವೆಯಾದ ವ್ಯಕ್ತಿ, ವಿಡಿಯೋ ವೈರಲ್

ಬಿಹಾರದ ಲಖಿಸರಾಯ್‌ನಲ್ಲಿ 10 ವರ್ಷಗಳ ಹಿಂದೆ ಸೇನಾ ಯೋಧರೊಬ್ಬರನ್ನು ಅಪಹರಿಸಲಾಗಿತ್ತು. ಇದಾದ ನಂತರ ಯುವತಿ ಜತೆ ಬಲವಂತವಾಗಿ ಮದುವೆ ಮಾಡಿಸಿದ್ದರು. ಜೂನ್ 30, 2013 ರಂದು ಯುವಕ ಮತ್ತು ಅವರ ಚಿಕ್ಕಪ್ಪನನ್ನು ಕೆಲವರು ಅಪಹರಿಸಿದ್ದರು. ಲಖಿಸರಾಯ್‌ನ ದೇವಸ್ಥಾನದಲ್ಲಿ ಪೂಜೆ ವೇಳೆ ಈ ಘಟನೆ ನಡೆದಿದೆ.

ನಂತರ ಅವರು ಮದುವೆಯಾದರು. ಯುವಕ ಸೀನ ರವಿಕಾಂತ್ ಅವರ ಚಿಕ್ಕಪ್ಪ ಪೊಲೀಸರಿಗೆ ದೂರು ನೀಡಲು ಪ್ರಯತ್ನಿಸಿದರು ಆದರೆ ಪೊಲೀಸರು ದೂರು ದಾಖಲಿಸಲಿಲ್ಲ.

ಇದಾದ ನಂತರ ಯುವಕ ಲಖಿಸರಾಯ್‌ನ ಸಿಜೆಎಂ ನ್ಯಾಯಾಲಯದಲ್ಲಿ ಈ ಬಗ್ಗೆ ದೂರು ನೀಡಿದ್ದರು. ಅವರು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರು ಆದರೆ 27 ಜನವರಿ 2020 ರಂದು ಮನವಿಯನ್ನು ತಿರಸ್ಕರಿಸಲಾಯಿತು. ಕೆಳ ನ್ಯಾಯಾಲಯದಿಂದ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಅವರು ಪಾಟ್ನಾ ಹೈಕೋರ್ಟ್‌ನ ಮೊರೆ ಹೋಗಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us