AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿ ಪ್ರಯುಕ್ತ ಗಂಗಾಜಲ ತುಂಬಿದ 21 ಕಲಶಗಳನ್ನು ಎದೆಯ ಮೇಲಿಟ್ಟು ಪೂಜೆ ಸಲ್ಲಿಸಿದ ಪಾಟ್ನಾದ ಅರ್ಚಕ

Navratri 2021: ಪಾಟ್ನಾದ ದುರ್ಗಾ ದೇವಿಯ ದೇವಸ್ಥಾನದ ಅರ್ಚಕ ನಾಗೇಶ್ವರ ಬಾಬಾ, ಗಂಗಾಜಲ ತುಂಬಿದ 21 ಕಲಶಗಳನ್ನು ತನ್ನ ಎದೆಯ ಮೇಲೆ ಇಟ್ಟುಕೊಂಡು ದುರ್ಗಾದೇವಿಯನ್ನು ಪೂಜಿಸಲು ಆರಂಭಿಸಿದ್ದಾರೆ.

ನವರಾತ್ರಿ ಪ್ರಯುಕ್ತ ಗಂಗಾಜಲ ತುಂಬಿದ 21 ಕಲಶಗಳನ್ನು ಎದೆಯ ಮೇಲಿಟ್ಟು ಪೂಜೆ ಸಲ್ಲಿಸಿದ ಪಾಟ್ನಾದ ಅರ್ಚಕ
ನವರಾತ್ರಿ ಪ್ರಯುಕ್ತ ಎದೆಯ ಮೇಲೆ 21 ಕಲಶಗಳನ್ನು ಇಟ್ಟುಕೊಂಡು ಪೂಜೆ ಕೈಗೊಂಡ ಪಾಟ್ನಾದ ಅರ್ಚಕ
Follow us
TV9 Web
| Updated By: shruti hegde

Updated on:Oct 08, 2021 | 11:14 AM

ನವರಾತ್ರಿ ಆಚರಣೆ ಕಳೆದ ಗುರುವಾರದಿಂದ ಪ್ರಾರಂಭವಾಗಿದೆ. ದೇವಿಯ ಆರಾಧನೆಯಲ್ಲಿ ಭಕ್ತರು ಹೇಗೆ ವಿಭಿನ್ನವಾಗಿರುತ್ತಾರೆಯೋ ಅದೇ ರೀತಿ ಭಕ್ತಿಯ ವಿಧಾನವೂ ಸಹ ವಿಭಿನ್ನವಾಗಿರುತ್ತದೆ. ನವರಾತ್ರಿಯ ವಿಶೇಷವಾಗಿ ವಿವಿಧ ಆಚರಣೆಗಳಲ್ಲಿ ಭಕ್ತರು ತೊಡಗಿಕೊಳ್ಳುತ್ತಾರೆ. ಭಕ್ತರು ಕಲಶವನ್ನು ಸ್ಥಾಪಿಸಿ ವಿಶೇಷ ಪೂಜೆ ಕೈಗೊಳ್ಳುವ ಮೂಲಕ ದೇವಿ ದುರ್ಗೆಯ ಮೊರೆ ಹೋಗುತ್ತಾರೆ. ಕೆಲವರು ಒಂಭತ್ತು ದಿನಗಳ ಕಾಲ ನಡೆಯುವ ಈ ನವರಾತ್ರಿ ವಿಶೇಷವಾಗಿ ಉಪವಾಸ ಕೈಗೊಳ್ಳುತ್ತಾರೆ. ಅದೇ ರೀತಿ ಪಾಟ್ನಾದ ಅರ್ಚಕ ಗಂಗಾಜಲ ತುಂಬಿದ 21 ಕಲಶಗಳನ್ನು ಸ್ಥಾಪಿಸಿ ವಿಶೇಷ ಪೂಜೆ ಕೈಗೊಳ್ಳುವ ಆಚರಣೆಯನ್ನು ಮಾಡುತ್ತಿದ್ದಾರೆ. ಅಚ್ಚರಿಯೆಂದರೆ ಅರ್ಚಕರು ತಮ್ಮ ಎದೆಯ ಮೇಲೆ 21 ಕಲಶಗಳನ್ನೂ ಸಹ ಇಟ್ಟುಕೊಂಡು ದೇವಿಯ ಆರಾಧನೆಯಲ್ಲಿ ತೊಡಗಿಕೊಂಡಿದ್ದಾರೆ.

ದುರ್ಗಾದೇವಿಯನ್ನು ಒಂಭತ್ತು ದಿನಗಳ ಕಾಲ ಅದ್ದೂರಿಯಾಗಿ ಪೂಜಿಸಲಾಗುತ್ತದೆ. ಈ ವಿಶೇಷವಾಗಿ ಪಾಟ್ನಾದ ಅರ್ಚಕರು ವಿಶಿಷ್ಟವಾದ ಆಚರಣೆಯನ್ನು ಮಾಡುತ್ತಿದ್ದಾರೆ. ದೇವಸ್ಥಾನದ ಅರ್ಚಕರಾದ ನಾಗೇಶ್ವರ ಬಾಬಾ ಅವರು ಎದೆಯ ಮೇಲೆ ಗಂಗಾಜಲ ತುಂಬಿದ 21 ಕಲಶಗಳನ್ನು ಸ್ಥಾಪಿಸಿದ್ದಾರೆ. ಕಳೆದ 25 ವರ್ಷಗಳಿಂದ ಈ ಆಚರಣೆಯನ್ನು ಮಾಡುತ್ತಿರುವುದಾಗಿ ಎಎನ್ಐ ಜತೆ ಮಾಹಿತಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಪಾಟ್ನಾದ ದುರ್ಗಾ ದೇವಿಯ ದೇವಸ್ಥಾನದ ಅರ್ಚಕ ನಾಗೇಶ್ವರ ಬಾಬಾ, ಗಂಗಾಜಲ ತುಂಬಿದ 21 ಕಲಶಗಳನ್ನು ತನ್ನ ಎದೆಯ ಮೇಲೆ ಇಟ್ಟುಕೊಂಡು ದುರ್ಗಾದೇವಿಯನ್ನು ಪೂಜಿಸಲು ಆರಂಭಿಸಿದ್ದಾರೆ. ನವರಾತ್ರಿ ಮುಗಿಯುವವರೆಗೆ ನನ್ನ ಎದೆಯ ಮೇಲೆ ಕಲಶವನ್ನು ಇಟ್ಟುಕೊಳ್ಳುತ್ತೇನೆ. ಕಳೆದ 25 ವರ್ಷಗಳಿಂದಲೂ ಈ ಆಚರಣೆಯಲ್ಲಿ ತೊಡಗಿಕೊಂಡು ಬಂದಿದ್ದೇನೆ ಎಂದು ಅವರು ಹೇಳಿದ್ದಾರೆ.

ಚಿತ್ರಗಳಲ್ಲಿ ನೀವು ಗಮನಿಸುವಂತೆ ಅರ್ಚಕರು ತಮ್ಮ ಎದೆಯ ಮೇಲೆ 21 ಕಲಶಗಳನ್ನು ಇಟ್ಟುಕೊಂಡಿರುವುದನ್ನು ನೋಡಬಹುದು. ನವರಾತ್ರಿಯ ಒಂಭತ್ತು ದಿನಗಳವರೆಗೂ ಅರ್ಚಕರು ಉಪವಾಸ ಮಾಡುತ್ತಾ ಆಚರಣೆಯಲ್ಲಿ ತೊಡಗಿಕೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:

ನವರಾತ್ರಿ 2021 ಎರಡನೇ ದಿನ: ದೇವಿ ಬ್ರಹ್ಮಚಾರಿಣಿ ಯಾರು? ಇಲ್ಲಿದೆ ಆಕೆಯ ಮನ ಗೆಲ್ಲುವ ಮಂತ್ರ

Durga Puja: ನವರಾತ್ರಿಯ ಮೊದಲ ದಿನ ಹಳದಿ ಬಣ್ಣ ಶ್ರೇಷ್ಠ; ಈ ವಿಶೇಷ ಶೈಲಿಯ ದಿರಿಸುಗಳನ್ನು ನೀವು ಧರಿಸಬಹುದು

Published On - 11:10 am, Fri, 8 October 21

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ