AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಟ್ನಾಗೆ ಪಾಟಲಿಪುತ್ರ ಎಂದು ಮರುನಾಮಕರಣ; ಬಿಹಾರದ ಸಿಎಂ ಘೋಷಣೆ

ಬಿಹಾರದ ರಾಜಧಾನಿ ಪಾಟ್ನಾ ನಗರದ ಹೆಸರನ್ನು ಬದಲಾಯಿಸುವ ಕುರಿತು ರಾಜಕೀಯ ವಲಯದಲ್ಲಿ ಹಲವು ಬಾರಿ ಚರ್ಚೆಗಳು ಮತ್ತು ಬೇಡಿಕೆಗಳು ಕೇಳಿಬಂದಿವೆ. ಕೇವಲ ಪಾಟ್ನಾ ಮಾತ್ರವಲ್ಲದೆ ಭಕ್ತಿಪುರ, ಬಿಹಾರ ಶರೀಫ್ ಮುಂತಾದ ಸ್ಥಳಗಳ ಹೆಸರನ್ನೂ ಬದಲಾಯಿಸಬೇಕೆಂಬ ಚರ್ಚೆಗಳು ನಡೆದಿವೆ. ಬಿಹಾರದ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಪಾಟ್ನಾದಲ್ಲಿ ಹೊಸದಾಗಿ ನಿರ್ಮಿಸಲು ಉದ್ದೇಶಿಸಿರುವ ಉಪನಗರಕ್ಕೆ 'ಪಾಟಲಿಪುತ್ರ' ಎಂದು ಹೆಸರಿಡುವುದಾಗಿ ಘೋಷಿಸಿದ್ದಾರೆ. ಈ ಕುರಿತು ಪೂರ್ತಿ ಮಾಹಿತಿ ಇಲ್ಲಿದೆ.

ಪಾಟ್ನಾಗೆ ಪಾಟಲಿಪುತ್ರ ಎಂದು ಮರುನಾಮಕರಣ; ಬಿಹಾರದ ಸಿಎಂ ಘೋಷಣೆ
Samrat ChoudharyImage Credit source: PTI
ಸುಷ್ಮಾ ಚಕ್ರೆ
|

Updated on: Jun 17, 2026 | 3:36 PM

Share

ಪಾಟ್ನಾ, ಜೂನ್ 17: ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ (Samrat Choudhary) ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಪಾಟ್ನಾದಲ್ಲಿ ನಿರ್ಮಾಣವಾಗಲಿರುವ ನೂತನ ಉಪನಗರಕ್ಕೆ ರಾಜ್ಯದ ರಾಜಧಾನಿಯ ಪ್ರಾಚೀನ ಹೆಸರನ್ನು ನೆನಪಿಸುವಂತೆ ‘ಪಾಟಲಿಪುತ್ರ’ ಎಂದು ಹೆಸರಿಸಲಾಗುವುದು ಎಂದು ತಿಳಿಸಿದ್ದಾರೆ. ಬಿಹಾರದ ಪಾಟ್ನಾ ನಗರಕ್ಕೆ ಸುದೀರ್ಘವಾದ ಮತ್ತು ಸಮೃದ್ಧವಾದ ಇತಿಹಾಸವಿದೆ. ಪ್ರಾಚೀನ ಭಾರತದಲ್ಲಿ ಮೌರ್ಯ ಮತ್ತು ಗುಪ್ತ ಸಾಮ್ರಾಜ್ಯಗಳ ರಾಜಧಾನಿಯಾಗಿದ್ದ ಈ ನಗರವನ್ನು ‘ಪಾಟಲಿಪುತ್ರ’ ಎಂದು ಕರೆಯಲಾಗುತ್ತಿತ್ತು. ಹೀಗಾಗಿ, ಪ್ರಸ್ತುತ ಇರುವ ‘ಪಾಟ್ನಾ’ ಎಂಬ ಹೆಸರನ್ನು ತೆಗೆದುಹಾಕಿ, ಅದಕ್ಕೆ ಅದರ ಭವ್ಯ ಇತಿಹಾಸವನ್ನು ನೆನಪಿಸುವ ಬಲಿಷ್ಠ ಹೆಸರಾದ ‘ಪಾಟಲಿಪುತ್ರ’ ಎಂದು ಮರುನಾಮಕರಣ ಮಾಡಬೇಕು ಎಂಬುದು ಹಲವು ಸಂಘಟನೆಗಳು ಮತ್ತು ರಾಜಕೀಯ ನಾಯಕರ ದೀರ್ಘಕಾಲದ ಬೇಡಿಕೆಯಾಗಿದೆ.

ಬಿಹಾರದ ಹಲವು ಪ್ರಮುಖ ಬಿಜೆಪಿ (BJP) ನಾಯಕರು ಮತ್ತು ಹಿಂದೂಪರ ಸಂಘಟನೆಗಳು ಪಾಟ್ನಾ ಸೇರಿದಂತೆ ಬಿಹಾರದ ಮುಸ್ಲಿಂ ರಾಜರ ಕಾಲದ ಹೆಸರನ್ನು ಹೊಂದಿರುವ ನಗರಗಳ ಹೆಸರನ್ನು ಬದಲಾಯಿಸಬೇಕು ಎಂದು ಆಗಾಗ ಒತ್ತಾಯಿಸುತ್ತಾ ಬಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಅಲಹಾಬಾದ್ ಅನ್ನು ‘ಪ್ರಯಾಗ್‌ರಾಜ್’ ಎಂದು ಬದಲಾಯಿಸಿದ ಮಾದರಿಯಲ್ಲೇ ಇಲ್ಲೂ ಕ್ರಮ ಕೈಗೊಳ್ಳಬೇಕು ಎಂಬುದು ಅವರ ವಾದವಾಗಿದೆ.

ಇದನ್ನೂ ಓದಿ: ಪಾಟ್ನಾದಲ್ಲಿ ತಿರುಪತಿ ತಿರುಮಲ ದೇವಸ್ಥಾನ ನಿರ್ಮಾಣ; ಬಿಹಾರ ಸರ್ಕಾರದಿಂದ 10.11 ಎಕರೆ ಭೂಮಿ ಮಂಜೂರು

ಹೆಸರು ಬದಲಾವಣೆಯ ವದಂತಿಗಳು ಅಥವಾ ಬೇಡಿಕೆಗಳು ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದ್ದರೂ, ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವಾಗಲಿ ಅಥವಾ ಕೇಂದ್ರ ಸರ್ಕಾರವಾಗಲಿ ಪಾಟ್ನಾ ನಗರದ ಹೆಸರು ಬದಲಾವಣೆಯ ಕುರಿತು ಯಾವುದೇ ಅಧಿಕೃತ ನಿರ್ಧಾರ ಅಥವಾ ಕಾನೂನಾತ್ಮಕ ಪ್ರಕಟಣೆಯನ್ನು ಹೊರಡಿಸಿಲ್ಲ.

ಯಾವುದೇ ಒಂದು ಪ್ರಮುಖ ನಗರದ ಹೆಸರು ಬದಲಾಗಬೇಕಾದರೆ, ಮೊದಲು ರಾಜ್ಯ ಸರ್ಕಾರವು ಅದಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಚಿವ ಸಂಪುಟದಲ್ಲಿ ಅಂಗೀಕರಿಸಬೇಕು. ನಂತರ ಆ ಪ್ರಸ್ತಾವನೆಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಬೇಕು. ಕೇಂದ್ರ ಸರ್ಕಾರ, ರೈಲ್ವೆ ಇಲಾಖೆ, ಪೋಸ್ಟ್ ಮಾಸ್ಟರ್ ಜನರಲ್ ಮತ್ತು ಸರ್ವೇ ಆಫ್ ಇಂಡಿಯಾದಿಂದ ‘ಯಾವುದೇ ಆಕ್ಷೇಪಣೆ ಇಲ್ಲ’ (NOC) ಎಂಬ ಪತ್ರ ಸಿಕ್ಕಿದ ಬಳಿಕವಷ್ಟೇ ಹೆಸರು ಅಧಿಕೃತವಾಗಿ ಬದಲಾಗುತ್ತದೆ.

ಇದನ್ನೂ ಓದಿ: Khan Sir: ಬಿಹಾರದ ‘ಖಾನ್ ಸರ್’ಗೆ ದೊಡ್ಡ ರಿಲೀಫ್, ಗುಂಡಿನ ದಾಳಿ ಪ್ರಕರಣದಲ್ಲಿ ಫೈಸಲ್ ಖಾನ್ ಬಂಧನಕ್ಕೆ ಪಾಟ್ನಾ ನ್ಯಾಯಾಲಯ ತಡೆ

‘ಪಾಟಲಿಪುತ್ರ’ ಎಂಬುದು ಇಂದಿನ ಪಾಟ್ನಾ ನಗರದ ಪ್ರಾಚೀನ ಹೆಸರಾಗಿದ್ದು, ಇದು ಐತಿಹಾಸಿಕ ಮಗದ ಸಾಮ್ರಾಜ್ಯದ ರಾಜಧಾನಿಯಾಗಿತ್ತು. ಇತಿಹಾಸಕಾರರ ಪ್ರಕಾರ, ಈ ನಗರವನ್ನು ಆರಂಭದಲ್ಲಿ ‘ಪಾಟಲಿಗ್ರಾಮ’ ಎಂದು ಕರೆಯಲಾಗುತ್ತಿತ್ತು, ನಂತರ ಅದು ಬೆಳೆದು ‘ಪಾಟಲಿಪುತ್ರ’ ಆಯಿತು. ಶತಮಾನಗಳ ಸುದೀರ್ಘ ಇತಿಹಾಸದ ಹಾದಿಯಲ್ಲಿ ಅದು ರೂಪಾಂತರಗೊಂಡು ಇಂದಿನ ‘ಪಾಟ್ನಾ’ ಆಗಿ ಬದಲಾಯಿತು.

ಸುಮಾರು 3,000 ವರ್ಷಗಳ ಸುದೀರ್ಘ ಇತಿಹಾಸವನ್ನು ಹೊಂದಿರುವ ಪಾಟ್ನಾ ನಗರವು ಒಂದು ಕಾಲದಲ್ಲಿ ಜಾಗತಿಕ ಮಟ್ಟದಲ್ಲಿ ರಾಜಕೀಯ, ವ್ಯಾಪಾರ ಮತ್ತು ಶಿಕ್ಷಣದ ಪ್ರಮುಖ ಕೇಂದ್ರವಾಗಿತ್ತು. ಚಂದ್ರಗುಪ್ತ ಮೌರ್ಯ ಮತ್ತು ಸಾಮ್ರಾಟ್ ಅಶೋಕನಂತಹ ಪ್ರಬಲ ಶಾಸಕರು ಇದೇ ಮಣ್ಣಿನಿಂದ ಇಡೀ ದೇಶವನ್ನು ಆಳಿದ್ದರು ಎಂಬುದು ಗಮನಾರ್ಹ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?"
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?