AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಫೋನಲ್ಲಿ ಮಾತನಾಡುತ್ತಾ ಮ್ಯಾನ್​​ಹೋಲ್​​ಗೆ ಬಿದ್ದ ಮಹಿಳೆ; ವೈರಲ್ ವಿಡಿಯೊ

ಮಹಿಳೆಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾ ಬರುತ್ತಿದ್ದಾಗ ಆಕಸ್ಮಿಕವಾಗಿ ಮ್ಯಾನ್‌ಹೋಲ್‌ಗೆ ಬಿದ್ದಿದ್ದಾರೆ. ಘಟನೆಯ ವಿಡಿಯೊ ಮನೆಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ.

ಮೊಬೈಲ್ ಫೋನಲ್ಲಿ ಮಾತನಾಡುತ್ತಾ ಮ್ಯಾನ್​​ಹೋಲ್​​ಗೆ ಬಿದ್ದ ಮಹಿಳೆ; ವೈರಲ್ ವಿಡಿಯೊ
ಮ್ಯಾನ್​​ಹೋಲ್ ಗೆ ಬಿದ್ದ ಮಹಿಳೆ
TV9 Web
| Edited By: |

Updated on:Apr 22, 2022 | 7:09 PM

Share

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ (Mobile Phoen) ಪ್ರತಿಯೊಬ್ಬರ ಜೀವನದ ಬಹುಮುಖ್ಯ ಭಾಗವಾಗಿದೆ. ಇದು ನಮ್ಮ ಜೀವನವನ್ನು ತುಂಬಾ ಸುಲಭಗೊಳಿಸಿದೆ.  ಏಕೆಂದರೆ ಮೊಬೈಲ್ ಫೋನ್ ಬಳಸಿ ನಾವೆಲ್ಲರೂ ಪ್ರಪಂಚದಾದ್ಯಂತದ ನಮ್ಮ ಪ್ರೀತಿಪಾತ್ರರನ್ನು ಒಂದು ಸೆಕೆಂಡಿನಲ್ಲಿ ಸಂಪರ್ಕಿಸಬಹುದು. ಆದಾಗ್ಯೂ, ಮೊಬೈಲ್ ಫೋನ್‌ಗಳಲ್ಲಿ ಮಾತನಾಡುತ್ತಾ ಮೈಮರೆತ ವ್ಯಕ್ತಿಗಳು ಪ್ರಾಣವನ್ನು ಕಳೆದುಕೊಂಡದ್ದೂ ಇದೆ. ಇಂಥದ್ದೇ ಒಂದು ಘಟನೆ ಪಟನಾದಲ್ಲಿ ನಡೆದಿದೆ. ಮಹಿಳೆಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಮಾತನಾಡುತ್ತಾ ಬರುತ್ತಿದ್ದಾಗ ಆಕಸ್ಮಿಕವಾಗಿ ಮ್ಯಾನ್‌ಹೋಲ್‌ಗೆ (manhole) ಬಿದ್ದಿದ್ದಾರೆ. ಘಟನೆಯ ವಿಡಿಯೊ ಮನೆಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಬಿಹಾರದ ರಾಜಧಾನಿ ಪಟನಾದಲ್ಲಿ(Patna) ಈ ಘಟನೆ ವರದಿಯಾಗಿದೆ. ಉತ್ಕರ್ಷ್ ಸಿಂಗ್ ಎಂಬ ಟ್ವೀಟಿಗರು ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಮಹಿಳೆ ಫೋನ್‌ನಲ್ಲಿ ಮಾತನಾಡುತ್ತಾ ವಾಹನದ ಹಿಂದೆ ನಡೆದುಕೊಂಡು ಹೋಗುತ್ತಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ. ಅದೇ ರಸ್ತೆಯೊಂದರಲ್ಲಿ ನಿಲ್ಲಿಸಿದ್ದ ಇ-ರಿಕ್ಷಾ ಮುಂದೆ ಹೋಗುತ್ತದೆ. ವಾಹನದ ಹಿಂದೆ ಬರುತ್ತಿದ ಮಹಿಳೆ ಮ್ಯಾನ್​​ಹೋಲ್​​ಗೆ ಬೀಳುತ್ತಿರುವುದು ವಿಡಿಯೊದಲ್ಲಿದೆ. ಮಹಿಳೆ ಮ್ಯಾನ್‌ಹೋಲ್‌ಗೆ ಬಿದ್ದ ತಕ್ಷಣ ಮಹಿಳೆಯನ್ನು ಹೊರತೆಗೆಯಲು ಸ್ಥಳೀಯರು ಅವರ ಕಡೆಗೆ ಧಾವಿಸಿದರು. ಸುಮಾರು 10 ಜನರು ಮಹಿಳೆಯನ್ನು ಮೇಲೆತ್ತಿದ್ದಾರೆ. ಇಲ್ಲಿಯವರೆಗೆ, ವಿಡಿಯೊ 230 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು 10 ಲೈಕ್‌ಗಳನ್ನುಪಡೆದಿದೆ. 45 ಸೆಕೆಂಡ್‌ಗಳ ವಿಡಿಯೊಗೆ ಕೆಲವು ಕಾಮೆಂಟ್‌ಗಳು ಕೂಡ ಬಂದಿವೆ.ಸದ್ಯ ಮಹಿಳೆಗೆ ಗಾಯವಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸ್ಥಳೀಯರು ಮಹಿಳೆಯನ್ನು ಗುಂಡಿಯಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿಡಿಯೊ ತೋರಿಸುತ್ತದೆ.

ಅಂದ ಹಾಗೆ ಈ ಮ್ಯಾನ್‌ಹೋಲ್‌ನ ಮುಚ್ಚಳ ಎಲ್ಲಿದೆ ಎಂದು ಯಾವುದೇ ವರದಿಗಳಿಲ್ಲ.

ಇದನ್ನೂ ಓದಿ‘ವಾಯ್ಲೆನ್ಸ್ ವಾಯ್ಲೆನ್ಸ್ ವಾಯ್ಲೆನ್ಸ್​’ ಶೈಲಿಯಲ್ಲಿ ಬಿಬಿಎಂಪಿ ಕಾಲೆಳೆದ ನೆಟ್ಟಿಗರು; ವೈರಲ್ ಆಗುತ್ತಿದೆ ವಿಡಿಯೋ

Published On - 7:07 pm, Fri, 22 April 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?