AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pawan Kalyan DCM: ಪವನ್ ಕಲ್ಯಾಣ್​​​​​​ ಆಂಧ್ರದ ಉಪ ಮುಖ್ಯಮಂತ್ರಿ, ಜತೆಗೆ ನಾಲ್ಕು ಹೆಚ್ಚುವರಿ ಖಾತೆ

ಪವನ್​​ ಕಲ್ಯಾಣ್​​​ ಆಂಧ್ರದ ಉಪಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಜನಸೇನಾ ಪಕ್ಷದ ಮುಖ್ಯಸ್ಥರಾಗಿರುವ ಪವನ್​​​, ಚಂದ್ರಬಾಬು ನಾಯ್ಡು ಸರ್ಕಾರಕ್ಕೆ ಬೆಂಬಲ ನೀಡಿದರು. ಇದೀಗ ಅವರ ಜತೆಗೆ ಸೇರಿ ಸರ್ಕಾರ ರಚನೆ ಮಾಡಿದ್ದಾರೆ. ಇದರ ಜತೆಗೆ ಬಿಜೆಪಿ ಕೂಡ ಒಂದು ಸಚಿವ ಸ್ಥಾನವನ್ನು ಪಡೆದುಕೊಂಡಿದೆ. ಪವನ್​​ಗೆ ಡಿಸಿಎಂ ಜತೆಗೆ ನಾಲ್ಕು ಹೆಚ್ಚುವರಿ ಖಾತೆಯನ್ನು ನೀಡಲಾಗಿದೆ.

Pawan Kalyan DCM: ಪವನ್ ಕಲ್ಯಾಣ್​​​​​​ ಆಂಧ್ರದ ಉಪ ಮುಖ್ಯಮಂತ್ರಿ, ಜತೆಗೆ ನಾಲ್ಕು ಹೆಚ್ಚುವರಿ ಖಾತೆ
ಅಕ್ಷಯ್​ ಪಲ್ಲಮಜಲು​​
|

Updated on:Jun 15, 2024 | 10:06 AM

Share

ಅಮರಾವತಿ, ಜೂ.15: ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು (chandrababu naidu) ನಾಯಕತ್ವದಲ್ಲಿ ಸರ್ಕಾರ ರಚನೆ ಆಗಿದೆ. ಈಗಾಗಲೇ ಸರ್ಕಾರದ ನೂತನ ಸಚಿವರಿಗೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ, ಚಂದ್ರಬಾಬು ನಾಯ್ಡು ಸರ್ಕಾರಕ್ಕೆ ಬೆಂಬಲ ನೀಡಿದ ಜನಸೇನಾ ಪಕ್ಷದ ಮುಖ್ಯಸ್ಥ ಪವನ್​​ ಕಲ್ಯಾಣ್ (pawan kalyan)​​​ ಅವರು ಆಂಧ್ರದ ಉಪಮುಖ್ಯಮಂತ್ರಿಯಾಗಿ ನೇಮಕಾಗೊಂಡಿದ್ದಾರೆ. ಇದರ ಜತೆಗೆ ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣ ನೀರು ಸರಬರಾಜು ಖಾತೆಗಳೊಂದಿಗೆ ಪರಿಸರ ಮತ್ತು ಅರಣ್ಯ, ವಿಜ್ಞಾನ ಮತ್ತು ತಂತ್ರಜ್ಞಾನದೊಂದಿಗೆ ಹೆಚ್ಚುವರಿ ಸ್ಥಾನವನ್ನು ನೀಡಲಾಗಿದೆ.

ಚಂದ್ರಬಾಬು ನಾಯ್ಡು ಸರ್ಕಾರ ಶುಕ್ರವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಇದರಲ್ಲಿ ಪವನ್ ಕಲ್ಯಾಣ್ ಕೂಡ ಒಬ್ಬರು. ಪವನ್ ಮೊದಲ ಬಾರಿಗೆ ಪಿಠಾಪುರಂದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. 2014 ಮತ್ತು 2019 ರ ನಡುವೆ ಟಿಡಿಪಿ ಸರ್ಕಾರದಲ್ಲಿ ಸಚಿವರಾಗಿದ್ದ ನಾರಾಯಣ ಗ್ರೂಪ್ ಆಫ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ ಪಿ ನಾರಾಯಣ ಅವರಿಗೆ ಮತ್ತೆ ನಗರಾಭಿವೃದ್ಧಿ, ಪೌರಾಡಳಿತ ಖಾತೆಗಳನ್ನು ನೀಡಲಾಗಿದೆ.

ಮಂತ್ರಿ ಪಕ್ಷ       ಖಾತೆ
ಎನ್ ಚಂದ್ರಬಾಬು ನಾಯ್ಡು ಟಿಡಿಪಿ GAD, ಕಾನೂನು ಮತ್ತು ಸುವ್ಯವಸ್ಥೆ, ಸಾರ್ವಜನಿಕ ಉದ್ಯಮಗಳು ಮತ್ತು ಇತರ ಎಲ್ಲಾ ಖಾತೆಗಳನ್ನು ಮಂತ್ರಿಗಳಿಗೆ ಹಂಚಿಕೆ ಮಾಡಲಾಗಿಲ್ಲ
ಕೊನಿಡೇಲ ಪವನ್​​ ಕಲ್ಯಾಣ್ JSP ಡಿ ಸಿಎಂ: ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣ ನೀರು ಸರಬರಾಜು. ಪರಿಸರ ಮತ್ತು ಅರಣ್ಯ, ವಿಜ್ಞಾನ ಮತ್ತು ತಂತ್ರಜ್ಞಾನ
ಎನ್ ಲೋಕೇಶ್ ನಾಯ್ಡು ಟಿಡಿಪಿ HRD, IT, ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ.
ಕಿಂಜರಾಪು ಅಚ್ಚೆನ್ನೈಡು ಬಿಜೆಪಿ ಕೃಷಿ, ಸಹಕಾರ ಮತ್ತು ಮಾರುಕಟ್ಟೆ. ಪಶುಸಂಗೋಪನೆ, ಡೈರಿ ಮತ್ತು ಮೀನುಗಾರಿಕೆ
ಕೊಲ್ಲು ರವೀಂದ್ರ ಟಿಡಿಪಿ ಗಣಿ ಮತ್ತು ಭೂವಿಜ್ಞಾನ, ಅಬಕಾರಿ
ನಾದೆಂದ್ಲ ಮನೋಹರ್ JSP ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು
ಪೊಂಗೂರು ನಾರಾಯಣ ಟಿಡಿಪಿ ಮುನ್ಸಿಪಲ್ ಆಡಳಿತ ಮತ್ತು ನಗರಾಭಿವೃದ್ಧಿ
ಅನಿತಾ ವಂಗಲಪುಡಿ ಟಿಡಿಪಿ ಮನೆ. ವಿಪತ್ತು ನಿರ್ವಹಣೆ
ಸತ್ಯ ಕುಮಾರ್ ಯಾದವ್ ಬಿಜೆಪಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ. ಕುಟುಂಬ ಕಲ್ಯಾಣ
ಡಾ ನಿಮ್ಮಾ ರಾಮಾನಾಯ್ಡು ಟಿಡಿಪಿ ಜಲ ಸಂಪನ್ಮೂಲ ಅಭಿವೃದ್ಧಿ
ಎನ್ ಮೊಹಮ್ಮದ್ ಫಾರೂಕ್ ಟಿಡಿಪಿ ಕಾನೂನು, ಅಲ್ಪಸಂಖ್ಯಾತರ ಅಭಿವೃದ್ಧಿ
ಆನಂ ರಾಮನಾರಾಯಣ ರೆಡ್ಡಿ ಟಿಡಿಪಿ ದಾನಗಳನ್ನು
ಪಯ್ಯಾವುಳ ಕೇಶವ ಟಿಡಿಪಿ ಹಣಕಾಸು, ಯೋಜನೆ, ವಾಣಿಜ್ಯ ತೆರಿಗೆಗಳು ಮತ್ತು ಶಾಸಕಾಂಗ ವ್ಯವಹಾರಗಳು
ಅನಗಣಿ ಸತ್ಯ ಪ್ರಸಾದ್ ಟಿಡಿಪಿ ಆದಾಯ, ಅಂಚೆಚೀಟಿಗಳು ಮತ್ತು ನೋಂದಣಿಗಳು
ಕೊಲುಸು ಪಾರ್ಥಸಾರಧಿ ಟಿಡಿಪಿ ವಸತಿ, I&PR
ಡಾ ಡಿ ಬಾಲ ವೀರಾಂಜನೇಯ ಸ್ವಾಮಿ ಟಿಡಿಪಿ ಸಮಾಜ ಕಲ್ಯಾಣ (ಅಂಗವಿಕಲರು ಮತ್ತು ಹಿರಿಯ ನಾಗರಿಕರ ಕಲ್ಯಾಣ), ಸಚಿವಾಲಯ, ಗ್ರಾಮ ಸ್ವಯಂಸೇವಕರು
ಗೊಟ್ಟಿಪಟ್ಟಿ ರವಿಕುಮಾರ್ ಟಿಡಿಪಿ ಶಕ್ತಿ
ಕಂದುಲ ದುರ್ಗೇಶ್ JSP ಪ್ರವಾಸೋದ್ಯಮ, ಸಂಸ್ಕೃತಿ, ಸಿನಿಮಾಟೋಗ್ರಫಿ
ಗುಮ್ಮಡಿ ಸಂಧ್ಯಾ ರಾಣಿ ಟಿಡಿಪಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಬುಡಕಟ್ಟು ಕಲ್ಯಾಣ
ಬಿ.ಸಿ.ಜನಾರ್ದನರೆಡ್ಡಿ ಟಿಡಿಪಿ ರಸ್ತೆಗಳು ಮತ್ತು ಕಟ್ಟಡಗಳು, ಮೂಲಸೌಕರ್ಯ, ಹೂಡಿಕೆಗಳು
ಟಿ ಜಿ ಭರತ್ ಟಿಡಿಪಿ ಕೈಗಾರಿಕೆಗಳು ಮತ್ತು ವಾಣಿಜ್ಯ, ಆಹಾರ ಸಂಸ್ಕರಣೆ
ಎಸ್ ಸವಿತಾ ಟಿಡಿಪಿ ಬಿ.ಸಿ.ಕಲ್ಯಾಣ, ಕೈಮಗ್ಗ
ವಾಸಮಶೆಟ್ಟಿ ಸುಭಾಷ್ ಟಿಡಿಪಿ ಕಾರ್ಮಿಕ, ಕಾರ್ಖಾನೆಗಳು, ಬಾಯ್ಲರ್ಗಳು ಮತ್ತು ಉದ್ಯೋಗ, ವಿಮೆ ವೈದ್ಯಕೀಯ ಸೇವೆಗಳು
ಕೊಂಡಪಲ್ಲಿ ಶ್ರೀನಿವಾಸ್ ಟಿಡಿಪಿ MSME, SERP, NRI ಸಬಲೀಕರಣ ಮತ್ತು ಸಂಬಂಧಗಳು
ಮಂದಪಲ್ಲಿ ರಾಮ್ ಪ್ರಸಾದ್ ರೆಡ್ಡಿ ಟಿಡಿಪಿ ಸಾರಿಗೆ, ಯುವಜನತೆ ಮತ್ತು ಕ್ರೀಡೆ

ಟಿಡಿಪಿ ರಾಜ್ಯಾಧ್ಯಕ್ಷ ಕೆ ಅಚ್ಚೆನಾಯ್ಡು ಅವರಿಗೆ ಕೃಷಿ, ಸಹಕಾರ ಮತ್ತು ಮಾರುಕಟ್ಟೆ, ಹಾಗೂ ಪಶುಸಂಗೋಪನೆ, ಡೈರಿ ಮತ್ತು ಮೀನುಗಾರಿಕೆ ನೀಡಲಾಗಿದೆ. ಇವರು ಕೂಡ ಈ ಹಿಂದೆ ಚಂದ್ರಬಾಬು ನಾಯ್ಡು ಸರ್ಕಾರದಲ್ಲಿ ಸಚಿವರಾಗಿದ್ದರು. ಟಿಡಿಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ನಾಯ್ಡು ಅವರ ಪುತ್ರ ಲೋಕೇಶ್ ಅವರನ್ನು ಎಚ್‌ಆರ್‌ಡಿ, ಐಟಿ, ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಸಚಿವರಾಗಿ ನೇಮಕಾ ಮಾಡಲಾಗಿದೆ.

ಇದನ್ನೂ ಓದಿ: ‘ನಿರುದ್ಯೋಗ ಭತ್ಯೆ’ ನೀಡುವುದಾಗಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಘೋಷಣೆ

ಇನ್ನು ಚಂದ್ರಬಾಬು ನಾಯ್ಡು ಅವರ ಸರ್ಕಾರಕ್ಕೆ ಬೆಂಬಲ ನೀಡಿರುವ ಬಿಜೆಪಿಯ ಸತ್ಯ ಕುಮಾರ್ ಯಾದವ್ ಅವರಿಗೆ ವೈದ್ಯಕೀಯ, ಆರೋಗ್ಯ, ಕುಟುಂಬ ಕಲ್ಯಾಣ ಖಾತೆಯನ್ನು ನೀಡಲಾಗಿದೆ. ಟಿಡಿಪಿ ನಾಯಕಿ ವಿ ಅನಿತಾ ರಾಜ್ಯದ ಗೃಹ ಸಚಿವರಾಗಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:06 am, Sat, 15 June 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ