ಜೈಲಿನಲ್ಲಿ ಚಂದ್ರಬಾಬು ನಾಯ್ಡು ಭೇಟಿಯಾದ ಪವನ್ ಕಲ್ಯಾಣ್: ಟಿಡಿಪಿ-ಜನಸೇನೆ ಒಟ್ಟಾಗಿ ಆಂದ್ರ ಅಸೆಂಬ್ಲಿ ಚುನಾವಣೆ ಎದುರಿಸಲಿದೆ ಎಂದು ಘೋಷಣೆ

|

Updated on: Sep 14, 2023 | 3:27 PM

ಕೇಂದ್ರ ಕಾರಾಗೃಹದಲ್ಲಿ ಸುಮಾರು 40 ನಿಮಿಷಗಳ ಕಾಲ ಚಂದ್ರಬಾಬು ನಾಯ್ಡು-ಪವನ್ ಕಲ್ಯಾಣ್ ಭೇಟಿ ಏರ್ಪಟ್ಟಿದ್ದು, ಬಳಿಕ ನಟ, ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಮಾಧ್ಯಮದವರೊಂದಿಗೆ ಮಾತನಾಡಿದರು. ಆ ವೇಳೆ ಟಿಡಿಪಿ-ಜನಸೇನೆ ಒಟ್ಟಾಗಿ ಚುನಾವಣೆ ಎದುರಿಸಲಿದೆ ಎಂದು ಘೋಷಣೆ ಮಾಡಿದರು.

ಜೈಲಿನಲ್ಲಿ ಚಂದ್ರಬಾಬು ನಾಯ್ಡು ಭೇಟಿಯಾದ ಪವನ್ ಕಲ್ಯಾಣ್: ಟಿಡಿಪಿ-ಜನಸೇನೆ ಒಟ್ಟಾಗಿ ಆಂದ್ರ ಅಸೆಂಬ್ಲಿ ಚುನಾವಣೆ ಎದುರಿಸಲಿದೆ ಎಂದು ಘೋಷಣೆ
ಜೈಲಿನಲ್ಲಿ ಚಂದ್ರಬಾಬು ನಾಯ್ಡು ಭೇಟಿಯಾದ ಪವನ್ ಕಲ್ಯಾಣ್
Follow us on

ಹೈದರಾಬಾದ್​, ಸೆಪ್ಟೆಂಬರ್​ 14: ನಟ, ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು (Jana Sena leader Pawan Kalyan) ತೆಲುಗು ದೇಶಂ ಪಕ್ಷದ (ಟಿಡಿಪಿ TDP) ಶಾಸಕ- ನಟ ಬಾಲಕೃಷ್ಣ ಮತ್ತು ನಾರಾ ಲೋಕೇಶ್ ಅವರೊಂದಿಗೆ ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ (Rajamahendravaram central jail) ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರನ್ನು ಇಂದು ಗುರುವಾರ ಸುಮಾರು 40 ನಿಮಿಷಗಳ ಕಾಲ ಭೇಟಿ ಮಾಡಿದರು. ಇದೇ ವೇಳೆ, ಮುಂಬರುವ 2024 ರ ವಿಧಾನಸಭಾ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ (Andhra Pradesh Assembly elections 2024) ತೆಲುಗು ದೇಶಂ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಲಿದ್ದೇವೆ ಎಂದು ಜನಸೇನಾ ನಾಯಕ ಪವನ್ ಕಲ್ಯಾಣ್ ಘೋಷಣೆ ಮಾಡಿದ್ದಾರೆ.

ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪವನ್ ಕಲ್ಯಾಣ್, “ಆಂಧ್ರಪ್ರದೇಶವು ವೈಎಸ್‌ಆರ್‌ಸಿಪಿಯನ್ನು ಭರಿಸಲು ಸಾಧ್ಯವಿಲ್ಲ, ನಾನು ಇಲ್ಲಿಯವರೆಗೆ ಟಿಡಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದೆ. ಆದರೆ ಇಂದು ಸಿಬಿಎನ್‌ನೊಂದಿಗೆ (ಚಂದ್ರಬಾಬು ನಾಯ್ಡು) ಭೇಟಿಯಾದ ನಂತರ, ಜನಸೇನೆ ಮತ್ತು ಟಿಡಿಪಿ ಒಟ್ಟಿಗೆ ಚುನಾವಣೆ ಎದುರಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

“ನನಗೆ ನೀತಿಗೆ ಸಂಬಂಧಿಸಿದಂತೆ CBN ನೊಂದಿಗೆ ಭಿನ್ನಾಭಿಪ್ರಾಯಗಳಿವೆ ಮತ್ತು ನಾವು ಈ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ಆದರೆ ನಾನು ಅವರ ಅನುಭವ ಮತ್ತು ಜನ ನಾಯಕನಾಗಿ ಅವರ ಸಾಮರ್ಥ್ಯವನ್ನು ಎಂದಿಗೂ ಕಳೆಗುಂದಿಸಲಿಲ್ಲ. ಅವರು ಸೈಬರಾಬಾದ್ ಅನ್ನು ಸಾಧ್ಯವಾಗಿಸಿದ ಮತ್ತು ಐಟಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ ವ್ಯಕ್ತಿ ಎಂದು ಇದೇ ವೇಳೆ ಹೇಳಿದರು.

ಕಳೆದ 4 ವರ್ಷಗಳಿಂದ ಆಡಳಿತ ಪಕ್ಷವು ಹೇಗೆ ವರ್ತಿಸುತ್ತಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ ಮತ್ತು ಅದರ ಭಾಗವಾಗಿ ಇದೀಗ ಚಂದ್ರಬಾಬು ನಾಯ್ಡು ಅವರನ್ನು ಕಾನೂನುಬಾಹಿರವಾಗಿ ಗುರಿಯಾಗಿಸಿಕೊಂಡು ಜೈಲಿಗೆ ಕಳುಹಿಸಿದ್ದಾರೆ. ಇದು ತುಂಬಾ ದುಃಖಕರವಾಗಿದೆ. ಅವರ ಜೊತೆ ನನ್ನ ಒಗ್ಗಟ್ಟು ಪ್ರದರ್ಶಿಸಲು ನಾನು ಇಲ್ಲಿಗೆ ಬಂದಿದ್ದೇನೆ ಎಂದು ಪವನ್ ಹೇಳಿದರು.

ಇದನ್ನೂ ಓದಿ: Chandra Babu Naidu: ಎ1 ಆಗಿ ಚಂದ್ರಬಾಬು ನಾಯ್ಡುಗೆ ಕಾಡುತ್ತಿರುವ ಮತ್ತೊಂದು ಪ್ರಕರಣ! ಅದರ ವಿವರ ಇಲ್ಲಿದೆ

ಪವನ್ ಕಲ್ಯಾಣ್ ಜೈಲಿನಲ್ಲಿ ನಾಯ್ಡು ಅವರನ್ನು ಭೇಟಿ ಮಾಡಲು ಇದು ಎರಡನೇ ಬಾರಿಗೆ ಪ್ರಯತ್ನಿದ್ದು. ಭಾನುವಾರ ಅವರ ಈ ಹಿಂದಿನ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದರು. ಹೈದರಾಬಾದ್‌ನ ಬೇಗಂಪೇಟ್ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನ ಹತ್ತಲು ಅನುಮತಿ ನಿರಾಕರಿಸಲಾಯಿತು. ರಸ್ತೆ ಮಾರ್ಗವಾಗಿ ಹೋಗುತ್ತಿದ್ದಾಗಲೂ ಅವರನ್ನು ತಡೆದರು.

ಇತ್ತೀಚೆಗೆ, ಕಲ್ಯಾಣ್ ಮತ್ತು ನಾಯ್ಡು ಇಬ್ಬರೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರನ್ನು ಸಾಮಾನ್ಯ ಶತ್ರುವಾಗಿ ನೋಡುವುದರೊಂದಿಗೆ ಟಿಡಿಪಿ ಮತ್ತು ಜನಸೇನೆ ನಡುವಿನ ಸಂಬಂಧವು ಅರಳಿದೆ. ಕಳೆದ ವಾರ ಚಂದ್ರಬಾಬು ನಾಯ್ಡು ಬಂಧನವಾದಾಗ, ಅದನ್ನು ಅವರು ತೀವ್ರವಾಗಿ ಖಂಡಿಸಿದ್ದರು. ಈ ವೇಳೆ ಚಂದ್ರಬಾಬು ನಾಯ್ಡು ಅವರ ಪುತ್ರ ಲೋಕೇಶ್‌ಗೂ ಕರೆ ಮಾಡಿ ಒಗ್ಗಟ್ಟು ವ್ಯಕ್ತಪಡಿಸಿದ್ದರು. ಕೌಶಲ್ಯಾಭಿವೃದ್ಧಿ ಹಗರಣದಲ್ಲಿ ಭ್ರಷ್ಟಾಚಾರದ ಆರೋಪದಲ್ಲಿ ಟಿಡಿಪಿ ನಾಯಕ ಸಿಬಿ ನಾಯ್ಡು ಅವರನ್ನು ಕಳೆದ ವಾರ ಬಂಧಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:25 pm, Thu, 14 September 23