AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಾನ್​ ಎಂಬ ಒಂದೇ ಕಾರಣಕ್ಕೆ ಅವರು ಟಾರ್ಗೆಟ್​ ಆಗಿದ್ದಾರೆ..‘-ಡ್ರಗ್ಸ್​ ಕೇಸ್​ ಬಗ್ಗೆ ಮೆಹಬೂಬ್​ ಮುಫ್ತಿ ವಿಚಿತ್ರ ಹೇಳಿಕೆ

ಬಾಲಿವುಡ್​ ಸ್ಟಾರ್ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್ ಸದ್ಯ ಎನ್​ಸಿಬಿ ಕಸ್ಟಡಿಯಲ್ಲಿ ಇದ್ದಿದ್ದು ದೇಶಾದ್ಯಂತ ಸುದ್ದಿಯಾಗಿದೆ. ಮುಂಬೈ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್​ ಪಾರ್ಟಿಯಲ್ಲಿ ಆರ್ಯನ್​ ಖಾನ್​ ಕೂಡ ಇದ್ದರು.

‘ಖಾನ್​ ಎಂಬ ಒಂದೇ ಕಾರಣಕ್ಕೆ ಅವರು ಟಾರ್ಗೆಟ್​ ಆಗಿದ್ದಾರೆ..‘-ಡ್ರಗ್ಸ್​ ಕೇಸ್​ ಬಗ್ಗೆ ಮೆಹಬೂಬ್​ ಮುಫ್ತಿ ವಿಚಿತ್ರ ಹೇಳಿಕೆ
ಮೆಹಬೂಬಾ ಮುಫ್ತಿ
TV9 Web
| Edited By: |

Updated on: Oct 11, 2021 | 3:45 PM

Share

ಇದೀಗ ಮಾದಕದ್ರವ್ಯ ಸೇವನೆ ಕೇಸ್(Mumbai Cruise Drugs) ​​ನಲ್ಲಿ ಆರ್ಯನ್​ ಖಾನ್​ ಸಿಕ್ಕಿಬಿದ್ದಿರುವ ಕುರಿತಾಗಿ ಜಮ್ಮು-ಕಾಶ್ಮೀರ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ (Mehbooba Mufti )ವಿಚಿತ್ರ ಹೇಳಿಕೆಯನ್ನು ನೀಡಿದ್ದಾರೆ. ಆರ್ಯನ್​ ಖಾನ್​​ ತಮ್ಮ ಉಪನಾಮದಿಂದಾಗಿ ಹೀಗೆ ಕೇಂದ್ರೀಯ ಕಾನೂನು ಜಾರಿ ಸಂಸ್ಥೆಗಳಿಂದ ಟಾರ್ಗೆಟ್​ ಆಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.  ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಬಿಜೆಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಆರೋಪಿಯಾಗಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ, ಕೇಂದ್ರ ಸರ್ಕಾರ ಆರ್ಯನ್​ ಖಾನ್​ ಬೆನ್ನು ಬಿದ್ದಿದೆ ಎಂದು ಟೀಕಿಸಿದ್ದಾರೆ.  

ಟ್ವೀಟ್​ ಮಾಡಿರುವ ಮೆಹಬೂಬ ಮುಫ್ತಿ,  ನಾಲ್ಕು ರೈತರನ್ನು ಕೊಂದ ಆರೋಪ ಹೊತ್ತಿರುವ ಕೇಂದ್ರ ಸಚಿವರ ಪುತ್ರನ ವಿರುದ್ಧ ತನಿಖೆ ಶುರು ಮಾಡುವ ಬದಲು, 23 ವರ್ಷದ ಯುವಕನ ಹಿಂದೆ ಬಿದ್ದಿವೆ. ಆತನ ಉಪನಾಮ ಖಾನ್​ ಎಂದು ಇರುವುದೇ ಇದಕ್ಕೆ ಮುಖ್ಯ ಕಾರಣ ಎಂಬುದು ಎಲ್ಲರಿಗೂ ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

ಬಾಲಿವುಡ್​ ಸ್ಟಾರ್ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್ ಸದ್ಯ ಎನ್​ಸಿಬಿ ಕಸ್ಟಡಿಯಲ್ಲಿ ಇದ್ದಿದ್ದು ದೇಶಾದ್ಯಂತ ಸುದ್ದಿಯಾಗಿದೆ. ಮುಂಬೈ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್​ ಪಾರ್ಟಿಯಲ್ಲಿ ಆರ್ಯನ್​ ಖಾನ್​ ಕೂಡ ಇದ್ದರು. ಆರ್ಯನ್​ ಖಾನ್​ಗೆ ಕೋರ್ಟ್​ ಜಾಮೀನು ನಿರಾಕರಿಸಿದ್ದು, ವಿಚಾರಣೆ ಮುಂದುವರಿದಿದೆ. ಇದೇ ಹೊತ್ತಲ್ಲಿ ಉತ್ತರಪ್ರದೇಶದಲ್ಲಿ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕೇಂದ್ರ ಗೃಹ ಇಲಾಖೆ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಹೆಸರು ಕೇಳಿಬಂದಿದ್ದು, ಮೊನ್ನೆ ಅವರನ್ನು ಬಂಧಿಸಲಾಗಿದೆ. ಆದರೆ ಆಶೀಶ್​ ಮಿಶ್ರಾರ ಬಂಧನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರ್ಕಾರ ತುಂಬ ವಿಳಂಬ ಮಾಡಿತು ಎಂಬ ಆರೋಪವೂ ಕೇಳಿಬರುತ್ತಿದೆ. ಈಗ ಈ ವಿಚಾರವನ್ನೇ ಇಟ್ಟುಕೊಂಡು ಮೆಹಬೂಬಾ ಮುಫ್ತಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ದಸರಾ ವಿಶೇಷ ಕೊಡುಗೆ; ನಾರಾಯಣ ಹೃದಯಾಲಯದಿಂದ ಮೈಸೂರಿನಲ್ಲಿ ಒಂದು ಸಾವಿರ ಜನರಿಗೆ ಉಚಿತ ಲಸಿಕೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!