AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಾನ್​ ಎಂಬ ಒಂದೇ ಕಾರಣಕ್ಕೆ ಅವರು ಟಾರ್ಗೆಟ್​ ಆಗಿದ್ದಾರೆ..‘-ಡ್ರಗ್ಸ್​ ಕೇಸ್​ ಬಗ್ಗೆ ಮೆಹಬೂಬ್​ ಮುಫ್ತಿ ವಿಚಿತ್ರ ಹೇಳಿಕೆ

ಬಾಲಿವುಡ್​ ಸ್ಟಾರ್ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್ ಸದ್ಯ ಎನ್​ಸಿಬಿ ಕಸ್ಟಡಿಯಲ್ಲಿ ಇದ್ದಿದ್ದು ದೇಶಾದ್ಯಂತ ಸುದ್ದಿಯಾಗಿದೆ. ಮುಂಬೈ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್​ ಪಾರ್ಟಿಯಲ್ಲಿ ಆರ್ಯನ್​ ಖಾನ್​ ಕೂಡ ಇದ್ದರು.

‘ಖಾನ್​ ಎಂಬ ಒಂದೇ ಕಾರಣಕ್ಕೆ ಅವರು ಟಾರ್ಗೆಟ್​ ಆಗಿದ್ದಾರೆ..‘-ಡ್ರಗ್ಸ್​ ಕೇಸ್​ ಬಗ್ಗೆ ಮೆಹಬೂಬ್​ ಮುಫ್ತಿ ವಿಚಿತ್ರ ಹೇಳಿಕೆ
ಮೆಹಬೂಬಾ ಮುಫ್ತಿ
TV9 Web
| Edited By: |

Updated on: Oct 11, 2021 | 3:45 PM

Share

ಇದೀಗ ಮಾದಕದ್ರವ್ಯ ಸೇವನೆ ಕೇಸ್(Mumbai Cruise Drugs) ​​ನಲ್ಲಿ ಆರ್ಯನ್​ ಖಾನ್​ ಸಿಕ್ಕಿಬಿದ್ದಿರುವ ಕುರಿತಾಗಿ ಜಮ್ಮು-ಕಾಶ್ಮೀರ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ (Mehbooba Mufti )ವಿಚಿತ್ರ ಹೇಳಿಕೆಯನ್ನು ನೀಡಿದ್ದಾರೆ. ಆರ್ಯನ್​ ಖಾನ್​​ ತಮ್ಮ ಉಪನಾಮದಿಂದಾಗಿ ಹೀಗೆ ಕೇಂದ್ರೀಯ ಕಾನೂನು ಜಾರಿ ಸಂಸ್ಥೆಗಳಿಂದ ಟಾರ್ಗೆಟ್​ ಆಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.  ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಬಿಜೆಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಆರೋಪಿಯಾಗಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ, ಕೇಂದ್ರ ಸರ್ಕಾರ ಆರ್ಯನ್​ ಖಾನ್​ ಬೆನ್ನು ಬಿದ್ದಿದೆ ಎಂದು ಟೀಕಿಸಿದ್ದಾರೆ.  

ಟ್ವೀಟ್​ ಮಾಡಿರುವ ಮೆಹಬೂಬ ಮುಫ್ತಿ,  ನಾಲ್ಕು ರೈತರನ್ನು ಕೊಂದ ಆರೋಪ ಹೊತ್ತಿರುವ ಕೇಂದ್ರ ಸಚಿವರ ಪುತ್ರನ ವಿರುದ್ಧ ತನಿಖೆ ಶುರು ಮಾಡುವ ಬದಲು, 23 ವರ್ಷದ ಯುವಕನ ಹಿಂದೆ ಬಿದ್ದಿವೆ. ಆತನ ಉಪನಾಮ ಖಾನ್​ ಎಂದು ಇರುವುದೇ ಇದಕ್ಕೆ ಮುಖ್ಯ ಕಾರಣ ಎಂಬುದು ಎಲ್ಲರಿಗೂ ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

ಬಾಲಿವುಡ್​ ಸ್ಟಾರ್ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್ ಸದ್ಯ ಎನ್​ಸಿಬಿ ಕಸ್ಟಡಿಯಲ್ಲಿ ಇದ್ದಿದ್ದು ದೇಶಾದ್ಯಂತ ಸುದ್ದಿಯಾಗಿದೆ. ಮುಂಬೈ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್​ ಪಾರ್ಟಿಯಲ್ಲಿ ಆರ್ಯನ್​ ಖಾನ್​ ಕೂಡ ಇದ್ದರು. ಆರ್ಯನ್​ ಖಾನ್​ಗೆ ಕೋರ್ಟ್​ ಜಾಮೀನು ನಿರಾಕರಿಸಿದ್ದು, ವಿಚಾರಣೆ ಮುಂದುವರಿದಿದೆ. ಇದೇ ಹೊತ್ತಲ್ಲಿ ಉತ್ತರಪ್ರದೇಶದಲ್ಲಿ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕೇಂದ್ರ ಗೃಹ ಇಲಾಖೆ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಹೆಸರು ಕೇಳಿಬಂದಿದ್ದು, ಮೊನ್ನೆ ಅವರನ್ನು ಬಂಧಿಸಲಾಗಿದೆ. ಆದರೆ ಆಶೀಶ್​ ಮಿಶ್ರಾರ ಬಂಧನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರ್ಕಾರ ತುಂಬ ವಿಳಂಬ ಮಾಡಿತು ಎಂಬ ಆರೋಪವೂ ಕೇಳಿಬರುತ್ತಿದೆ. ಈಗ ಈ ವಿಚಾರವನ್ನೇ ಇಟ್ಟುಕೊಂಡು ಮೆಹಬೂಬಾ ಮುಫ್ತಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ದಸರಾ ವಿಶೇಷ ಕೊಡುಗೆ; ನಾರಾಯಣ ಹೃದಯಾಲಯದಿಂದ ಮೈಸೂರಿನಲ್ಲಿ ಒಂದು ಸಾವಿರ ಜನರಿಗೆ ಉಚಿತ ಲಸಿಕೆ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ