AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ದಿ ಕಾಶ್ಮೀರ್ ಫೈಲ್ಸ್ ಚಿತ್ರ ಬಗ್ಗೆ ಒಬ್ಬರು ಮಾತಾಡಿದ್ದಾರೆ: ಲ್ಯಾಪಿಡ್ ಹೇಳಿಕೆಗೆ ಸಹಮತ ಸೂಚಿಸಿದ ಮೆಹಬೂಬಾ ಮುಫ್ತಿ

ಅಂತಿಮವಾಗಿ ಯಾರೋ ಒಬ್ಬರು ಕಾಶ್ಮೀರಿ ಫೈಲ್ಸ್ ಚಿತ್ರವನ್ನು ಆಡಳಿತ ಪಕ್ಷವು ಮುಸ್ಲಿಮರನ್ನು ರಾಕ್ಷಸರನ್ನಾಗಿ ತೋರಿಸಲು ಮತ್ತು ಪಂಡಿತರು- ಮುಸ್ಲಿಮರ ನಡುವಿನ ಕಂದಕವನ್ನು ವಿಸ್ತರಿಸಲು ಪ್ರಚಾರ ಮಾಡಿದ ವಸ್ತು ಎಂದು ಕರೆದಿದ್ದಾರೆ ಎಂದು ಮುಫ್ತಿ ಹೇಳಿದ್ದಾರೆ.

ಕೊನೆಗೂ ದಿ ಕಾಶ್ಮೀರ್ ಫೈಲ್ಸ್ ಚಿತ್ರ ಬಗ್ಗೆ ಒಬ್ಬರು ಮಾತಾಡಿದ್ದಾರೆ: ಲ್ಯಾಪಿಡ್ ಹೇಳಿಕೆಗೆ ಸಹಮತ ಸೂಚಿಸಿದ ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Nov 30, 2022 | 7:53 PM

Share

ಶ್ರೀನಗರ:  ಪಿಡಿಪಿ ಮುಖ್ಯಸ್ಥೆ ಮತ್ತು ಜಮ್ಮು ಮತ್ತು ಕಾಶ್ಮೀರದ(Jammu and Kashmir) ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ (Mehbooba Mufti) ಬುಧವಾರ ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಾದವ್ ಲ್ಯಾಪಿಡ್ (Nadav Lapid) ಬಾಲಿವುಡ್  ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಬಗ್ಗೆ ಮಾಡಿದ ಟೀಕೆಯನ್ನು ಅನುಮೋದಿಸಿದ್ದಾರೆ. ಈ ಸಿನಿಮಾ “ಮುಸ್ಲಿಮರನ್ನು, ವಿಶೇಷವಾಗಿ ಕಾಶ್ಮೀರಿಗಳನ್ನು ರಾಕ್ಷಸರನ್ನಾಗಿಸಲು ಆಡಳಿತ ಪಕ್ಷವು ಮಾಡಿದ ಪ್ರಚಾರ ಎಂದು ಮುಫ್ತಿ ಹೇಳಿದ್ದಾರೆ. ಗೋವಾದಲ್ಲಿ ನಡೆದ ಭಾರತದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತೀರ್ಪುಗಾರರ ನೇತೃತ್ವ ವಹಿಸಿದ್ದ ಇಸ್ರೇಲಿ ಚಲನಚಿತ್ರ ನಿರ್ಮಾಪಕ ಲ್ಯಾಪಿಡ್, ಸೋಮವಾರದ ಸಮಾರೋಪ ಸಮಾರಂಭದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಒಂದು “ಪ್ರಚಾರದ ಚಲನಚಿತ್ರ” ಎಂದು ಹೇಳಿದ್ದಾರೆ. ಇದು ಚಲನಚಿತ್ರೋತ್ಸವಕ್ಕೆ ಆಯ್ಕೆ ಆಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದು ಸಾಮಾಜಿಕ ಮಾಧ್ಯಮದಲ್ಲಿ ಟೀಕೆ ಮತ್ತು ಆಕ್ರೋಶಕ್ಕೆ ಕಾರಣವಾಯಿತು. ಅಂತಿಮವಾಗಿ ಯಾರೋ ಒಬ್ಬರು ಕಾಶ್ಮೀರಿ ಫೈಲ್ಸ್ ಚಿತ್ರವನ್ನು ಆಡಳಿತ ಪಕ್ಷವು ಮುಸ್ಲಿಮರನ್ನು ರಾಕ್ಷಸರನ್ನಾಗಿ ತೋರಿಸಲು ಮತ್ತು ಪಂಡಿತರು- ಮುಸ್ಲಿಮರ ನಡುವಿನ ಕಂದಕವನ್ನು ವಿಸ್ತರಿಸಲು ಪ್ರಚಾರ ಮಾಡಿದ ವಸ್ತು ಎಂದು ಕರೆದಿದ್ದಾರೆ. ಸತ್ಯವನ್ನು ಮೌನಗೊಳಿಸಲು ರಾಜತಾಂತ್ರಿಕ ಮಾರ್ಗಗಳನ್ನು ಈಗ ಬಳಸಲಾಗುತ್ತಿದೆ ಎಂದು ಮುಫ್ತಿ ಟ್ವೀಟ್ ಮಾಡಿದ್ದಾರೆ.

ಮಂಗಳವಾರದ ಟ್ವಿಟರ್‌ನಲ್ಲಿ ಲ್ಯಾಪಿಡ್‌ನ ಹೆಸರು ಟ್ರೆಂಡಿಂಗ್‌ನಲ್ಲಿತ್ತು. ಹಲವಾರು ಬಳಕೆದಾರರು ಕಾಶ್ಮೀರದಿಂದ ಹಿಂದೂಗಳ ವಲಸೆಯ ಚಿತ್ರಣವನ್ನು ಲ್ಯಾಪಿಡ್ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವಿಷಯದಲ್ಲಿ ಭಾರತ, ಶ್ರೀಲಂಕಾ ಮತ್ತು ಭೂತಾನ್‌ಗೆ ಇಸ್ರೇಲ್‌ನ ರಾಯಭಾರಿ ನೌರ್ ಗಿಲೋನ್ ಟ್ವಿಟರ್‌ನಲ್ಲಿ ಕ್ಷಮೆಯಾಚಿಸಿದ್ದಾರೆ. “ಮನುಷ್ಯನಾಗಿ ನಾನು ನಾಚಿಕೆಪಡುತ್ತೇನೆ. ನಮ್ಮ ಆತಿಥೇಯರ ಉದಾರತೆ ಮತ್ತು ಸ್ನೇಹಕ್ಕಾಗಿ ನಾವು ತಿರುಗಿ ನೀಡಿದ ಕೆಟ್ಟ ವಿಧಾನಕ್ಕಾಗಿ ಕ್ಷಮೆಯಾಚಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.ಏತನ್ಮಧ್ಯೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಹಿಂಪಡೆಯಲು ಮುಫ್ತಿಗೆ ದೆಹಲಿ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.

2021ರ ಮಾರ್ಚ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಪರ ಹಾಜರಿದ್ದ ವಕೀಲರು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ಪೀಠಕ್ಕೆ ತಿಳಿಸಿದ್ದಾರೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ತನಗೆ ನೀಡಿದ ಸಮನ್ಸ್ ಅನ್ನು ಪ್ರಶ್ನಿಸಿ ಅರ್ಜಿಯು ನ್ಯಾಯಾಲಯವು ಈ ಹಿಂದೆ ನಿರಾಕರಿಸಿದ್ದಕ್ಕೆ ತಡೆ ನೀಡುವಂತೆ ಕೋರಿದೆ.

Published On - 7:49 pm, Wed, 30 November 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!