AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವೆ: ಮೆಹಬೂಬಾ ಮುಫ್ತಿ

ಇಂದು ಕಾಶ್ಮೀರದಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಗೆ ಸೇರಲು ನನ್ನನ್ನು ಔಪಚಾರಿಕವಾಗಿ ಆಹ್ವಾನಿಸಲಾಗಿದೆ. ಅವರ ಅದಮ್ಯ ಧೈರ್ಯಕ್ಕೆ ವಂದನೆಗಳು ಮತ್ತು ಫ್ಯಾಸಿಸ್ಟ್ ಶಕ್ತಿಗಳಿಗೆ ಸವಾಲು ಹಾಕುವ ಧೈರ್ಯವಿರುವವರೊಂದಿಗೆ ನಿಲ್ಲುವುದು ನನ್ನ ಕರ್ತವ್ಯ ಎಂದು ನಾನು ನಂಬುತ್ತೇನೆ ಎಂದ ಮುಫ್ತಿ.

ಜಮ್ಮು ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವೆ: ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
TV9 Web
| Edited By: |

Updated on:Dec 27, 2022 | 8:05 PM

Share

ಶ್ರೀನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ (Bharat Jodo Yatra) ಯಾತ್ರೆ ಕಾಶ್ಮೀರಕ್ಕೆ ಬಂದಾಗ ಅದರಲ್ಲಿ ತಾನು ಭಾಗವಹಿಸುವುದಾಗಿ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ (Mehbooba Mufti) ಮಂಗಳವಾರ ಹೇಳಿದ್ದಾರೆ. ಇಂದು ಕಾಶ್ಮೀರದಲ್ಲಿ ರಾಹುಲ್ ಗಾಂಧಿ (Rahul Gandhi) ಅವರ ಭಾರತ್ ಜೋಡೋ ಯಾತ್ರೆಗೆ ಸೇರಲು ನನ್ನನ್ನು ಔಪಚಾರಿಕವಾಗಿ ಆಹ್ವಾನಿಸಲಾಗಿದೆ. ಅವರ ಅದಮ್ಯ ಧೈರ್ಯಕ್ಕೆ ವಂದನೆಗಳು ಮತ್ತು ಫ್ಯಾಸಿಸ್ಟ್ ಶಕ್ತಿಗಳಿಗೆ ಸವಾಲು ಹಾಕುವ ಧೈರ್ಯವಿರುವವರೊಂದಿಗೆ ನಿಲ್ಲುವುದು ನನ್ನ ಕರ್ತವ್ಯ ಎಂದು ನಾನು ನಂಬುತ್ತೇನೆ. ಉತ್ತಮ ಭಾರತದತ್ತ ಅವರ ನಡಿಗೆಯಲ್ಲಿ ಅವರೊಂದಿಗೆ ಸೇರಿಕೊಳ್ಳುತ್ತೇನೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಟ್ವೀಟ್‌ನಲ್ಲಿ ಮಾಡಿದ್ದಾರೆ.ನ್ಯಾಷನಲ್ ಕಾನ್ಫರೆನ್ಸ್ (NC) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಕೂಡಾ ಭಾರತ್ ಜೋಡೋ ಯಾತ್ರೆ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವೇಶಿಸಿದಾಗ ಅದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಪ್ರಜ್ಞಾ ಠಾಕೂರ್ ಹೇಳಿಕೆಯಿಂದ ಅಚ್ಚರಿಗೊಂಡಿಲ್ಲ: ಮುಫ್ತಿ

ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರು ಯಾವುದೇ ದಾಳಿಗೆ ಪ್ರತಿಕ್ರಿಯಿಸಲು ಕನಿಷ್ಠ ಅಡುಗೆಮನೆಯ ಚಾಕುಗಳನ್ನು “ತೀಕ್ಷ್ಣವಾಗಿ” ಇಟ್ಟುಕೊಳ್ಳುವಂತೆ ಹಿಂದೂಗಳಿಗೆ ಸೂಚಿಸಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಫ್ತಿ ಇದನ್ನು ಕೇಳಿ “ಶಾಕ್ ಆಐಗ್ಲ್ಲ ” ಎಂದು ಹೇಳಿದ್ದಾರೆ.

ಭಾನುವಾರ ಕರ್ನಾಟಕದ ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತದ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಭೋಪಾಲ್‌ನ ಬಿಜೆಪಿ ಸಂಸದರು, “ನಮ್ಮ ಮನೆಗೆ ನುಸುಳುವವರಿಗೆ” ತಕ್ಕ ಉತ್ತರ ನೀಡುವಂತೆ ತಮ್ಮ ಸಭಿಕರಿಗೆ ಹೇಳಿದರು.

ಇದನ್ನೂ ಓದಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ: ಯುಪಿ ಸರ್ಕಾರದ ಕರಡು ಅಧಿಸೂಚನೆಯನ್ನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

“ನಿಮ್ಮ ಮನೆಯಲ್ಲಿ ಆಯುಧಗಳನ್ನು ಇಟ್ಟುಕೊಳ್ಳಿ, ಏನಿಲ್ಲವೆಂದರೂ, ತರಕಾರಿಗಳನ್ನು ಕತ್ತರಿಸಲು ಬಳಸುತ್ತಿದ್ದ ಕನಿಷ್ಠ ಚಾಕುಗಳು ಹರಿತವಾದವು…ಯಾವಾಗ ಯಾವ ಪರಿಸ್ಥಿತಿ ಬರುತ್ತದೋ ಗೊತ್ತಿಲ್ಲ….ಎಲ್ಲರಿಗೂ ಆತ್ಮರಕ್ಷಣೆ ಹಕ್ಕಿದೆ.ನಮ್ಮ ಮನೆಗೆ ಯಾರಾದರೂ ನುಸುಳಿದರೆ, ನಮ್ಮ ಮೇಲೆ ದಾಳಿ ಮಾಡುತ್ತಾರೆ, ಅದಕ್ಕೆ ತಕ್ಕ ಉತ್ತರ ನೀಡುವುದು ನಮ್ಮ ಹಕ್ಕು,” ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

Published On - 7:59 pm, Tue, 27 December 22

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ