AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದರ ಬೆನ್ನಿಗೆ ಮತ್ತೊಂದು ಭಯಹುಟ್ಟಿಸುವ ಘಟನೆ; ಹೆದರಿ ಠಾಣೆಯಲ್ಲೇ ಶಾಂತಿಪೂಜೆ ಮಾಡಿಸಿದ ಪೊಲೀಸರು

ಇತ್ತೀಚೆಗೆ ಈ ಠಾಣೆಯಲ್ಲಿ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಕಾನ್​ಸ್ಟೆಬಲ್​ವೊಬ್ಬರಿಗೆ ಹಾವು ಕಚ್ಚಿತ್ತು. ಕಳೆದ ಈ ಠಾಣೆಯ ವ್ಯಾಪ್ತಿಯಲ್ಲೇ ಇಬ್ಬರು ಹುಡುಗಿಯರನ್ನು ಅಪಹರಣ ಮಾಡಲಾಗಿತ್ತು

ಒಂದರ ಬೆನ್ನಿಗೆ ಮತ್ತೊಂದು ಭಯಹುಟ್ಟಿಸುವ ಘಟನೆ; ಹೆದರಿ ಠಾಣೆಯಲ್ಲೇ ಶಾಂತಿಪೂಜೆ ಮಾಡಿಸಿದ ಪೊಲೀಸರು
ಪೊಲೀಸ್​ ಠಾಣೆಯಲ್ಲಿ ನಡೆದ ಶಾಂತಿ ಪೂಜೆ
TV9 Web
| Updated By: Lakshmi Hegde|

Updated on:Mar 09, 2022 | 11:36 AM

Share

ಆಂಧ್ರಪ್ರದೇಶದ ಕರ್ನೂಲ್​ ಜಿಲ್ಲೆಯ ಅಲ್ಲಗಡ್ಡಾ ಪಟ್ಟಣದಲ್ಲಿರುವ ಪೊಲೀಸರು ಠಾಣೆಯಲ್ಲಿಯೇ ಭಾನುವಾರ ಶಾಂತಿಪೂಜೆ ಮಾಡಿಸಿದ್ದಾರೆ. ಈ ಪೂಜೆಯ ವಿಡಿಯೋ, ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಠಾಣೆಯಲ್ಲಿ, ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇತ್ತೀಚೆಗೆ ಅಪಶಕುನದ, ಭಯಹುಟ್ಟಿಸುವ ಕೆಲವು ಘಟನೆಗಳು ನಡೆಯುತ್ತಿದೆ. ಅವುಗಳನ್ನು ತಡೆಗಟ್ಟುವ ಸಲುವಾಗಿ ಈ ಶಾಂತಿ ಪೂಜೆ ಮಾಡಿಸಲಾಗಿದೆ ಎಂದು ಹೇಳಲಾಗಿದೆ.  ಪುರೋಹಿತರನ್ನು ಠಾಣೆಗೆ ಕರೆಸಿ ಪೂಜೆ ಮಾಡಿಸಲಾಗಿದೆ. ಪುರೋಹಿತರು ಮಂತ್ರ ಹೇಳುತ್ತಿರುವ, ಪೊಲೀಸರು ಕೈಮುಗಿದು ನಿಂತಿರುವ, ಕೊನೆಯಲ್ಲಿ ತೀರ್ಥ-ಪ್ರಸಾದ ತೆಗೆದುಕೊಂಡ ದೃಶ್ಯಗಳನ್ನು ವಿಡಿಯೋದಲ್ಲಿ ನೋಡಬಹುದು.

ಇತ್ತೀಚೆಗೆ ಈ ಠಾಣೆಯಲ್ಲಿ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಕಾನ್​ಸ್ಟೆಬಲ್​ವೊಬ್ಬರಿಗೆ ಹಾವು ಕಚ್ಚಿತ್ತು. ಕಳೆದ ಈ ಠಾಣೆಯ ವ್ಯಾಪ್ತಿಯಲ್ಲೇ ಇಬ್ಬರು ಹುಡುಗಿಯರನ್ನು ಅಪಹರಣ ಮಾಡಲಾಗಿತ್ತು. ರಸ್ತೆ ಅಪಘಾತವೂ ನಡೆದಿತ್ತು. ಪಡಕಂಡ್ಲ ಬಳಿ ವ್ಯಕ್ತಿಯೊಬ್ಬ ಹಲವು ಜನರ ಮೇಲೆ ದಾಳಿ ನಡೆಸಿ, ಗಾಯಗೊಳಿಸಿದ್ದ. ಈ ಪ್ರದೇಶಗಳಲ್ಲಿ ರಾಜಕೀಯ ದ್ವೇಷದ ಪ್ರಕರಣಗಳೂ ಹೆಚ್ಚುತ್ತಿವೆ.  ಹೀಗೆ ಕಳೆದ ಕೆಲವುದಿನಗಳಿಂದಲೂ ಒಂದಲ್ಲ ಒಂದು ಕೇಸ್​ಗಳು ನಡೆಯುತ್ತಲೇ ಇವೆ. ಅದೆಲ್ಲ ಪರಿಹಾರವಾಗಲಿ ಎಂಬ ಕಾರಣಕ್ಕೆ ಪೊಲೀಸರು ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಈ ಭಾಗದಲ್ಲಿ ಏನೋ ಅಗೋಚರ ಕೆಟ್ಟ ಶಕ್ತಿಯೊಂದು ಪ್ರಭಾವ ಬೀರಿದೆ ಎಂಬ ಮಾತುಗಳೂ ಹೆಚ್ಚಾಗಿದ್ದವು. ಹಾಗಾಗಿ ಸ್ಥಳೀಯ ಪುರೋಹಿತರನ್ನು ಠಾಣೆಗೆ ಕರೆಸಿ ಪೂಜೆ ನೆರವೇರಿಸಲಾಗಿದೆ. ಠಾಣೆಯ ಎಲ್ಲ ಸಿಬ್ಬಂದಿಯೂ ಇದರಲ್ಲಿ ಪಾಲ್ಗೊಂಡಿದ್ದರು. ಪೊಲೀಸ್​ ಸ್ಟೇಶನ್​ನಲ್ಲಿ ನಡೆದ ಪೂಜೆಯ ಬಗ್ಗೆ ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನು ಈ ಬಗ್ಗೆ ಹಿರಿಯ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆಯನ್ನೂ ನೀಡುತ್ತಿಲ್ಲ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

Puja in Andhra Pradesh

ಆಂಧ್ರಪ್ರದೇಶ ಠಾಣೆಯಲ್ಲಿ ಪೂಜೆ

ಇದನ್ನೂ ಓದಿ: ಮಂಡ್ಯ: ಗ್ರಾಮದೇವತೆ ಹಬ್ಬದಲ್ಲಿ ಅಶ್ಲೀಲ ನೃತ್ಯ! ವೇದಿಕೆಯಲ್ಲಿ ಬಾಲಕನಿಗೆ ಮುತ್ತಿಟ್ಟ ಮಹಿಳಾ ನೃತ್ಯಗಾರರು

Published On - 11:32 am, Wed, 9 March 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!